ಭಾವನೆಗಳು ವ್ಯಕ್ತಿತ್ವವನ್ನು ರೂಪಿಸುತ್ತವೆ : ಪ್ರತಾಪ್‌ ಸಿಂಹ ನಾಯಕ್

ಇಂದಬೆಟ್ಟು : ಭಾವನೆಗಳಿಗೆ ಬೆಲೆ ಕೊಡಿ. ಭಾವನೆಗಳಿಗಿಂತ ದೊಡ್ಡದು ಬೇರೊಂದಿಲ್ಲ. ಭಾವನೆಗಳು ವ್ಯಕ್ತಿತ್ವವನ್ನು ರೂಪಿಸುತ್ತವೆ ಎಂದು ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಹೇಳಿದರು.

ಇಂದಬೆಟ್ಟಿನ ಕಲ್ಲಾಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಭಾಗವು ಆಯೋಜಿಸಿದ್ದ ‘ಗ್ರಾಮೀಣ ಸರಕಾರಿ ಕನ್ನಡ ಮಾದ್ಯಮ ಶಾಲೆಗಳನ್ನು ಉಳಿಸುವಲ್ಲಿ ಯುವ ಸಹಭಾಗಿತ್ವ’ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯೋಚನೆ ಮಾತಾಗಿ, ಮಾತು ಕೃತಿಯಾಗಿ, ಕೃತಿ ಗುಣವಾಗಿ, ಗುಣ ವ್ಯಕ್ತಿತ್ವವಾಗಿ ರೂಪುಗೊಳ್ಳುತ್ತದೆ. ವಿದ್ಯಾರ್ಥಿ ಜೀವನದಲ್ಲೇ ಉತ್ತಮ ಆಲೋಚನೆಗಳನ್ನು ಮಾಡಿ. ನನ್ನ ಏಳಿಗೆಗೆ ನಾನೇ ಶಿಲ್ಪಿ ಎಂಬ ಸ್ವಾಮಿ ವಿವೇಕಾನಂದರ ಸಂದೇಶವನ್ನು ಸದಾ ನೆನಪಿನಲ್ಲಿಟ್ಟುಕೊಂಡು ಅವಕಾಶವನ್ನು ಬಳಸಿಕೊಳ್ಳಿ ಎಂದರು.

ಅನೇಕ ಸಲ ನಾವು ಸಂತೋಷವನ್ನು ಹೊರಗೆ ಹುಡುಕುವ ಪ್ರಯತ್ನ ಮಾಡುತ್ತೇವೆ. ಆದರೆ ಸಂತೋಷವೆಂಬುದು ನಮ್ಮೊಳಗೇ ಇದೆ. ಜಗತ್ತಿಗೆ ಹೋಲಿಸಿದರೆ ಭಾರತ ಸಂತೋಷವಾಗಿ ಜೀವಿಸಲು ಪ್ರಶಸ್ತವಾದ ಸ್ಥಳ ಎಂದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸಕಿ ಡಾ. ಧನೇಶ್ವರಿ ಮಾತನಾಡಿ ಶಿಕ್ಷಣ ಕ್ಷೇತ್ರದ ಖಾಸಗೀಕರಣ, ಆಂಗ್ಲ ಮಾಧ್ಯಮ ಶಾಲೆಗಳ ಹಾವಳಿ, ಬಡತನದ ಪ್ರತೀಕವೆಂಬ ಅಪಪ್ರಚಾರಗಳು, ಸರಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳ ಕುರಿತಾದ ಕೀಳರಿಮೆ, ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕುಸಿತವಾಗಲು ಕಾರಣವಾಗಿದೆ. ಕನ್ನಡ ಮಾಧ್ಯಮ ಅಥವಾ ಸರಕಾರಿ ಶಾಲೆಗಳ ಅಭಿವೃದ್ಧಿ ಸಮುದಾಯದಿಂದ ಸಾಧ್ಯವಿದೆ. ಜನರ ಸಹಭಾಗಿತ್ವ ಮತ್ತು ಪೋಷಕರಿಂದ ಬದಲಾವಣೆ ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಲ್ಲಾಜೆ ಶಾಲೆಯ ಮುಖ್ಯೋಪಾಧ್ಯಾಯಿನಿ ಚಿತ್ರಾ ಮಾತನಾಡಿ ಗ್ರಾಮೀಣ ಭಾಗದ ಶಾಲೆಯಲ್ಲಿ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ನಡೆಸಿದ ಸೇವಾ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಪ್ರೊ. ರವಿಶಂಕರ್ ಕೆ.ಆರ್ ಮಾತನಾಡಿ ವಿದ್ಯಾರ್ಥಿಗಳು ಜನರೊಂದಿಗೆ ಬೆರೆಯುವ ಅನುಭವ ಪಡೆಯುವುದಕ್ಕಾಗಿ ನಿಮ್ಮೊಂದಿಗೆ ಬೆರೆತಿದ್ದಾರೆ. ಶಾಲೆಯ ನೈಜ ಅಭಿವೃದ್ಧಿ ಊರಿನ ಜನರ ಆಸಕ್ತಿಯಿಂದ ನಿರ್ಧರಿಸುತ್ತದೆ ಎಂದರು.

“ಕೊರೋನಾ ಅವಧಿಯಲ್ಲಿ ಕಳೆಗುಂದಿದ್ದ ಶಾಲೆಗೆ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಹೊಸ ಆಯಾಮ ನೀಡಿದ್ದಾರೆ”.
ಶಶಿಕಲಾ ಅಧ್ಯಕ್ಷರು ಹಳೆವಿದ್ಯಾರ್ಥಿ

ಪಂಚಾಯತ್ ಸದಸ್ಯ ಆನಂದ್ ಅಡೀಲು ಮಾತನಾಡಿ ಶಾಲೆಯ ಅಭಿವೃದ್ಧಿಗೆ ಶ್ರಮಿಸುವಲ್ಲಿ ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದರು.

ಕಾರ್ಯಕ್ರಮದಲ್ಲಿ ಸಮಾಜಕಾರ್ಯ ವಿಭಾಗದ ಉಪನ್ಯಾಸಕರು, ವಿದ್ಯಾರ್ಥಿಗಳು, ಗ್ರಾಮಪಂಚಾಯತ್ ಸದಸ್ಯರು, ಕಲ್ಲಾಜೆ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ ವೃಂದ ಹಾಗೂ ಲ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿನಿ ವೀಕ್ಷಿತಾ ಕಾರ್ಯಕ್ರಮ ನಿರೂಪಿಸಿದರು. ವಿಭಾಗದ ಮುಖ್ಯಸ್ಥ ಪ್ರೊ. ರವಿಶಂಕರ್ ಕೆ. ಆರ್ ಸ್ವಾಗತಿಸಿ, ವಿದ್ಯಾರ್ಥಿನಿ ಅನನ್ಯ ಡಿ. ವಂದಿಸಿದರು.

ವರದಿ : ಸ್ವಸ್ತಿಕ್ ಕನ್ಯಾಡಿ

Spread the love
  • Related Posts

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ಬೆಳ್ತಂಗಡಿ : ಬುರುಡೆ ಪ್ರಕರಣದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ…

    Spread the love

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಡಬಲು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ₹2 ಲಕ್ಷ ಅನುದಾನ ವಿತರಣೆ ಸಕಲೇಶಪುರ: ತಾಲೂಕಿನ ಮಡಬಲು ಗ್ರಾಮದ ಐತಿಹಾಸಿಕ ಹಾಗೂ ಭಕ್ತರ ಆರಾಧನಾ ಕೇಂದ್ರವಾಗಿರುವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ…

    Spread the love

    You Missed

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    • By admin
    • June 16, 2026
    • 90 views
    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • June 16, 2026
    • 35 views
    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    • By admin
    • June 15, 2026
    • 134 views
    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    • By admin
    • June 15, 2026
    • 76 views
    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 47 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 84 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ