Dj ಹಳ್ಳಿ KJ ಹಳ್ಳಿ ಮಾದರಿಯಲ್ಲಿ ಪೋಲೀಸ್ ಠಾಣೆ, ಆಸ್ಪತ್ರೆಯ ಮೇಲೆ ದಾಳಿ ಹುಬ್ಬಳ್ಳಿಯಲ್ಲಿ ನಡೆದ ಘಟನೆ! ಪೋಲೀಸರಿಂದ ಲಾಠಿಚಾರ್ಜ್ ಗಾಳಿಯಲ್ಲಿ ಗುಂಡು, ನಿಷೇದಾಜ್ಞೆ ಹೇರಿಕೆ! ಬೂದಿ ಮುಚ್ಚಿದ ಕೆಂಡದಂತಿರುವ ಹುಬ್ಬಳ್ಳಿ!

ಹುಬ್ಬಳ್ಳಿ: ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ ಹಾಕಿರುವ ವಿಚಾರವಾಗಿ ಹಳೇ ಹುಬ್ಬಳ್ಳಿ ಪ್ರದೇಶದಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ ಸಂಭವಿಸಿದೆ. ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಹಾಗೂ ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. ಘಟನೆಯಲ್ಲಿ ಇನ್‌ಸ್ಪೆಕ್ಟರ್‌ ಸೇರಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಭಾರೀ ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ನಗರದಲ್ಲಿ 144 ಸೆಕ್ಷನ್‌ ಜಾರಿಯಾಗಿದ್ದು, ದ್ವೇಷಮಯ ವಾತಾವರಣ ಉಂಟಾಗಿದೆ.

ರಾಜ್ಯದಲ್ಲಿ ಕಳೆದ ಮೂರು ತಿಂಗಳಿಂದ ಕೋಮು ದ್ವೇಷದ ಗಲಾಟೆ ನಡೆಯುತ್ತಿದ್ದರೂ ಶಾಂತವಾಗಿದ್ದ ಹುಬ್ಬಳ್ಳಿ ಶನಿವಾರ ರಾತ್ರಿ ಇದೇ ಕಾರಣಕ್ಕೆ ಪ್ರಕ್ಷುಬ್ಧವಾಗಿದೆ. ತಡರಾತ್ರಿ 1ಗಂಟೆವರೆಗೂ ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆಯ ಹಿಂಬಾಗದ ಪ್ರದೇಶದಲ್ಲಿ ಕಿಡಿಗೇಡಿಗಳು ಕಲ್ಲುತೂರಾಟ ಪ್ರತಿಭಟನೆ ಮುಂದುವರಿಸಿದ್ದರು. ಒಂದು ಹಂತಕ್ಕೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದರೂ ನಗರ ಬೂದಿ ಮುಚ್ಚಿದ ಕೆಂಡವಾಗಿದೆ.

ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಯ ಎದುರು ಕಾರವಾರ ರಸ್ತೆಯಲ್ಲಿ ಕಂಡ ಕಂಡ ವಾಹನಗಳಿಗೆ ಉದ್ರಿಕ್ತ ಜನರ ಗುಂಪು ಕಲ್ಲು ತೂರಾಟ ಮಾಡಿದರು. ಘಟನೆ ನಿಯಂತ್ರಣಕ್ಕಾಗಿ ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆಗೆ ಬರುತ್ತಿದ್ದ ಪೂರ್ವ ಸಂಚಾರಿ ಇನ್‌ಸ್ಪೆಕ್ಟರ್‌ ಕಾಡದೇವರಮಠ, ಕಾನ್‌ಸ್ಟೇಬಲ್‌ ಗುರುಪಾದಪ್ಪ ಸ್ವಾದಿ ಅವರ ಮೇಲೆ ಕಲ್ಲು ತೂರಾಟವಾಯಿತು. ಇಬ್ಬರೂ ಗಾಯಗೊಂಡಿದ್ದಾರೆ. ಕಾಡದೇವರಮಠ ಅವರನ್ನು ಸುಚಿರಾಯು ಆಸ್ಪತ್ರೆಗೆ ಸೇರಿಸಲಾಗಿದೆ. ಅಲ್ಲದೆ ಪೊಲೀಸ್‌ ಜೀಪನ್ನು ಅಡ್ಡಗೆಡವಿ ಧ್ವಂಸಗೊಳಿಸಿದ್ದಾರೆ.

ಇಷ್ಟಕ್ಕೆ ನಿಲ್ಲದೆ, ದಿಡ್ಡಿ ಓಣಿಯ ಗುರವ ಆಸ್ಪತ್ರೆಯೊಳಗೆ ನುಗ್ಗಿದ ಗುಂಪು ಅದನ್ನು ಸಹ ಧ್ವಂಸಗೊಳಿಸಿದೆ ಎನ್ನಲಾಗಿದೆ. ಕಲ್ಲು ತೂರಾಟದಲ್ಲಿ ಮೂರು ಪೊಲೀಸ್‌ ಜೀಪು, 10 ಸ್ಕೂಟರ್‌, ಬಸ್ಸು ಕಾರು ಸೇರಿ ಹಲವು ವಾಹನಗಳು ಜಖಂಗೊಂಡವು. ಪೊಲೀಸ್‌ ಠಾಣೆ, ಸನಿಹದ ಹಿಂದೂ ದೇಗುಲದ ಮೇಲೆಯೂ ಕಲ್ಲು ಎಸೆಯಲಾಗಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು(Police) ಗುಂಪು ಚದುರಿಸಲು ಮುಂದಾದರು. ಪರಿಸ್ಥಿತಿ ನಿಯಂತ್ರಣಕ್ಕಾಗಿ ಲಾಠಿ ಪ್ರಹಾರ ನಡೆಸಿದರು. ಅದಕ್ಕೂ ಬಗ್ಗದಿದ್ದಾಗ ಅಶ್ರುವಾಯು ಸಿಡಿಸಿದರು. ಆಗ ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆ ಎದುರಿದ್ದ ಒಂದಿಷ್ಟುಉದ್ರಿಕ್ತರು ಹಿಂಬಾಗಕ್ಕೆ ಓಡಿಹೋಗಿದ್ದಾರೆ. ಕಾರವಾರ ರಸ್ತೆಯನ್ನು ಬಂದ್‌ ಮಾಡಿ ಸಂಚಾರ ನಿಯಂತ್ರಣಕ್ಕೆ ತೆಗೆದುಕೊಳ್ಳಲಾಯಿತು. ಮುಂದುವರಿದು ಇಡಿ ನಗರಾದ್ಯಂತ ಪೊಲೀಸ್‌ ವಾಹನದ ಮೂಲಕ ಗಸ್ತು ತಿರುಗಿ 144 ಸೆಕ್ಷನ್‌ ಜಾರಿಯಾಗಿದ್ದು ಯಾವುದೆ ಕಾರಣಕ್ಕೂ ಅನಗತ್ಯ ಓಡಾಟ ಮಾಡದಂತೆ, ಒಬ್ಬರೇ ತಿರುಗಾಡದಂತೆ ಎಚ್ಚರಿಕೆ ನೀಡಿದರು.

ಪೊಲೀಸ್‌ ಆಯುಕ್ತ ಲಾಭುರಾಮ, ಡಿಸಿಪಿ ಸಾಹಿಲ್‌ ಬಾಗ್ಲಾ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಹೆಚ್ಚಿನ ಪೊಲೀಸ್‌ ಪಡೆಯೊಂದಿಗೆ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಮುಸಲ್ಮಾನ ಮುಖಂಡರನ್ನು ಕರೆದು ಸಮಾಧಾನ ಪಡಿಸಲು ಯತ್ನಿಸುತ್ತಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 55 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 93 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 40 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 608 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 148 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 62 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ