ಹಾಡಹಗಲೇ ಮನೆಯಿಂದ ನಗದು ಸಹಿತ ಚಿನ್ನಾಭರಣ ಕಳವುಗೈದ ಪ್ರಕರಣ: ಕಳವಾದ ನಗದು, ಚಿನ್ನಾಭರಣಗಳ ಸಹಿತ ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ : ಹಾಡು ಹಗಲೇ ಇಂದಬೆಟ್ಟುವಿನ ಮನೆಯಿಂದ 5,200 ರೂ. ನಗದು ಸಹಿತ 1205,200 ರೂ. ಮೌಲ್ಯದ 40 ಪವನ್ ಚಿನ್ನಾಭರಣ ಕಳವು ನಡೆಸಿದ ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಮೂರು ಮಂದಿ ಆರೋಪಿಗಳನ್ನು ಬಂಧಿಸಿ, ಕಳವಾದ ನಗದು ಸಹಿತ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ನಾವೂರು ಗ್ರಾಮದ ನಿರಿಂದಿ ಮನೆ ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಮಹಮ್ಮದ್ ಸ್ವಾಲಿ ( 26 ವರ್ಷ), ಲಾಯಿಲ ಗ್ರಾಮದ ಕುಂಟಿನಿ ಮನೆ ಅಬ್ಬಾಸ್ ಎಂಬರ ಪುತ್ರ ಯಾಹ್ಯಾ ( 32 ವರ್ಷ), ನಾವೂರು ಗ್ರಾಮದ ಕಿರ್ನಡ್ಕ ನಿವಾಸಿ ಹುಸೈನ್ ಎಂಬವರ ಪುತ್ರ ಬಿ.ಹೆಚ್ ನೌಫಲ್ (27 ವರ್ಷ) ಬಂಧಿತ ಆರೋಪಿಗಳು.

ಅ.31 ರಂದು ಇಂದಬೆಟ್ಟು ಗ್ರಾಮದ ಬಂಗಾಡಿ ದೇರಾಜೆ ಮನೆ ನಿವಾಸಿ ಮಹಮ್ಮದ್ ಎಂಬವರ ಮನೆಯಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಮನೆಯ ಗೋದ್ರೇಜ್ ನಲ್ಲಿಟ್ಟಿದ್ದ ಐದು ಪವನಿನ ಚಿನ್ನದ ಚೈನ್ 1, ಒಂದು ವವನಿನ ಚಿನ್ನದ ಸಣ್ಣ ಚೈನ್ 1, ಮಕ್ಕಳ ಚೈನ್ 2, ತಲಾ ಒಂದು ಒಂದು ವವನಿನ ಚಿನ್ನದ ಕಾಯಿನ್ಸ್ 4 , ತಲಾ ನಾಲ್ಕು ಪವನಿನ ಚಿನ್ನದ ಬಿಸ್ಕಟ್ 4, ಎರಡು ವವನಿನ ಚಿನ್ನದ ಗಟ್ಟಿ 1, 13ಪವನಿನ ಚಿನ್ನದ ನೆಕ್ಲೀಸ್ 1, ಒಂದು ಒಂದೂವರೆ ಪವನಿನ ಚಿನ್ನದ ವವನಿನ ಚಿನ್ನದ ತುಂಡಾದ ಬಳ ಹಾಗೂ ಪೆಂಡೆಂಟ್ 1, ಅರ್ಧ ಪವನಿನ ಚಿನ್ನದ ಮಗುವಿನ ಕಿವಿ ಓಲೆ 1, ಅರ್ಧ ಪವನಿನ ಚಿನ್ನದ ಬ್ರಾಸ್ ಲೈಟ್ 1, ಸೇರಿದಂತೆ ಸುಮಾರು 12,05,200ರೂಪಾಯಿ ಮೌಲ್ಯದ ವಿವಿಧ ರೀತಿಯ 40 ಪವನ್ ಚಿನ್ನಾಭರಣಗಳು ಮತ್ತು ನಗದು ಹಣ 5200 ರೂಪಾಯಿ ಕಳವು ಮಾಡಿದ್ದು, ಈ ಬಗ್ಗೆ ಮಹಮ್ಮದ್ ರವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತೀವ್ರ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಇಂದಬೆಟ್ಟು ಗ್ರಾಮಕ್ಕೆ ಅಂದು ಬಂದ ಅಪರಿಚಿತರ ಮಾಹಿತಿ ಕಲೆ ಹಾಕಿದಾಗ ಬೈಕ್‌ನಲ್ಲಿ ಹೆಲ್ಮೆಟ್ ಹಾಕಿ ಇಬ್ಬರು ಬಂದಿರುವ ಮಾಹಿತಿ ಲಭಿಸಿತು. ಇದರ ಬಗ್ಗೆ ಸಿಸಿ ಟಿ.ವಿ ಹಾಗೂ ಇತರ ಮೂಲಗಳಿಂದ ಮಾಹಿತಿ ಕಲೆ ಹಾಕಿ ಇದೀಗ ಮೂರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಕಾರ್ಯಚರಣೆಯಲ್ಲಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸೋನವನೆ ಋಷಿಕೇಶ್ ಭಗವಾನ್, ಶಿವಕುಮಾರ್ ಗುಣಾರೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ರವರುಗಳ ನಿರ್ದೇಶನದಂತೆ, ಶಿವಾಂಶು ರಜಪೂತ್ ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷರು ರವರ ಸೂಚನೆಯಂತೆ ಈ ಪ್ರಕರಣದ ತನಿಖಾಧಿಕಾರಿಯಾದ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಶಿವಕುಮಾರ ಬಿ, ಬೆಳ್ತಂಗಡಿ ಪೊಲೀಸ್ ಠಾಣಾ ಪಿ.ಎಸ್.ಐ ನಂದ ಕುಮಾರ್, ಪ್ರೊ.ಪಿಎಸ್‌ಐ ಮೂರ್ತಿ, ಎಎಸೈ ದೇವಪ್ಪ ಎಂಕೆ, ಸಿಬ್ಬಂದಿಗಳಾದ ಲಾರೆನ್ಸ್ ರಾಜೇಶ್ ಎನ್, ವೃಷಭ, ಪ್ರಮೋದ್ ನಾಯ್ಕ, ಇಬ್ರಾಹಿಂ ಗರ್ಡಾಡಿ,ಲತೀಫ್, ವಿಜಯ ಕುಮಾರ್ ರೈ, ವೆಂಕಟೇಶ್, ಬಸವರಾಜ್, ಚರಣ್, ಅವಿನಾಶ್, ವಾಹನ ಚಾಲಕರಾದ ಮಹಮ್ಮದ್ ಆಸೀಫ್, ಸತೀಶ್, ತಾಂತ್ರಿಕ ಸಿಬ್ಬಂದಿಗಳಾದ ದಿವಾಕರ, ಸಂಪತ್ ಕುಮಾರ್ ಪಾಲ್ಗೊಂಡಿದ್ದರು.

ಆರೋಪಿಗಳಿಂದ ಕೃತ್ಯಕ್ಕೆ ಉಪಯೋಗಿಸಿದ ಅಲ್ಟೊ ಕಾರು, ಪಲ್ಸರ್ ಎನ್ ಎಸ್ ಮೋಟಾರು ಸೈಕಲ್, ನಾಲ್ಕು ಮೊಬೈಲ್ ಹ್ಯಾಂಡ್ ಸೆಟ್ ಇವುಗಳ ಒಟ್ಟು ಮೌಲ್ಯ 1,96,500 ರೂ.ಗಳು, ಹಾಗೂ ಕಳವಾದ 12,05,200 ರೂಪಾಯಿ ಮೌಲ್ಯದ 320 ಗ್ರಾಂ ಚಿನ್ನಾಭರಣಗಳು, ನಗದು 1230 ರೂ. ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸ್ವಾಧೀನ ಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ 12,75,930ರೂಪಾಯಿ ಆಗಿದ್ದು, ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣವನ್ನು ಶೀಘ್ರವಾಗಿ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರಿಗೆ ದ.ಕ ಜಿಲ್ಲಾ ಎಸ್.ಪಿ ಯವರು ವಿಶೇಷ ಬಹುಮಾನ ಘೋಷಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    You Missed

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 39 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 17 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 36 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 57 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 38 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 44 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ