Dj ಹಳ್ಳಿ KJ ಹಳ್ಳಿ ಮಾದರಿಯಲ್ಲಿ ಪೋಲೀಸ್ ಠಾಣೆ, ಆಸ್ಪತ್ರೆಯ ಮೇಲೆ ದಾಳಿ ಹುಬ್ಬಳ್ಳಿಯಲ್ಲಿ ನಡೆದ ಘಟನೆ! ಪೋಲೀಸರಿಂದ ಲಾಠಿಚಾರ್ಜ್ ಗಾಳಿಯಲ್ಲಿ ಗುಂಡು, ನಿಷೇದಾಜ್ಞೆ ಹೇರಿಕೆ! ಬೂದಿ ಮುಚ್ಚಿದ ಕೆಂಡದಂತಿರುವ ಹುಬ್ಬಳ್ಳಿ!

ಹುಬ್ಬಳ್ಳಿ: ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ ಹಾಕಿರುವ ವಿಚಾರವಾಗಿ ಹಳೇ ಹುಬ್ಬಳ್ಳಿ ಪ್ರದೇಶದಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ ಸಂಭವಿಸಿದೆ. ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಹಾಗೂ ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. ಘಟನೆಯಲ್ಲಿ ಇನ್‌ಸ್ಪೆಕ್ಟರ್‌ ಸೇರಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಭಾರೀ ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ನಗರದಲ್ಲಿ 144 ಸೆಕ್ಷನ್‌ ಜಾರಿಯಾಗಿದ್ದು, ದ್ವೇಷಮಯ ವಾತಾವರಣ ಉಂಟಾಗಿದೆ.

ರಾಜ್ಯದಲ್ಲಿ ಕಳೆದ ಮೂರು ತಿಂಗಳಿಂದ ಕೋಮು ದ್ವೇಷದ ಗಲಾಟೆ ನಡೆಯುತ್ತಿದ್ದರೂ ಶಾಂತವಾಗಿದ್ದ ಹುಬ್ಬಳ್ಳಿ ಶನಿವಾರ ರಾತ್ರಿ ಇದೇ ಕಾರಣಕ್ಕೆ ಪ್ರಕ್ಷುಬ್ಧವಾಗಿದೆ. ತಡರಾತ್ರಿ 1ಗಂಟೆವರೆಗೂ ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆಯ ಹಿಂಬಾಗದ ಪ್ರದೇಶದಲ್ಲಿ ಕಿಡಿಗೇಡಿಗಳು ಕಲ್ಲುತೂರಾಟ ಪ್ರತಿಭಟನೆ ಮುಂದುವರಿಸಿದ್ದರು. ಒಂದು ಹಂತಕ್ಕೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದರೂ ನಗರ ಬೂದಿ ಮುಚ್ಚಿದ ಕೆಂಡವಾಗಿದೆ.

ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಯ ಎದುರು ಕಾರವಾರ ರಸ್ತೆಯಲ್ಲಿ ಕಂಡ ಕಂಡ ವಾಹನಗಳಿಗೆ ಉದ್ರಿಕ್ತ ಜನರ ಗುಂಪು ಕಲ್ಲು ತೂರಾಟ ಮಾಡಿದರು. ಘಟನೆ ನಿಯಂತ್ರಣಕ್ಕಾಗಿ ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆಗೆ ಬರುತ್ತಿದ್ದ ಪೂರ್ವ ಸಂಚಾರಿ ಇನ್‌ಸ್ಪೆಕ್ಟರ್‌ ಕಾಡದೇವರಮಠ, ಕಾನ್‌ಸ್ಟೇಬಲ್‌ ಗುರುಪಾದಪ್ಪ ಸ್ವಾದಿ ಅವರ ಮೇಲೆ ಕಲ್ಲು ತೂರಾಟವಾಯಿತು. ಇಬ್ಬರೂ ಗಾಯಗೊಂಡಿದ್ದಾರೆ. ಕಾಡದೇವರಮಠ ಅವರನ್ನು ಸುಚಿರಾಯು ಆಸ್ಪತ್ರೆಗೆ ಸೇರಿಸಲಾಗಿದೆ. ಅಲ್ಲದೆ ಪೊಲೀಸ್‌ ಜೀಪನ್ನು ಅಡ್ಡಗೆಡವಿ ಧ್ವಂಸಗೊಳಿಸಿದ್ದಾರೆ.

ಇಷ್ಟಕ್ಕೆ ನಿಲ್ಲದೆ, ದಿಡ್ಡಿ ಓಣಿಯ ಗುರವ ಆಸ್ಪತ್ರೆಯೊಳಗೆ ನುಗ್ಗಿದ ಗುಂಪು ಅದನ್ನು ಸಹ ಧ್ವಂಸಗೊಳಿಸಿದೆ ಎನ್ನಲಾಗಿದೆ. ಕಲ್ಲು ತೂರಾಟದಲ್ಲಿ ಮೂರು ಪೊಲೀಸ್‌ ಜೀಪು, 10 ಸ್ಕೂಟರ್‌, ಬಸ್ಸು ಕಾರು ಸೇರಿ ಹಲವು ವಾಹನಗಳು ಜಖಂಗೊಂಡವು. ಪೊಲೀಸ್‌ ಠಾಣೆ, ಸನಿಹದ ಹಿಂದೂ ದೇಗುಲದ ಮೇಲೆಯೂ ಕಲ್ಲು ಎಸೆಯಲಾಗಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು(Police) ಗುಂಪು ಚದುರಿಸಲು ಮುಂದಾದರು. ಪರಿಸ್ಥಿತಿ ನಿಯಂತ್ರಣಕ್ಕಾಗಿ ಲಾಠಿ ಪ್ರಹಾರ ನಡೆಸಿದರು. ಅದಕ್ಕೂ ಬಗ್ಗದಿದ್ದಾಗ ಅಶ್ರುವಾಯು ಸಿಡಿಸಿದರು. ಆಗ ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆ ಎದುರಿದ್ದ ಒಂದಿಷ್ಟುಉದ್ರಿಕ್ತರು ಹಿಂಬಾಗಕ್ಕೆ ಓಡಿಹೋಗಿದ್ದಾರೆ. ಕಾರವಾರ ರಸ್ತೆಯನ್ನು ಬಂದ್‌ ಮಾಡಿ ಸಂಚಾರ ನಿಯಂತ್ರಣಕ್ಕೆ ತೆಗೆದುಕೊಳ್ಳಲಾಯಿತು. ಮುಂದುವರಿದು ಇಡಿ ನಗರಾದ್ಯಂತ ಪೊಲೀಸ್‌ ವಾಹನದ ಮೂಲಕ ಗಸ್ತು ತಿರುಗಿ 144 ಸೆಕ್ಷನ್‌ ಜಾರಿಯಾಗಿದ್ದು ಯಾವುದೆ ಕಾರಣಕ್ಕೂ ಅನಗತ್ಯ ಓಡಾಟ ಮಾಡದಂತೆ, ಒಬ್ಬರೇ ತಿರುಗಾಡದಂತೆ ಎಚ್ಚರಿಕೆ ನೀಡಿದರು.

ಪೊಲೀಸ್‌ ಆಯುಕ್ತ ಲಾಭುರಾಮ, ಡಿಸಿಪಿ ಸಾಹಿಲ್‌ ಬಾಗ್ಲಾ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಹೆಚ್ಚಿನ ಪೊಲೀಸ್‌ ಪಡೆಯೊಂದಿಗೆ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಮುಸಲ್ಮಾನ ಮುಖಂಡರನ್ನು ಕರೆದು ಸಮಾಧಾನ ಪಡಿಸಲು ಯತ್ನಿಸುತ್ತಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ