Dj ಹಳ್ಳಿ KJ ಹಳ್ಳಿ ಮಾದರಿಯಲ್ಲಿ ಪೋಲೀಸ್ ಠಾಣೆ, ಆಸ್ಪತ್ರೆಯ ಮೇಲೆ ದಾಳಿ ಹುಬ್ಬಳ್ಳಿಯಲ್ಲಿ ನಡೆದ ಘಟನೆ! ಪೋಲೀಸರಿಂದ ಲಾಠಿಚಾರ್ಜ್ ಗಾಳಿಯಲ್ಲಿ ಗುಂಡು, ನಿಷೇದಾಜ್ಞೆ ಹೇರಿಕೆ! ಬೂದಿ ಮುಚ್ಚಿದ ಕೆಂಡದಂತಿರುವ ಹುಬ್ಬಳ್ಳಿ!

ಹುಬ್ಬಳ್ಳಿ: ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ ಹಾಕಿರುವ ವಿಚಾರವಾಗಿ ಹಳೇ ಹುಬ್ಬಳ್ಳಿ ಪ್ರದೇಶದಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ ಸಂಭವಿಸಿದೆ. ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಹಾಗೂ ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. ಘಟನೆಯಲ್ಲಿ ಇನ್‌ಸ್ಪೆಕ್ಟರ್‌ ಸೇರಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಭಾರೀ ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ನಗರದಲ್ಲಿ 144 ಸೆಕ್ಷನ್‌ ಜಾರಿಯಾಗಿದ್ದು, ದ್ವೇಷಮಯ ವಾತಾವರಣ ಉಂಟಾಗಿದೆ.

ರಾಜ್ಯದಲ್ಲಿ ಕಳೆದ ಮೂರು ತಿಂಗಳಿಂದ ಕೋಮು ದ್ವೇಷದ ಗಲಾಟೆ ನಡೆಯುತ್ತಿದ್ದರೂ ಶಾಂತವಾಗಿದ್ದ ಹುಬ್ಬಳ್ಳಿ ಶನಿವಾರ ರಾತ್ರಿ ಇದೇ ಕಾರಣಕ್ಕೆ ಪ್ರಕ್ಷುಬ್ಧವಾಗಿದೆ. ತಡರಾತ್ರಿ 1ಗಂಟೆವರೆಗೂ ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆಯ ಹಿಂಬಾಗದ ಪ್ರದೇಶದಲ್ಲಿ ಕಿಡಿಗೇಡಿಗಳು ಕಲ್ಲುತೂರಾಟ ಪ್ರತಿಭಟನೆ ಮುಂದುವರಿಸಿದ್ದರು. ಒಂದು ಹಂತಕ್ಕೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದರೂ ನಗರ ಬೂದಿ ಮುಚ್ಚಿದ ಕೆಂಡವಾಗಿದೆ.

ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಯ ಎದುರು ಕಾರವಾರ ರಸ್ತೆಯಲ್ಲಿ ಕಂಡ ಕಂಡ ವಾಹನಗಳಿಗೆ ಉದ್ರಿಕ್ತ ಜನರ ಗುಂಪು ಕಲ್ಲು ತೂರಾಟ ಮಾಡಿದರು. ಘಟನೆ ನಿಯಂತ್ರಣಕ್ಕಾಗಿ ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆಗೆ ಬರುತ್ತಿದ್ದ ಪೂರ್ವ ಸಂಚಾರಿ ಇನ್‌ಸ್ಪೆಕ್ಟರ್‌ ಕಾಡದೇವರಮಠ, ಕಾನ್‌ಸ್ಟೇಬಲ್‌ ಗುರುಪಾದಪ್ಪ ಸ್ವಾದಿ ಅವರ ಮೇಲೆ ಕಲ್ಲು ತೂರಾಟವಾಯಿತು. ಇಬ್ಬರೂ ಗಾಯಗೊಂಡಿದ್ದಾರೆ. ಕಾಡದೇವರಮಠ ಅವರನ್ನು ಸುಚಿರಾಯು ಆಸ್ಪತ್ರೆಗೆ ಸೇರಿಸಲಾಗಿದೆ. ಅಲ್ಲದೆ ಪೊಲೀಸ್‌ ಜೀಪನ್ನು ಅಡ್ಡಗೆಡವಿ ಧ್ವಂಸಗೊಳಿಸಿದ್ದಾರೆ.

ಇಷ್ಟಕ್ಕೆ ನಿಲ್ಲದೆ, ದಿಡ್ಡಿ ಓಣಿಯ ಗುರವ ಆಸ್ಪತ್ರೆಯೊಳಗೆ ನುಗ್ಗಿದ ಗುಂಪು ಅದನ್ನು ಸಹ ಧ್ವಂಸಗೊಳಿಸಿದೆ ಎನ್ನಲಾಗಿದೆ. ಕಲ್ಲು ತೂರಾಟದಲ್ಲಿ ಮೂರು ಪೊಲೀಸ್‌ ಜೀಪು, 10 ಸ್ಕೂಟರ್‌, ಬಸ್ಸು ಕಾರು ಸೇರಿ ಹಲವು ವಾಹನಗಳು ಜಖಂಗೊಂಡವು. ಪೊಲೀಸ್‌ ಠಾಣೆ, ಸನಿಹದ ಹಿಂದೂ ದೇಗುಲದ ಮೇಲೆಯೂ ಕಲ್ಲು ಎಸೆಯಲಾಗಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು(Police) ಗುಂಪು ಚದುರಿಸಲು ಮುಂದಾದರು. ಪರಿಸ್ಥಿತಿ ನಿಯಂತ್ರಣಕ್ಕಾಗಿ ಲಾಠಿ ಪ್ರಹಾರ ನಡೆಸಿದರು. ಅದಕ್ಕೂ ಬಗ್ಗದಿದ್ದಾಗ ಅಶ್ರುವಾಯು ಸಿಡಿಸಿದರು. ಆಗ ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆ ಎದುರಿದ್ದ ಒಂದಿಷ್ಟುಉದ್ರಿಕ್ತರು ಹಿಂಬಾಗಕ್ಕೆ ಓಡಿಹೋಗಿದ್ದಾರೆ. ಕಾರವಾರ ರಸ್ತೆಯನ್ನು ಬಂದ್‌ ಮಾಡಿ ಸಂಚಾರ ನಿಯಂತ್ರಣಕ್ಕೆ ತೆಗೆದುಕೊಳ್ಳಲಾಯಿತು. ಮುಂದುವರಿದು ಇಡಿ ನಗರಾದ್ಯಂತ ಪೊಲೀಸ್‌ ವಾಹನದ ಮೂಲಕ ಗಸ್ತು ತಿರುಗಿ 144 ಸೆಕ್ಷನ್‌ ಜಾರಿಯಾಗಿದ್ದು ಯಾವುದೆ ಕಾರಣಕ್ಕೂ ಅನಗತ್ಯ ಓಡಾಟ ಮಾಡದಂತೆ, ಒಬ್ಬರೇ ತಿರುಗಾಡದಂತೆ ಎಚ್ಚರಿಕೆ ನೀಡಿದರು.

ಪೊಲೀಸ್‌ ಆಯುಕ್ತ ಲಾಭುರಾಮ, ಡಿಸಿಪಿ ಸಾಹಿಲ್‌ ಬಾಗ್ಲಾ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಹೆಚ್ಚಿನ ಪೊಲೀಸ್‌ ಪಡೆಯೊಂದಿಗೆ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಮುಸಲ್ಮಾನ ಮುಖಂಡರನ್ನು ಕರೆದು ಸಮಾಧಾನ ಪಡಿಸಲು ಯತ್ನಿಸುತ್ತಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

Spread the love
  • Related Posts

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಸಂಜೆ ಆರ್ಭಟಿಸಿದ ವರುಣನ ಅಬ್ಬರಕ್ಕೆ ಭೀಕರ ದುರಂತವೊಂದು ಸಂಭವಿಸಿದೆ. ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ, ಮೂವರು ಮಕ್ಕಳು ಸೇರಿದಂತೆ ಒಟ್ಟು 8 ಜನರು ಮೃತಪಟ್ಟಿದ್ದಾರೆ. ಬುಧವಾರ…

    Spread the love

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬೆಳ್ತಂಗಡಿ-ಪುಂಜಾಲಕಟ್ಟೆ ರಸ್ತೆ ಕಾಮಗಾರಿ: ವಾಹನ ಸಂಚಾರ ಅಸ್ತವ್ಯಸ್ತ, ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಹಿನ್ನೆಲೆ ಸಂತೆಕಟ್ಟೆ ಬಳಿ ಏಕಮುಖ ಸಂಚಾರ ಮಾಡಿರುವುದರಿಂದ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಒದ್ದಾಡುವಂತಾಗಿದೆ. ಕಾಮಗಾರಿ…

    Spread the love

    You Missed

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 40 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 86 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 43 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 80 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    • By admin
    • April 27, 2026
    • 23 views
    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ