ಭಾರತದ ನೂತನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ನೇಮಕ

ನವದೆಹಲಿ: ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರನ್ನು ಸೇನಾ ಮುಖ್ಯಸ್ಥರಾಗಿ ಕೇಂದ್ರ ಸರ್ಕಾರ ನೇಮಿಸಿದ್ದು, ಈ ಮೂಲಕ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡ ಮೊದಲ ಎಂಜಿನಿಯರ್ ಎನಿಸಿಕೊಂಡಿದ್ದಾರೆ. ಮನೋಜ್ ಪಾಂಡೆ ಅವರು ಜನರಲ್ ಎಂ.ಎಂ ನರವಾನೆ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದು, ಈ ತಿಂಗಳ ಅಂತ್ಯದ ವೇಳೆಗೆ ನರವಾನೆ ನಿವೃತ್ತರಾಗಲಿದ್ದಾರೆ. ಇನ್ನು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪದವೀಧರರಾಗಿದ್ದ ಪಾಂಡೆ, ಡಿಸೆಂಬರ್ 1982ರಲ್ಲಿ ಕಾರ್ಪ್ಸ್ ಆಫ್ ಎಂಜಿನಿಯರ್ಸ್ʼಗೆ ಸೇರಿದ್ದಾರೆ.

ನ್ಯಾಶನಲ್ ಡಿಫೆನ್ಸ್​ ಅಕಾಡೆಮಿಯ ವಿದ್ಯಾರ್ಥಿಯಾಗಿದ್ದ ಇವರು 1982ರ ಡಿಸೆಂಬರ್​​ನಲ್ಲಿ ಕಾರ್ಪ್ಸ್​ ಆಫ್​ ಇಂಜಿನಿಯರ್ಸ್​ಗೆ ಸೇರ್ಪಡೆಗೊಂಡರು. ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣಾ ರೇಖೆ ಬಳಿ ಇರುವ ಪಲ್ಲಾನ್​ವಾಲಾ ವಲಯದಲ್ಲಿ ಆಪರೇಶನ್​ ಪರಾಕ್ರಮ ನಡೆಸುವಾಗ ಇವರು ಇಂಜಿನಿಯರ್ ರೆಜಿಮೆಂಟ್​ನ್ನು ಮುನ್ನಡೆಸಿದ್ದರು.

ಆಪರೇಶನ್​ ಪರಾಕ್ರಮ ಎಂಬುದು 2002ರ ಹೊತ್ತಿಗೆ ನಡೆದ ಒಂದು ಕಾರ್ಯಾಚರಣೆ. 2001ರಲ್ಲಿ ಭಾರತದ ಸಂಸತ್ತಿನ ಮೇಲೆ ನಡೆದ ಭಯೋತ್ಪಾದಕ ದಾಳಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಸೃಷ್ಟಿಯಾಗುವ ಸನ್ನಿವೇಶವನ್ನು ತಂದಿತ್ತು. ಆ ವೇಳೆ ಪಶ್ಚಿಮದ ಗಡಿಗೆ ಭಾರತೀಯ ಸೇನೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸಾಗಿಸಿತ್ತು. ಹಾಗೇ, ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರನ್ನೂ ಅಲ್ಲಿ ನಿಯೋಜಿಸಲಾಗಿತ್ತು. ಈ ವೇಳೆ ಕಾರ್ಪ್ಸ್​ ಆಫ್​ ಇಂಜಿನಿಯರ್​​ ರೆಜಿಮೆಂಟ್​ನ್ನು ಮನೋಜ್ ಪಾಂಡೆ ಮುನ್ನಡೆಸಿದ್ದರು.

ಮನೋಜ್​ ಪಾಂಡೆ ತಮ್ಮ 39 ವರ್ಷಗಳ ಸೇನಾ ವೃತ್ತಿಯಲ್ಲಿ ಪಶ್ಚಿಮದ ಗಡಿಯ ಇಂಜಿನಿಯರ್​ ಬ್ರಿಗೇಡ್​, ಎಲ್​ಒಸಿ ಬಳಿ ಪದಾತಿ ದಳ, ಲಡಾಖ್​ ವಲಯದಲ್ಲಿ ಪರ್ವತ ವಿಭಾಗದ ದಳ ಮತ್ತು ಈಶಾನ್ಯದ ಗಡಿಯಲ್ಲೂ ಒಂದು ಕಾರ್ಪ್ಸ್​​ನ್ನು ಮುನ್ನಡೆಸಿದ್ದಾರೆ. ಪೂರ್ವ ಕಮಾಂಡ್‌ನ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮೊದಲು ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್‌ನ ಕಮಾಂಡರ್-ಇನ್-ಚೀಫ್ ಆಗಿದ್ದರು.

ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್‌) ಬಿಪಿನ್‌ ರಾವತ್‌ ಹಾಗೂ ಅವರ ಕುಟುಂಬದವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ 2021ರ ಡಿಸೆಂಬರ್ 8ರಂದು ತಮಿಳುನಾಡಿನ ಕೂನೂರಿನಲ್ಲಿ ಪತನಗೊಂಡು ಅವರು ಮೃತಪಟ್ಟಿದ್ದರು.

2019ರಲ್ಲಿ ಬಿಜೆಪಿ ನೇತೃತ್ವದ ಮೋದಿ ಸರ್ಕಾರವು ಅಧಿಕಾರಕ್ಕೆ ಬಂದ 6 ತಿಂಗಳಲ್ಲಿಯೇ ಸಿಡಿಎಸ್ ಸೇನಾ ಮುಖ್ಯಸ್ಥರನ್ನು ನೇಮಕ ಮಾಡಿಕೊಂಡಿತ್ತು. ದೇಶದ ಉನ್ನತ ಮಿಲಿಟರಿ ಮೂಲ ಸೌಕರ್ಯಗಳಲ್ಲಿ ಅನೇಕ ಸುಧಾರಣೆಗಳಲ್ಲಿ ಒಂದಾಗಿದೆ ಎಂದು ಪ್ರಶಂಸಿಸಲಾಗಿದೆ.

ಸಿಡಿಎಸ್ ಹುದ್ದೆಯನ್ನು ನಿಭಾಯಿಸಲು ತಕ್ಕ ಅಧಿಕಾರಿಗಳು ಮಾತ್ರ ನೇಮಕ ಮಾಡಲಾಗುತ್ತದೆ. ಏಕೆಂದರೆ ಇದು ದೇಶದ ಅತ್ಯಂತ ಬಲಿಷ್ಠ ಮಿಲಿಟರಿಯ ಕೇಂದ್ರ ವಿಭಾಗವೆಂದು ನಿರೀಕ್ಷಿಸಲಾಗಿದೆ. ದೇಶದ ಎಲ್ಲಾ ಯುದ್ಧದ ರಚನೆಗಳು ನೇರವಾಗಿ ವರದಿ ಮಾಡುತ್ತವೆ. ಪ್ರಸ್ತುತ ಹೆಚ್ಚುವರಿ ಕಾರ್ಯದರ್ಶಿ ಶ್ರೇಣಿಯ ಲೆಫ್ಟಿನೆಂಟ್‌ ಜನರಲ್‌ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಮಿಲಿಟರಿ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿ ಸಿಡಿಎಸ್ ಅವರನ್ನು ನೇಮಕ ಮಾಡಲಾಗುತ್ತದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ