ಭಾರತದ ನೂತನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ನೇಮಕ

ನವದೆಹಲಿ: ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರನ್ನು ಸೇನಾ ಮುಖ್ಯಸ್ಥರಾಗಿ ಕೇಂದ್ರ ಸರ್ಕಾರ ನೇಮಿಸಿದ್ದು, ಈ ಮೂಲಕ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡ ಮೊದಲ ಎಂಜಿನಿಯರ್ ಎನಿಸಿಕೊಂಡಿದ್ದಾರೆ. ಮನೋಜ್ ಪಾಂಡೆ ಅವರು ಜನರಲ್ ಎಂ.ಎಂ ನರವಾನೆ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದು, ಈ ತಿಂಗಳ ಅಂತ್ಯದ ವೇಳೆಗೆ ನರವಾನೆ ನಿವೃತ್ತರಾಗಲಿದ್ದಾರೆ. ಇನ್ನು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪದವೀಧರರಾಗಿದ್ದ ಪಾಂಡೆ, ಡಿಸೆಂಬರ್ 1982ರಲ್ಲಿ ಕಾರ್ಪ್ಸ್ ಆಫ್ ಎಂಜಿನಿಯರ್ಸ್ʼಗೆ ಸೇರಿದ್ದಾರೆ.

ನ್ಯಾಶನಲ್ ಡಿಫೆನ್ಸ್​ ಅಕಾಡೆಮಿಯ ವಿದ್ಯಾರ್ಥಿಯಾಗಿದ್ದ ಇವರು 1982ರ ಡಿಸೆಂಬರ್​​ನಲ್ಲಿ ಕಾರ್ಪ್ಸ್​ ಆಫ್​ ಇಂಜಿನಿಯರ್ಸ್​ಗೆ ಸೇರ್ಪಡೆಗೊಂಡರು. ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣಾ ರೇಖೆ ಬಳಿ ಇರುವ ಪಲ್ಲಾನ್​ವಾಲಾ ವಲಯದಲ್ಲಿ ಆಪರೇಶನ್​ ಪರಾಕ್ರಮ ನಡೆಸುವಾಗ ಇವರು ಇಂಜಿನಿಯರ್ ರೆಜಿಮೆಂಟ್​ನ್ನು ಮುನ್ನಡೆಸಿದ್ದರು.

ಆಪರೇಶನ್​ ಪರಾಕ್ರಮ ಎಂಬುದು 2002ರ ಹೊತ್ತಿಗೆ ನಡೆದ ಒಂದು ಕಾರ್ಯಾಚರಣೆ. 2001ರಲ್ಲಿ ಭಾರತದ ಸಂಸತ್ತಿನ ಮೇಲೆ ನಡೆದ ಭಯೋತ್ಪಾದಕ ದಾಳಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಸೃಷ್ಟಿಯಾಗುವ ಸನ್ನಿವೇಶವನ್ನು ತಂದಿತ್ತು. ಆ ವೇಳೆ ಪಶ್ಚಿಮದ ಗಡಿಗೆ ಭಾರತೀಯ ಸೇನೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸಾಗಿಸಿತ್ತು. ಹಾಗೇ, ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರನ್ನೂ ಅಲ್ಲಿ ನಿಯೋಜಿಸಲಾಗಿತ್ತು. ಈ ವೇಳೆ ಕಾರ್ಪ್ಸ್​ ಆಫ್​ ಇಂಜಿನಿಯರ್​​ ರೆಜಿಮೆಂಟ್​ನ್ನು ಮನೋಜ್ ಪಾಂಡೆ ಮುನ್ನಡೆಸಿದ್ದರು.

ಮನೋಜ್​ ಪಾಂಡೆ ತಮ್ಮ 39 ವರ್ಷಗಳ ಸೇನಾ ವೃತ್ತಿಯಲ್ಲಿ ಪಶ್ಚಿಮದ ಗಡಿಯ ಇಂಜಿನಿಯರ್​ ಬ್ರಿಗೇಡ್​, ಎಲ್​ಒಸಿ ಬಳಿ ಪದಾತಿ ದಳ, ಲಡಾಖ್​ ವಲಯದಲ್ಲಿ ಪರ್ವತ ವಿಭಾಗದ ದಳ ಮತ್ತು ಈಶಾನ್ಯದ ಗಡಿಯಲ್ಲೂ ಒಂದು ಕಾರ್ಪ್ಸ್​​ನ್ನು ಮುನ್ನಡೆಸಿದ್ದಾರೆ. ಪೂರ್ವ ಕಮಾಂಡ್‌ನ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮೊದಲು ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್‌ನ ಕಮಾಂಡರ್-ಇನ್-ಚೀಫ್ ಆಗಿದ್ದರು.

ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್‌) ಬಿಪಿನ್‌ ರಾವತ್‌ ಹಾಗೂ ಅವರ ಕುಟುಂಬದವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ 2021ರ ಡಿಸೆಂಬರ್ 8ರಂದು ತಮಿಳುನಾಡಿನ ಕೂನೂರಿನಲ್ಲಿ ಪತನಗೊಂಡು ಅವರು ಮೃತಪಟ್ಟಿದ್ದರು.

2019ರಲ್ಲಿ ಬಿಜೆಪಿ ನೇತೃತ್ವದ ಮೋದಿ ಸರ್ಕಾರವು ಅಧಿಕಾರಕ್ಕೆ ಬಂದ 6 ತಿಂಗಳಲ್ಲಿಯೇ ಸಿಡಿಎಸ್ ಸೇನಾ ಮುಖ್ಯಸ್ಥರನ್ನು ನೇಮಕ ಮಾಡಿಕೊಂಡಿತ್ತು. ದೇಶದ ಉನ್ನತ ಮಿಲಿಟರಿ ಮೂಲ ಸೌಕರ್ಯಗಳಲ್ಲಿ ಅನೇಕ ಸುಧಾರಣೆಗಳಲ್ಲಿ ಒಂದಾಗಿದೆ ಎಂದು ಪ್ರಶಂಸಿಸಲಾಗಿದೆ.

ಸಿಡಿಎಸ್ ಹುದ್ದೆಯನ್ನು ನಿಭಾಯಿಸಲು ತಕ್ಕ ಅಧಿಕಾರಿಗಳು ಮಾತ್ರ ನೇಮಕ ಮಾಡಲಾಗುತ್ತದೆ. ಏಕೆಂದರೆ ಇದು ದೇಶದ ಅತ್ಯಂತ ಬಲಿಷ್ಠ ಮಿಲಿಟರಿಯ ಕೇಂದ್ರ ವಿಭಾಗವೆಂದು ನಿರೀಕ್ಷಿಸಲಾಗಿದೆ. ದೇಶದ ಎಲ್ಲಾ ಯುದ್ಧದ ರಚನೆಗಳು ನೇರವಾಗಿ ವರದಿ ಮಾಡುತ್ತವೆ. ಪ್ರಸ್ತುತ ಹೆಚ್ಚುವರಿ ಕಾರ್ಯದರ್ಶಿ ಶ್ರೇಣಿಯ ಲೆಫ್ಟಿನೆಂಟ್‌ ಜನರಲ್‌ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಮಿಲಿಟರಿ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿ ಸಿಡಿಎಸ್ ಅವರನ್ನು ನೇಮಕ ಮಾಡಲಾಗುತ್ತದೆ.

Spread the love
  • Related Posts

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…

    Spread the love

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…

    Spread the love

    You Missed

    ಬೈಕ್ ಗೆ ಬೊಲೆರೋ ವಾಹನ ಡಿಕ್ಕಿ ಚಿಕಿತ್ಸೆ ಫಲಿಸದೆ ಗಂಭೀರ ಗಾಯಗೊಂಡ ಬಾಲಕಿ ಮೃತ್ಯು

    • By admin
    • July 27, 2024
    • 52 views
    ಬೈಕ್ ಗೆ ಬೊಲೆರೋ ವಾಹನ ಡಿಕ್ಕಿ ಚಿಕಿತ್ಸೆ ಫಲಿಸದೆ ಗಂಭೀರ ಗಾಯಗೊಂಡ ಬಾಲಕಿ ಮೃತ್ಯು

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • July 23, 2024
    • 56 views
    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    • By admin
    • July 22, 2024
    • 148 views
    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    • By admin
    • July 21, 2024
    • 65 views
    ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    • By admin
    • July 21, 2024
    • 15 views
    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    • By admin
    • July 21, 2024
    • 18 views
    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ