ಹಾಡಹಗಲೇ ಮನೆಯಿಂದ ನಗದು ಸಹಿತ ಚಿನ್ನಾಭರಣ ಕಳವುಗೈದ ಪ್ರಕರಣ: ಕಳವಾದ ನಗದು, ಚಿನ್ನಾಭರಣಗಳ ಸಹಿತ ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ : ಹಾಡು ಹಗಲೇ ಇಂದಬೆಟ್ಟುವಿನ ಮನೆಯಿಂದ 5,200 ರೂ. ನಗದು ಸಹಿತ 1205,200 ರೂ. ಮೌಲ್ಯದ 40 ಪವನ್ ಚಿನ್ನಾಭರಣ ಕಳವು ನಡೆಸಿದ ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಮೂರು ಮಂದಿ ಆರೋಪಿಗಳನ್ನು ಬಂಧಿಸಿ, ಕಳವಾದ ನಗದು ಸಹಿತ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ನಾವೂರು ಗ್ರಾಮದ ನಿರಿಂದಿ ಮನೆ ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಮಹಮ್ಮದ್ ಸ್ವಾಲಿ ( 26 ವರ್ಷ), ಲಾಯಿಲ ಗ್ರಾಮದ ಕುಂಟಿನಿ ಮನೆ ಅಬ್ಬಾಸ್ ಎಂಬರ ಪುತ್ರ ಯಾಹ್ಯಾ ( 32 ವರ್ಷ), ನಾವೂರು ಗ್ರಾಮದ ಕಿರ್ನಡ್ಕ ನಿವಾಸಿ ಹುಸೈನ್ ಎಂಬವರ ಪುತ್ರ ಬಿ.ಹೆಚ್ ನೌಫಲ್ (27 ವರ್ಷ) ಬಂಧಿತ ಆರೋಪಿಗಳು.

ಅ.31 ರಂದು ಇಂದಬೆಟ್ಟು ಗ್ರಾಮದ ಬಂಗಾಡಿ ದೇರಾಜೆ ಮನೆ ನಿವಾಸಿ ಮಹಮ್ಮದ್ ಎಂಬವರ ಮನೆಯಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಮನೆಯ ಗೋದ್ರೇಜ್ ನಲ್ಲಿಟ್ಟಿದ್ದ ಐದು ಪವನಿನ ಚಿನ್ನದ ಚೈನ್ 1, ಒಂದು ವವನಿನ ಚಿನ್ನದ ಸಣ್ಣ ಚೈನ್ 1, ಮಕ್ಕಳ ಚೈನ್ 2, ತಲಾ ಒಂದು ಒಂದು ವವನಿನ ಚಿನ್ನದ ಕಾಯಿನ್ಸ್ 4 , ತಲಾ ನಾಲ್ಕು ಪವನಿನ ಚಿನ್ನದ ಬಿಸ್ಕಟ್ 4, ಎರಡು ವವನಿನ ಚಿನ್ನದ ಗಟ್ಟಿ 1, 13ಪವನಿನ ಚಿನ್ನದ ನೆಕ್ಲೀಸ್ 1, ಒಂದು ಒಂದೂವರೆ ಪವನಿನ ಚಿನ್ನದ ವವನಿನ ಚಿನ್ನದ ತುಂಡಾದ ಬಳ ಹಾಗೂ ಪೆಂಡೆಂಟ್ 1, ಅರ್ಧ ಪವನಿನ ಚಿನ್ನದ ಮಗುವಿನ ಕಿವಿ ಓಲೆ 1, ಅರ್ಧ ಪವನಿನ ಚಿನ್ನದ ಬ್ರಾಸ್ ಲೈಟ್ 1, ಸೇರಿದಂತೆ ಸುಮಾರು 12,05,200ರೂಪಾಯಿ ಮೌಲ್ಯದ ವಿವಿಧ ರೀತಿಯ 40 ಪವನ್ ಚಿನ್ನಾಭರಣಗಳು ಮತ್ತು ನಗದು ಹಣ 5200 ರೂಪಾಯಿ ಕಳವು ಮಾಡಿದ್ದು, ಈ ಬಗ್ಗೆ ಮಹಮ್ಮದ್ ರವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತೀವ್ರ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಇಂದಬೆಟ್ಟು ಗ್ರಾಮಕ್ಕೆ ಅಂದು ಬಂದ ಅಪರಿಚಿತರ ಮಾಹಿತಿ ಕಲೆ ಹಾಕಿದಾಗ ಬೈಕ್‌ನಲ್ಲಿ ಹೆಲ್ಮೆಟ್ ಹಾಕಿ ಇಬ್ಬರು ಬಂದಿರುವ ಮಾಹಿತಿ ಲಭಿಸಿತು. ಇದರ ಬಗ್ಗೆ ಸಿಸಿ ಟಿ.ವಿ ಹಾಗೂ ಇತರ ಮೂಲಗಳಿಂದ ಮಾಹಿತಿ ಕಲೆ ಹಾಕಿ ಇದೀಗ ಮೂರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಕಾರ್ಯಚರಣೆಯಲ್ಲಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸೋನವನೆ ಋಷಿಕೇಶ್ ಭಗವಾನ್, ಶಿವಕುಮಾರ್ ಗುಣಾರೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ರವರುಗಳ ನಿರ್ದೇಶನದಂತೆ, ಶಿವಾಂಶು ರಜಪೂತ್ ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷರು ರವರ ಸೂಚನೆಯಂತೆ ಈ ಪ್ರಕರಣದ ತನಿಖಾಧಿಕಾರಿಯಾದ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಶಿವಕುಮಾರ ಬಿ, ಬೆಳ್ತಂಗಡಿ ಪೊಲೀಸ್ ಠಾಣಾ ಪಿ.ಎಸ್.ಐ ನಂದ ಕುಮಾರ್, ಪ್ರೊ.ಪಿಎಸ್‌ಐ ಮೂರ್ತಿ, ಎಎಸೈ ದೇವಪ್ಪ ಎಂಕೆ, ಸಿಬ್ಬಂದಿಗಳಾದ ಲಾರೆನ್ಸ್ ರಾಜೇಶ್ ಎನ್, ವೃಷಭ, ಪ್ರಮೋದ್ ನಾಯ್ಕ, ಇಬ್ರಾಹಿಂ ಗರ್ಡಾಡಿ,ಲತೀಫ್, ವಿಜಯ ಕುಮಾರ್ ರೈ, ವೆಂಕಟೇಶ್, ಬಸವರಾಜ್, ಚರಣ್, ಅವಿನಾಶ್, ವಾಹನ ಚಾಲಕರಾದ ಮಹಮ್ಮದ್ ಆಸೀಫ್, ಸತೀಶ್, ತಾಂತ್ರಿಕ ಸಿಬ್ಬಂದಿಗಳಾದ ದಿವಾಕರ, ಸಂಪತ್ ಕುಮಾರ್ ಪಾಲ್ಗೊಂಡಿದ್ದರು.

ಆರೋಪಿಗಳಿಂದ ಕೃತ್ಯಕ್ಕೆ ಉಪಯೋಗಿಸಿದ ಅಲ್ಟೊ ಕಾರು, ಪಲ್ಸರ್ ಎನ್ ಎಸ್ ಮೋಟಾರು ಸೈಕಲ್, ನಾಲ್ಕು ಮೊಬೈಲ್ ಹ್ಯಾಂಡ್ ಸೆಟ್ ಇವುಗಳ ಒಟ್ಟು ಮೌಲ್ಯ 1,96,500 ರೂ.ಗಳು, ಹಾಗೂ ಕಳವಾದ 12,05,200 ರೂಪಾಯಿ ಮೌಲ್ಯದ 320 ಗ್ರಾಂ ಚಿನ್ನಾಭರಣಗಳು, ನಗದು 1230 ರೂ. ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸ್ವಾಧೀನ ಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ 12,75,930ರೂಪಾಯಿ ಆಗಿದ್ದು, ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣವನ್ನು ಶೀಘ್ರವಾಗಿ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರಿಗೆ ದ.ಕ ಜಿಲ್ಲಾ ಎಸ್.ಪಿ ಯವರು ವಿಶೇಷ ಬಹುಮಾನ ಘೋಷಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 20 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 72 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ