ಹಾಡಹಗಲೇ ಮನೆಯಿಂದ ನಗದು ಸಹಿತ ಚಿನ್ನಾಭರಣ ಕಳವುಗೈದ ಪ್ರಕರಣ: ಕಳವಾದ ನಗದು, ಚಿನ್ನಾಭರಣಗಳ ಸಹಿತ ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ : ಹಾಡು ಹಗಲೇ ಇಂದಬೆಟ್ಟುವಿನ ಮನೆಯಿಂದ 5,200 ರೂ. ನಗದು ಸಹಿತ 1205,200 ರೂ. ಮೌಲ್ಯದ 40 ಪವನ್ ಚಿನ್ನಾಭರಣ ಕಳವು ನಡೆಸಿದ ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಮೂರು ಮಂದಿ ಆರೋಪಿಗಳನ್ನು ಬಂಧಿಸಿ, ಕಳವಾದ ನಗದು ಸಹಿತ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ನಾವೂರು ಗ್ರಾಮದ ನಿರಿಂದಿ ಮನೆ ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಮಹಮ್ಮದ್ ಸ್ವಾಲಿ ( 26 ವರ್ಷ), ಲಾಯಿಲ ಗ್ರಾಮದ ಕುಂಟಿನಿ ಮನೆ ಅಬ್ಬಾಸ್ ಎಂಬರ ಪುತ್ರ ಯಾಹ್ಯಾ ( 32 ವರ್ಷ), ನಾವೂರು ಗ್ರಾಮದ ಕಿರ್ನಡ್ಕ ನಿವಾಸಿ ಹುಸೈನ್ ಎಂಬವರ ಪುತ್ರ ಬಿ.ಹೆಚ್ ನೌಫಲ್ (27 ವರ್ಷ) ಬಂಧಿತ ಆರೋಪಿಗಳು.

ಅ.31 ರಂದು ಇಂದಬೆಟ್ಟು ಗ್ರಾಮದ ಬಂಗಾಡಿ ದೇರಾಜೆ ಮನೆ ನಿವಾಸಿ ಮಹಮ್ಮದ್ ಎಂಬವರ ಮನೆಯಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಮನೆಯ ಗೋದ್ರೇಜ್ ನಲ್ಲಿಟ್ಟಿದ್ದ ಐದು ಪವನಿನ ಚಿನ್ನದ ಚೈನ್ 1, ಒಂದು ವವನಿನ ಚಿನ್ನದ ಸಣ್ಣ ಚೈನ್ 1, ಮಕ್ಕಳ ಚೈನ್ 2, ತಲಾ ಒಂದು ಒಂದು ವವನಿನ ಚಿನ್ನದ ಕಾಯಿನ್ಸ್ 4 , ತಲಾ ನಾಲ್ಕು ಪವನಿನ ಚಿನ್ನದ ಬಿಸ್ಕಟ್ 4, ಎರಡು ವವನಿನ ಚಿನ್ನದ ಗಟ್ಟಿ 1, 13ಪವನಿನ ಚಿನ್ನದ ನೆಕ್ಲೀಸ್ 1, ಒಂದು ಒಂದೂವರೆ ಪವನಿನ ಚಿನ್ನದ ವವನಿನ ಚಿನ್ನದ ತುಂಡಾದ ಬಳ ಹಾಗೂ ಪೆಂಡೆಂಟ್ 1, ಅರ್ಧ ಪವನಿನ ಚಿನ್ನದ ಮಗುವಿನ ಕಿವಿ ಓಲೆ 1, ಅರ್ಧ ಪವನಿನ ಚಿನ್ನದ ಬ್ರಾಸ್ ಲೈಟ್ 1, ಸೇರಿದಂತೆ ಸುಮಾರು 12,05,200ರೂಪಾಯಿ ಮೌಲ್ಯದ ವಿವಿಧ ರೀತಿಯ 40 ಪವನ್ ಚಿನ್ನಾಭರಣಗಳು ಮತ್ತು ನಗದು ಹಣ 5200 ರೂಪಾಯಿ ಕಳವು ಮಾಡಿದ್ದು, ಈ ಬಗ್ಗೆ ಮಹಮ್ಮದ್ ರವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತೀವ್ರ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಇಂದಬೆಟ್ಟು ಗ್ರಾಮಕ್ಕೆ ಅಂದು ಬಂದ ಅಪರಿಚಿತರ ಮಾಹಿತಿ ಕಲೆ ಹಾಕಿದಾಗ ಬೈಕ್‌ನಲ್ಲಿ ಹೆಲ್ಮೆಟ್ ಹಾಕಿ ಇಬ್ಬರು ಬಂದಿರುವ ಮಾಹಿತಿ ಲಭಿಸಿತು. ಇದರ ಬಗ್ಗೆ ಸಿಸಿ ಟಿ.ವಿ ಹಾಗೂ ಇತರ ಮೂಲಗಳಿಂದ ಮಾಹಿತಿ ಕಲೆ ಹಾಕಿ ಇದೀಗ ಮೂರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಕಾರ್ಯಚರಣೆಯಲ್ಲಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸೋನವನೆ ಋಷಿಕೇಶ್ ಭಗವಾನ್, ಶಿವಕುಮಾರ್ ಗುಣಾರೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ರವರುಗಳ ನಿರ್ದೇಶನದಂತೆ, ಶಿವಾಂಶು ರಜಪೂತ್ ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷರು ರವರ ಸೂಚನೆಯಂತೆ ಈ ಪ್ರಕರಣದ ತನಿಖಾಧಿಕಾರಿಯಾದ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಶಿವಕುಮಾರ ಬಿ, ಬೆಳ್ತಂಗಡಿ ಪೊಲೀಸ್ ಠಾಣಾ ಪಿ.ಎಸ್.ಐ ನಂದ ಕುಮಾರ್, ಪ್ರೊ.ಪಿಎಸ್‌ಐ ಮೂರ್ತಿ, ಎಎಸೈ ದೇವಪ್ಪ ಎಂಕೆ, ಸಿಬ್ಬಂದಿಗಳಾದ ಲಾರೆನ್ಸ್ ರಾಜೇಶ್ ಎನ್, ವೃಷಭ, ಪ್ರಮೋದ್ ನಾಯ್ಕ, ಇಬ್ರಾಹಿಂ ಗರ್ಡಾಡಿ,ಲತೀಫ್, ವಿಜಯ ಕುಮಾರ್ ರೈ, ವೆಂಕಟೇಶ್, ಬಸವರಾಜ್, ಚರಣ್, ಅವಿನಾಶ್, ವಾಹನ ಚಾಲಕರಾದ ಮಹಮ್ಮದ್ ಆಸೀಫ್, ಸತೀಶ್, ತಾಂತ್ರಿಕ ಸಿಬ್ಬಂದಿಗಳಾದ ದಿವಾಕರ, ಸಂಪತ್ ಕುಮಾರ್ ಪಾಲ್ಗೊಂಡಿದ್ದರು.

ಆರೋಪಿಗಳಿಂದ ಕೃತ್ಯಕ್ಕೆ ಉಪಯೋಗಿಸಿದ ಅಲ್ಟೊ ಕಾರು, ಪಲ್ಸರ್ ಎನ್ ಎಸ್ ಮೋಟಾರು ಸೈಕಲ್, ನಾಲ್ಕು ಮೊಬೈಲ್ ಹ್ಯಾಂಡ್ ಸೆಟ್ ಇವುಗಳ ಒಟ್ಟು ಮೌಲ್ಯ 1,96,500 ರೂ.ಗಳು, ಹಾಗೂ ಕಳವಾದ 12,05,200 ರೂಪಾಯಿ ಮೌಲ್ಯದ 320 ಗ್ರಾಂ ಚಿನ್ನಾಭರಣಗಳು, ನಗದು 1230 ರೂ. ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸ್ವಾಧೀನ ಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ 12,75,930ರೂಪಾಯಿ ಆಗಿದ್ದು, ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣವನ್ನು ಶೀಘ್ರವಾಗಿ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರಿಗೆ ದ.ಕ ಜಿಲ್ಲಾ ಎಸ್.ಪಿ ಯವರು ವಿಶೇಷ ಬಹುಮಾನ ಘೋಷಿಸಿದ್ದಾರೆ.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 3 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 21 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ