“ಮನೆ ಬಾಗಿಲಿಗೇ ಮಾಸಾಶನ”: ‘ನವೋದಯ’ ಆ್ಯಪ್ ಮತ್ತು ತಂತ್ರಾಂಶ ಮುಖ್ಯಮಂತ್ರಿ ಲೋಕಾರ್ಪಣೆ’

ಬೆಂಗಳೂರು: ‘ಮನೆ ಬಾಗಿಲಿಗೇ ಮಾಸಾಶನ’ ಅಭಿಯಾನದ ಮೂಲಕ ಫಲಾನುಭವಿಗಳ ಮನೆಗೆ ಪಿಂಚಣಿ ತಲುಪಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.

ಅರ್ಹ ಫಲಾನುಭವಿಗಳನ್ನು ‘ನವೋದಯ’ ಆ್ಯಪ್ ಮತ್ತು ತಂತ್ರಾಂಶದಲ್ಲಿ ಗುರುತಿಸಿ, ಅವರ ಮನೆ ಬಾಗಿಲಲ್ಲೇ ಪಿಂಚಣಿ ಮಂಜೂರಾತಿ ಮಾಡುವ ಅಭಿಯಾನ‌ಕ್ಕೆ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಬುಧವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ‘ಮಧ್ಯವರ್ತಿಗಳ ಹಾವಳಿ ಇಲ್ಲದೆ ಸರ್ಕಾರದ ಯೋಜನೆಗಳು ಜನರಿಗೆ ತಲುಪಬೇಕು. ಇದು ಪ್ರಧಾನಿ ನರೇಂದ್ರ ಮೋದಿಯವರ ಆಶಯ ಕೂಡ. ಇಷ್ಟು ದಿನ ಪಿಂಚಣಿಗಾಗಿ ಫಲಾನುಭವಿಗಳು ತುಂಬಾ ಕಷ್ಟ ಪಡುತ್ತಿದ್ದರು. ಇದೀಗ ಅದನ್ನು ತಪ್ಪಿಸಲು ಸರ್ಕಾರ ಮಹತ್ವದ ಯೋಜನೆ ಜಾರಿ ಮಾಡಿದೆ’ ಎಂದರು.

‘ಪಿಂಚಣಿಗಾಗಿ ಜನರು ಸರ್ಕಾರಿ ಕಚೇರಿಗೆ ಹೋಗಿ, ಅಧಿಕಾರಿಗಳ ಬಳಿ ಕೈ ಕಟ್ಟಿ ನಿಲ್ಲುವ ಪರಿಸ್ಥಿತಿ ಇತ್ತು. ಅದೆಲ್ಲವನ್ನೂ ತಪ್ಪಿಸಲು ಈ ಯೋಜನೆ ಸಹಕಾರಿಯಾಗಲಿದೆ. ಇನ್ನು ಮುಂದೆ ಮಧ್ಯವರ್ತಿಗಳು ಇಲ್ಲದೇ, ಅರ್ಹ ಫಲಾನುಭವಿಗಳಿಗೆ ಪಿಂಚಣಿ ನೇರವಾಗಿ ಅವರ ಬ್ಯಾಂಕ್‌ ಖಾತೆಗೆ ತಲುಪಲಿದೆ’ ಎಂದರು.

‘ಮೊದಲ ಹಂತದಲ್ಲಿ ವೃದ್ಧಾಪ್ಯ ವರ್ಗಕ್ಕೆ ಯೋಜನೆ ಜಾರಿ ಮಾಡಲಾಗಿದೆ. ಎರಡನೇ ಹಂತದಲ್ಲಿ ವಿಧವೆಯರು, ಅಂಗವಿಕಲರು ಸೇರಿದಂತೆ ಉಳಿದ ಎಲ್ಲ ಪಿಂಚಣಿದಾರರಿಗೆ ಜಾರಿ ಮಾಡಲು ಕ್ರಮ ವಹಿಸುತ್ತೇವೆ’ ಎಂದರು.

ಕಂದಾಯ ಸಚಿವ ಆರ್. ಅಶೋಕ ಮಾತನಾಡಿ, ‘ಈ ವ್ಯವಸ್ಥೆಯಿಂದ ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ಸರಳವಾಗಿ ಪಿಂಚಣಿ ಬರಲಿದೆ. ಇಷ್ಟು ವರ್ಷದಲ್ಲಿ ಈ ಯೋಜನೆ ಯಾಕೆ ಜಾರಿಗೆ ತಂದಿಲ್ಲ ಎಂದು ಆಶ್ಚರ್ಯವಾಗಿದೆ. ಹಿಂದಿನ ಸರ್ಕಾರ ಈ ಯೋಜನೆಯನ್ನು ಜಾರಿಗೆ ತರಬೇಕಿತ್ತು. ಆದರೆ, ಅವರು ಅದರ ಕಡೆ ಗಮನಹರಿಸಿಲ್ಲ. ಈಗ ನಾವು ಜಾರಿಗೆ ತಂದಿದ್ದೇವೆ’ ಎಂದರು.

‘ಈ ಯೋಜನೆಯಿಂದ ಮಧ್ಯವರ್ತಿಗಳ ಹಾವಳಿ ತಪ್ಪಲಿದೆ. ಇನ್ನು ಮುಂದೆ ಅರ್ಹತೆ ಇಲ್ಲದವರಿಗೆ ಪಿಂಚಣಿ ಸಿಗುವುದಿಲ್ಲ. ಆಧಾರ್‌ ಲಿಂಕ್ ಮಾಡುವುದರಿಂದ ಸರಳವಾಗಿ ಪಿಂಚಣಿ ವಿತರಣೆ ಸಾಧ್ಯವಾಗಲಿದೆ. ಅಲ್ಲದೆ, ಅಂಚೆ ಕಚೇರಿ ಮೂಲಕ ಪಿಂಚಣಿ ಬಟವಾಡೆ ಇರುವುದಿಲ್ಲ. ನೇರವಾಗಿ ಬ್ಯಾಂಕ್ ಖಾತೆಗೆ ಪಿಂಚಣಿ ಹಣ ಜಮೆ ಆಗಲಿದೆ’ ಎಂದರು.

‘ಉಡುಪಿ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ ಪ್ರಾಯೋಗಿಕವಾಗಿ ಜಾರಿ ಮಾಡಿದ್ದೇವೆ. ಅದು ಯಶಸ್ವಿಯಾದ ಬಳಿಕ ರಾಜ್ಯದಾದ್ಯಂತ ಜಾರಿ ಮಾಡುತ್ತಿದ್ದೇವೆ. ಹೊಸ ತಂತ್ರಜ್ಞಾನದ ಮೂಲಕ ಪಿಂಚಣಿ ವಿತರಿಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ’ ಎಂದರು.

‘ಇಷ್ಟು ದಿನ ಒಬ್ಬ 40–50 ಪಿಂಚಣಿದಾರರ ಕಾರ್ಡ್ ಪಡೆದು ಮಧ್ಯವರ್ತಿ ವಂಚನೆ ಮಾಡುತ್ತಿದ್ದ. ಇನ್ನು ಮುಂದೆ ಮಧ್ಯವರ್ತಿಗಳ ಹಾವಳಿ ಇರುವುದಿಲ್ಲ. ಒಬ್ಬರಿಗೆ ಒಂದೇ ಪಿಂಚಣಿ ಸಿಗುವ ವ್ಯವಸ್ಥೆ ಮಾಡುತ್ತಿದ್ದೇವೆ’ ಎಂದರು.

ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಜೀವರಾಜ್, ವಿಧಾನಪರಿಷತ್ ಸದಸ್ಯ ರಮೇಶ್ ಗೌಡ ಇದ್ದರು.

Spread the love
  • Related Posts

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    ಬೆಳ್ತಂಗಡಿ: ಬೆಳ್ತಂಗಡಿ ಪಿ.ಎಂ.ಶ್ರೀ ಮಾದರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ (50ವ) ಅವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಜೂ 12ರಂದು ನಿಧನರಾದರು. ಒರ್ವ ಅದ್ಭುತ ಕಬಡ್ಡಿ ತೀರ್ಪುಗಾರರಾಗಿ, ತರಬೇತುದಾರರಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ…

    Spread the love

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ನವದೆಹಲಿ: ನವದಹೆಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ…

    Spread the love

    You Missed

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    • By admin
    • June 12, 2026
    • 71 views
    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ,  ಅಖಿಲ್ ಕುಮಾರ್ ವಿಧಿವಶ

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    • By admin
    • June 11, 2026
    • 34 views
    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    • By admin
    • June 10, 2026
    • 51 views
    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    • By admin
    • June 9, 2026
    • 100 views
    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ  ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    • By admin
    • June 9, 2026
    • 43 views
    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 195 views