COVID 19ನಲ್ಲಿ ವಿಶ್ವದ ರಾಷ್ಟ್ರಗಳ ಪೈಕಿ ಭಾರತ ಮೂರನೇ ಸ್ಥಾನಕ್ಕೆ!

ನವದೆಹಲಿ: ಜಗತ್ತಿನಲ್ಲಿ ಅತಿ ಹೆಚ್ಚು ಕೋವಿಡ್‌ ಪ್ರಕರಣಗಳಿರುವ ಪಟ್ಟಿಯಲ್ಲಿ ರಷ್ಯಾವನ್ನು ಮೀರಿಸಿರುವ ಭಾರತ ಈಗ ಮೂರನೇ ಸ್ಥಾನಕ್ಕೇರಿದೆ.

ಭಾನುವಾರ ರಾತ್ರಿ 9ರ ವೇಳೆಗೆ ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 6,94,053ಕ್ಕೆ ತಲುಪಿದೆ. ರಷ್ಯಾದಲ್ಲಿ ಒಟ್ಟು ದೃಢಪಟ್ಟ ಪ್ರಕರಣಗಳ ಸಂಖ್ಯೆ 6,80,283. ಜಾಗತಿಕವಾಗಿ ಮೊದಲ ಮತ್ತು ಎರಡನೇ ಸ್ಥಾನದಲ್ಲಿರುವ ಅಮೆರಿಕದಲ್ಲಿ ಒಟ್ಟು 28.39 ಲಕ್ಷ ಹಾಗೂ ಬ್ರೆಜಿಲ್‌ನಲ್ಲಿ ಒಟ್ಟು 15.77 ಲಕ್ಷ ಸೋಂಕಿನ ಪ್ರಕರಣಗಳು ದೃಢಪಟ್ಟಿವೆ.

ಭಾನುವಾರ ಬೆಳಗ್ಗೆ 8.30ರ ವರೆಗಿನ 24 ತಾಸುಗಳಲ್ಲಿ ದೇಶದಲ್ಲಿ 24,850 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದವು. ಇದೇ ಅವಧಿಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 613. ಈ ಪಿಡುಗಿಗೆ ಈವರೆಗೆ ತುತ್ತಾದವರ ಸಂಖ್ಯೆ 19,268ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸತತ ಮೂರನೇ ದಿನವೂ 20 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದೇಶದಲ್ಲಿ ವರದಿಯಾಗಿವೆ. ಮಹಾರಾಷ್ಟ್ರದಲ್ಲಿ ನಿರಂತರವಾಗಿ ಪ್ರಕರಣಗಳು ಹೆಚ್ಚುತ್ತಿದ್ದು, ಭಾನುವಾರ ಹೊಸದಾಗಿ 6,555 ಪ್ರಕರಣಗಳು ದೃಢಪಟ್ಟಿವೆ.

Spread the love
  • Related Posts

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದಲ್ಲಿ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ…

    Spread the love

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜಿಲ್ಲಾ ಜಾಗೃತಿ ವೇದಿಕೆ ಹಾಸನ, ಲಯನ್ಸ್ ಕ್ಲಬ್ ಸಕಲೇಶಪುರ, ರೋಟರಿ ಕ್ಲಬ್ ಸಕಲೇಶಪುರ, ಬಂಟರ ಸಂಘ ಸಕಲೇಶಪುರ, ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ದಿನಾಂಕ 14/10/2025ನೇ ಮಂಗಳವಾರ ಬೆಳಿಗ್ಗೆ 10ಗಂಟೆಯಿಂದ…

    Spread the love

    You Missed

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 22 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 19 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 46 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 40 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    • By admin
    • October 7, 2025
    • 61 views
    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ

    • By admin
    • October 7, 2025
    • 58 views
    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ