ಭಾರತದ ನೂತನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ನೇಮಕ

ನವದೆಹಲಿ: ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರನ್ನು ಸೇನಾ ಮುಖ್ಯಸ್ಥರಾಗಿ ಕೇಂದ್ರ ಸರ್ಕಾರ ನೇಮಿಸಿದ್ದು, ಈ ಮೂಲಕ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡ ಮೊದಲ ಎಂಜಿನಿಯರ್ ಎನಿಸಿಕೊಂಡಿದ್ದಾರೆ. ಮನೋಜ್ ಪಾಂಡೆ ಅವರು ಜನರಲ್ ಎಂ.ಎಂ ನರವಾನೆ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದು, ಈ ತಿಂಗಳ ಅಂತ್ಯದ ವೇಳೆಗೆ ನರವಾನೆ ನಿವೃತ್ತರಾಗಲಿದ್ದಾರೆ. ಇನ್ನು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪದವೀಧರರಾಗಿದ್ದ ಪಾಂಡೆ, ಡಿಸೆಂಬರ್ 1982ರಲ್ಲಿ ಕಾರ್ಪ್ಸ್ ಆಫ್ ಎಂಜಿನಿಯರ್ಸ್ʼಗೆ ಸೇರಿದ್ದಾರೆ.

ನ್ಯಾಶನಲ್ ಡಿಫೆನ್ಸ್​ ಅಕಾಡೆಮಿಯ ವಿದ್ಯಾರ್ಥಿಯಾಗಿದ್ದ ಇವರು 1982ರ ಡಿಸೆಂಬರ್​​ನಲ್ಲಿ ಕಾರ್ಪ್ಸ್​ ಆಫ್​ ಇಂಜಿನಿಯರ್ಸ್​ಗೆ ಸೇರ್ಪಡೆಗೊಂಡರು. ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣಾ ರೇಖೆ ಬಳಿ ಇರುವ ಪಲ್ಲಾನ್​ವಾಲಾ ವಲಯದಲ್ಲಿ ಆಪರೇಶನ್​ ಪರಾಕ್ರಮ ನಡೆಸುವಾಗ ಇವರು ಇಂಜಿನಿಯರ್ ರೆಜಿಮೆಂಟ್​ನ್ನು ಮುನ್ನಡೆಸಿದ್ದರು.

ಆಪರೇಶನ್​ ಪರಾಕ್ರಮ ಎಂಬುದು 2002ರ ಹೊತ್ತಿಗೆ ನಡೆದ ಒಂದು ಕಾರ್ಯಾಚರಣೆ. 2001ರಲ್ಲಿ ಭಾರತದ ಸಂಸತ್ತಿನ ಮೇಲೆ ನಡೆದ ಭಯೋತ್ಪಾದಕ ದಾಳಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಸೃಷ್ಟಿಯಾಗುವ ಸನ್ನಿವೇಶವನ್ನು ತಂದಿತ್ತು. ಆ ವೇಳೆ ಪಶ್ಚಿಮದ ಗಡಿಗೆ ಭಾರತೀಯ ಸೇನೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸಾಗಿಸಿತ್ತು. ಹಾಗೇ, ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರನ್ನೂ ಅಲ್ಲಿ ನಿಯೋಜಿಸಲಾಗಿತ್ತು. ಈ ವೇಳೆ ಕಾರ್ಪ್ಸ್​ ಆಫ್​ ಇಂಜಿನಿಯರ್​​ ರೆಜಿಮೆಂಟ್​ನ್ನು ಮನೋಜ್ ಪಾಂಡೆ ಮುನ್ನಡೆಸಿದ್ದರು.

ಮನೋಜ್​ ಪಾಂಡೆ ತಮ್ಮ 39 ವರ್ಷಗಳ ಸೇನಾ ವೃತ್ತಿಯಲ್ಲಿ ಪಶ್ಚಿಮದ ಗಡಿಯ ಇಂಜಿನಿಯರ್​ ಬ್ರಿಗೇಡ್​, ಎಲ್​ಒಸಿ ಬಳಿ ಪದಾತಿ ದಳ, ಲಡಾಖ್​ ವಲಯದಲ್ಲಿ ಪರ್ವತ ವಿಭಾಗದ ದಳ ಮತ್ತು ಈಶಾನ್ಯದ ಗಡಿಯಲ್ಲೂ ಒಂದು ಕಾರ್ಪ್ಸ್​​ನ್ನು ಮುನ್ನಡೆಸಿದ್ದಾರೆ. ಪೂರ್ವ ಕಮಾಂಡ್‌ನ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮೊದಲು ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್‌ನ ಕಮಾಂಡರ್-ಇನ್-ಚೀಫ್ ಆಗಿದ್ದರು.

ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್‌) ಬಿಪಿನ್‌ ರಾವತ್‌ ಹಾಗೂ ಅವರ ಕುಟುಂಬದವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ 2021ರ ಡಿಸೆಂಬರ್ 8ರಂದು ತಮಿಳುನಾಡಿನ ಕೂನೂರಿನಲ್ಲಿ ಪತನಗೊಂಡು ಅವರು ಮೃತಪಟ್ಟಿದ್ದರು.

2019ರಲ್ಲಿ ಬಿಜೆಪಿ ನೇತೃತ್ವದ ಮೋದಿ ಸರ್ಕಾರವು ಅಧಿಕಾರಕ್ಕೆ ಬಂದ 6 ತಿಂಗಳಲ್ಲಿಯೇ ಸಿಡಿಎಸ್ ಸೇನಾ ಮುಖ್ಯಸ್ಥರನ್ನು ನೇಮಕ ಮಾಡಿಕೊಂಡಿತ್ತು. ದೇಶದ ಉನ್ನತ ಮಿಲಿಟರಿ ಮೂಲ ಸೌಕರ್ಯಗಳಲ್ಲಿ ಅನೇಕ ಸುಧಾರಣೆಗಳಲ್ಲಿ ಒಂದಾಗಿದೆ ಎಂದು ಪ್ರಶಂಸಿಸಲಾಗಿದೆ.

ಸಿಡಿಎಸ್ ಹುದ್ದೆಯನ್ನು ನಿಭಾಯಿಸಲು ತಕ್ಕ ಅಧಿಕಾರಿಗಳು ಮಾತ್ರ ನೇಮಕ ಮಾಡಲಾಗುತ್ತದೆ. ಏಕೆಂದರೆ ಇದು ದೇಶದ ಅತ್ಯಂತ ಬಲಿಷ್ಠ ಮಿಲಿಟರಿಯ ಕೇಂದ್ರ ವಿಭಾಗವೆಂದು ನಿರೀಕ್ಷಿಸಲಾಗಿದೆ. ದೇಶದ ಎಲ್ಲಾ ಯುದ್ಧದ ರಚನೆಗಳು ನೇರವಾಗಿ ವರದಿ ಮಾಡುತ್ತವೆ. ಪ್ರಸ್ತುತ ಹೆಚ್ಚುವರಿ ಕಾರ್ಯದರ್ಶಿ ಶ್ರೇಣಿಯ ಲೆಫ್ಟಿನೆಂಟ್‌ ಜನರಲ್‌ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಮಿಲಿಟರಿ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿ ಸಿಡಿಎಸ್ ಅವರನ್ನು ನೇಮಕ ಮಾಡಲಾಗುತ್ತದೆ.

Spread the love
  • Related Posts

    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    🖊️• ವರದಿ: ರಾಜೇಶ್ ಎಂ ಕಾನರ್ಪ ಗ್ರಾಮೀಣ ಮಕ್ಕಳ ನಿತ್ಯದ ನರಕಯಾತನೆಗೆ ಕೊನೆಯೆಲ್ಲಿ? ಮಳೆ ಸುರಿಯುತ್ತಿದೆ, ರಸ್ತೆ ಒದ್ದೆಯಾಗಿದೆ ವಾಹನಗಳು ವೇಗವಾಗಿ ಸಂಚರಿಸುತ್ತಿವೆ. ಇಂತಹ ರಸ್ತೆಯಲ್ಲಿ ಪ್ರತಿದಿನ ಶಾಲೆಗೆ ಹೋಗುವ ಗ್ರಾಮೀಣ ಮಕ್ಕಳ ಪರಿಸ್ಥಿತಿ ಹೇಗಿರಬಹುದು ಎಂಬುದನ್ನು ಒಮ್ಮೆಯಾದರೂ ಯೋಚಿಸಿದ್ದೇವೆಯೇ? “ಪ್ರಾಣಿಗಳ…

    Spread the love

    ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

    ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘ (ರಿ.) ವತಿಯಿಂದ ವಿಶೇಷ ಸಭೆಯು ಸುಳ್ಯ ವಕೀಲರ ಭವನದಲ್ಲಿ ಜಿಲ್ಲಾ ಅಧ್ಯಕ್ಷರಾದ ರಿಚರ್ಡ್ ಡಿ. ಕೊಸ್ತಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಯ ಮುಂದಿನ ರೂಪುರೇಷೆಗಳ ಕುರಿತು ವಿಸ್ತೃತವಾಗಿ…

    Spread the love

    You Missed

    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    • By admin
    • August 27, 2026
    • 5 views
    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

    • By admin
    • August 25, 2026
    • 5 views
    ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

    “ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • August 25, 2026
    • 5 views
    “ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ

    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    • By admin
    • August 24, 2026
    • 9 views
    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    • By admin
    • August 24, 2026
    • 11 views
    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    • By admin
    • August 23, 2026
    • 14 views
    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್