Dj ಹಳ್ಳಿ KJ ಹಳ್ಳಿ ಮಾದರಿಯಲ್ಲಿ ಪೋಲೀಸ್ ಠಾಣೆ, ಆಸ್ಪತ್ರೆಯ ಮೇಲೆ ದಾಳಿ ಹುಬ್ಬಳ್ಳಿಯಲ್ಲಿ ನಡೆದ ಘಟನೆ! ಪೋಲೀಸರಿಂದ ಲಾಠಿಚಾರ್ಜ್ ಗಾಳಿಯಲ್ಲಿ ಗುಂಡು, ನಿಷೇದಾಜ್ಞೆ ಹೇರಿಕೆ! ಬೂದಿ ಮುಚ್ಚಿದ ಕೆಂಡದಂತಿರುವ ಹುಬ್ಬಳ್ಳಿ!

ಹುಬ್ಬಳ್ಳಿ: ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ ಹಾಕಿರುವ ವಿಚಾರವಾಗಿ ಹಳೇ ಹುಬ್ಬಳ್ಳಿ ಪ್ರದೇಶದಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ ಸಂಭವಿಸಿದೆ. ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಹಾಗೂ ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. ಘಟನೆಯಲ್ಲಿ ಇನ್‌ಸ್ಪೆಕ್ಟರ್‌ ಸೇರಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಭಾರೀ ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ನಗರದಲ್ಲಿ 144 ಸೆಕ್ಷನ್‌ ಜಾರಿಯಾಗಿದ್ದು, ದ್ವೇಷಮಯ ವಾತಾವರಣ ಉಂಟಾಗಿದೆ.

ರಾಜ್ಯದಲ್ಲಿ ಕಳೆದ ಮೂರು ತಿಂಗಳಿಂದ ಕೋಮು ದ್ವೇಷದ ಗಲಾಟೆ ನಡೆಯುತ್ತಿದ್ದರೂ ಶಾಂತವಾಗಿದ್ದ ಹುಬ್ಬಳ್ಳಿ ಶನಿವಾರ ರಾತ್ರಿ ಇದೇ ಕಾರಣಕ್ಕೆ ಪ್ರಕ್ಷುಬ್ಧವಾಗಿದೆ. ತಡರಾತ್ರಿ 1ಗಂಟೆವರೆಗೂ ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆಯ ಹಿಂಬಾಗದ ಪ್ರದೇಶದಲ್ಲಿ ಕಿಡಿಗೇಡಿಗಳು ಕಲ್ಲುತೂರಾಟ ಪ್ರತಿಭಟನೆ ಮುಂದುವರಿಸಿದ್ದರು. ಒಂದು ಹಂತಕ್ಕೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದರೂ ನಗರ ಬೂದಿ ಮುಚ್ಚಿದ ಕೆಂಡವಾಗಿದೆ.

ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಯ ಎದುರು ಕಾರವಾರ ರಸ್ತೆಯಲ್ಲಿ ಕಂಡ ಕಂಡ ವಾಹನಗಳಿಗೆ ಉದ್ರಿಕ್ತ ಜನರ ಗುಂಪು ಕಲ್ಲು ತೂರಾಟ ಮಾಡಿದರು. ಘಟನೆ ನಿಯಂತ್ರಣಕ್ಕಾಗಿ ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆಗೆ ಬರುತ್ತಿದ್ದ ಪೂರ್ವ ಸಂಚಾರಿ ಇನ್‌ಸ್ಪೆಕ್ಟರ್‌ ಕಾಡದೇವರಮಠ, ಕಾನ್‌ಸ್ಟೇಬಲ್‌ ಗುರುಪಾದಪ್ಪ ಸ್ವಾದಿ ಅವರ ಮೇಲೆ ಕಲ್ಲು ತೂರಾಟವಾಯಿತು. ಇಬ್ಬರೂ ಗಾಯಗೊಂಡಿದ್ದಾರೆ. ಕಾಡದೇವರಮಠ ಅವರನ್ನು ಸುಚಿರಾಯು ಆಸ್ಪತ್ರೆಗೆ ಸೇರಿಸಲಾಗಿದೆ. ಅಲ್ಲದೆ ಪೊಲೀಸ್‌ ಜೀಪನ್ನು ಅಡ್ಡಗೆಡವಿ ಧ್ವಂಸಗೊಳಿಸಿದ್ದಾರೆ.

ಇಷ್ಟಕ್ಕೆ ನಿಲ್ಲದೆ, ದಿಡ್ಡಿ ಓಣಿಯ ಗುರವ ಆಸ್ಪತ್ರೆಯೊಳಗೆ ನುಗ್ಗಿದ ಗುಂಪು ಅದನ್ನು ಸಹ ಧ್ವಂಸಗೊಳಿಸಿದೆ ಎನ್ನಲಾಗಿದೆ. ಕಲ್ಲು ತೂರಾಟದಲ್ಲಿ ಮೂರು ಪೊಲೀಸ್‌ ಜೀಪು, 10 ಸ್ಕೂಟರ್‌, ಬಸ್ಸು ಕಾರು ಸೇರಿ ಹಲವು ವಾಹನಗಳು ಜಖಂಗೊಂಡವು. ಪೊಲೀಸ್‌ ಠಾಣೆ, ಸನಿಹದ ಹಿಂದೂ ದೇಗುಲದ ಮೇಲೆಯೂ ಕಲ್ಲು ಎಸೆಯಲಾಗಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು(Police) ಗುಂಪು ಚದುರಿಸಲು ಮುಂದಾದರು. ಪರಿಸ್ಥಿತಿ ನಿಯಂತ್ರಣಕ್ಕಾಗಿ ಲಾಠಿ ಪ್ರಹಾರ ನಡೆಸಿದರು. ಅದಕ್ಕೂ ಬಗ್ಗದಿದ್ದಾಗ ಅಶ್ರುವಾಯು ಸಿಡಿಸಿದರು. ಆಗ ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆ ಎದುರಿದ್ದ ಒಂದಿಷ್ಟುಉದ್ರಿಕ್ತರು ಹಿಂಬಾಗಕ್ಕೆ ಓಡಿಹೋಗಿದ್ದಾರೆ. ಕಾರವಾರ ರಸ್ತೆಯನ್ನು ಬಂದ್‌ ಮಾಡಿ ಸಂಚಾರ ನಿಯಂತ್ರಣಕ್ಕೆ ತೆಗೆದುಕೊಳ್ಳಲಾಯಿತು. ಮುಂದುವರಿದು ಇಡಿ ನಗರಾದ್ಯಂತ ಪೊಲೀಸ್‌ ವಾಹನದ ಮೂಲಕ ಗಸ್ತು ತಿರುಗಿ 144 ಸೆಕ್ಷನ್‌ ಜಾರಿಯಾಗಿದ್ದು ಯಾವುದೆ ಕಾರಣಕ್ಕೂ ಅನಗತ್ಯ ಓಡಾಟ ಮಾಡದಂತೆ, ಒಬ್ಬರೇ ತಿರುಗಾಡದಂತೆ ಎಚ್ಚರಿಕೆ ನೀಡಿದರು.

ಪೊಲೀಸ್‌ ಆಯುಕ್ತ ಲಾಭುರಾಮ, ಡಿಸಿಪಿ ಸಾಹಿಲ್‌ ಬಾಗ್ಲಾ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಹೆಚ್ಚಿನ ಪೊಲೀಸ್‌ ಪಡೆಯೊಂದಿಗೆ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಮುಸಲ್ಮಾನ ಮುಖಂಡರನ್ನು ಕರೆದು ಸಮಾಧಾನ ಪಡಿಸಲು ಯತ್ನಿಸುತ್ತಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

Spread the love
  • Related Posts

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

    Spread the love

    You Missed

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 6 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 6 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 11 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 8 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 10 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ