ಭಾರತದ ನೂತನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ನೇಮಕ

ನವದೆಹಲಿ: ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರನ್ನು ಸೇನಾ ಮುಖ್ಯಸ್ಥರಾಗಿ ಕೇಂದ್ರ ಸರ್ಕಾರ ನೇಮಿಸಿದ್ದು, ಈ ಮೂಲಕ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡ ಮೊದಲ ಎಂಜಿನಿಯರ್ ಎನಿಸಿಕೊಂಡಿದ್ದಾರೆ. ಮನೋಜ್ ಪಾಂಡೆ ಅವರು ಜನರಲ್ ಎಂ.ಎಂ ನರವಾನೆ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದು, ಈ ತಿಂಗಳ ಅಂತ್ಯದ ವೇಳೆಗೆ ನರವಾನೆ ನಿವೃತ್ತರಾಗಲಿದ್ದಾರೆ. ಇನ್ನು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪದವೀಧರರಾಗಿದ್ದ ಪಾಂಡೆ, ಡಿಸೆಂಬರ್ 1982ರಲ್ಲಿ ಕಾರ್ಪ್ಸ್ ಆಫ್ ಎಂಜಿನಿಯರ್ಸ್ʼಗೆ ಸೇರಿದ್ದಾರೆ.

ನ್ಯಾಶನಲ್ ಡಿಫೆನ್ಸ್​ ಅಕಾಡೆಮಿಯ ವಿದ್ಯಾರ್ಥಿಯಾಗಿದ್ದ ಇವರು 1982ರ ಡಿಸೆಂಬರ್​​ನಲ್ಲಿ ಕಾರ್ಪ್ಸ್​ ಆಫ್​ ಇಂಜಿನಿಯರ್ಸ್​ಗೆ ಸೇರ್ಪಡೆಗೊಂಡರು. ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣಾ ರೇಖೆ ಬಳಿ ಇರುವ ಪಲ್ಲಾನ್​ವಾಲಾ ವಲಯದಲ್ಲಿ ಆಪರೇಶನ್​ ಪರಾಕ್ರಮ ನಡೆಸುವಾಗ ಇವರು ಇಂಜಿನಿಯರ್ ರೆಜಿಮೆಂಟ್​ನ್ನು ಮುನ್ನಡೆಸಿದ್ದರು.

ಆಪರೇಶನ್​ ಪರಾಕ್ರಮ ಎಂಬುದು 2002ರ ಹೊತ್ತಿಗೆ ನಡೆದ ಒಂದು ಕಾರ್ಯಾಚರಣೆ. 2001ರಲ್ಲಿ ಭಾರತದ ಸಂಸತ್ತಿನ ಮೇಲೆ ನಡೆದ ಭಯೋತ್ಪಾದಕ ದಾಳಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಸೃಷ್ಟಿಯಾಗುವ ಸನ್ನಿವೇಶವನ್ನು ತಂದಿತ್ತು. ಆ ವೇಳೆ ಪಶ್ಚಿಮದ ಗಡಿಗೆ ಭಾರತೀಯ ಸೇನೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸಾಗಿಸಿತ್ತು. ಹಾಗೇ, ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರನ್ನೂ ಅಲ್ಲಿ ನಿಯೋಜಿಸಲಾಗಿತ್ತು. ಈ ವೇಳೆ ಕಾರ್ಪ್ಸ್​ ಆಫ್​ ಇಂಜಿನಿಯರ್​​ ರೆಜಿಮೆಂಟ್​ನ್ನು ಮನೋಜ್ ಪಾಂಡೆ ಮುನ್ನಡೆಸಿದ್ದರು.

ಮನೋಜ್​ ಪಾಂಡೆ ತಮ್ಮ 39 ವರ್ಷಗಳ ಸೇನಾ ವೃತ್ತಿಯಲ್ಲಿ ಪಶ್ಚಿಮದ ಗಡಿಯ ಇಂಜಿನಿಯರ್​ ಬ್ರಿಗೇಡ್​, ಎಲ್​ಒಸಿ ಬಳಿ ಪದಾತಿ ದಳ, ಲಡಾಖ್​ ವಲಯದಲ್ಲಿ ಪರ್ವತ ವಿಭಾಗದ ದಳ ಮತ್ತು ಈಶಾನ್ಯದ ಗಡಿಯಲ್ಲೂ ಒಂದು ಕಾರ್ಪ್ಸ್​​ನ್ನು ಮುನ್ನಡೆಸಿದ್ದಾರೆ. ಪೂರ್ವ ಕಮಾಂಡ್‌ನ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮೊದಲು ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್‌ನ ಕಮಾಂಡರ್-ಇನ್-ಚೀಫ್ ಆಗಿದ್ದರು.

ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್‌) ಬಿಪಿನ್‌ ರಾವತ್‌ ಹಾಗೂ ಅವರ ಕುಟುಂಬದವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ 2021ರ ಡಿಸೆಂಬರ್ 8ರಂದು ತಮಿಳುನಾಡಿನ ಕೂನೂರಿನಲ್ಲಿ ಪತನಗೊಂಡು ಅವರು ಮೃತಪಟ್ಟಿದ್ದರು.

2019ರಲ್ಲಿ ಬಿಜೆಪಿ ನೇತೃತ್ವದ ಮೋದಿ ಸರ್ಕಾರವು ಅಧಿಕಾರಕ್ಕೆ ಬಂದ 6 ತಿಂಗಳಲ್ಲಿಯೇ ಸಿಡಿಎಸ್ ಸೇನಾ ಮುಖ್ಯಸ್ಥರನ್ನು ನೇಮಕ ಮಾಡಿಕೊಂಡಿತ್ತು. ದೇಶದ ಉನ್ನತ ಮಿಲಿಟರಿ ಮೂಲ ಸೌಕರ್ಯಗಳಲ್ಲಿ ಅನೇಕ ಸುಧಾರಣೆಗಳಲ್ಲಿ ಒಂದಾಗಿದೆ ಎಂದು ಪ್ರಶಂಸಿಸಲಾಗಿದೆ.

ಸಿಡಿಎಸ್ ಹುದ್ದೆಯನ್ನು ನಿಭಾಯಿಸಲು ತಕ್ಕ ಅಧಿಕಾರಿಗಳು ಮಾತ್ರ ನೇಮಕ ಮಾಡಲಾಗುತ್ತದೆ. ಏಕೆಂದರೆ ಇದು ದೇಶದ ಅತ್ಯಂತ ಬಲಿಷ್ಠ ಮಿಲಿಟರಿಯ ಕೇಂದ್ರ ವಿಭಾಗವೆಂದು ನಿರೀಕ್ಷಿಸಲಾಗಿದೆ. ದೇಶದ ಎಲ್ಲಾ ಯುದ್ಧದ ರಚನೆಗಳು ನೇರವಾಗಿ ವರದಿ ಮಾಡುತ್ತವೆ. ಪ್ರಸ್ತುತ ಹೆಚ್ಚುವರಿ ಕಾರ್ಯದರ್ಶಿ ಶ್ರೇಣಿಯ ಲೆಫ್ಟಿನೆಂಟ್‌ ಜನರಲ್‌ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಮಿಲಿಟರಿ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿ ಸಿಡಿಎಸ್ ಅವರನ್ನು ನೇಮಕ ಮಾಡಲಾಗುತ್ತದೆ.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 200 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 44 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 50 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 109 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 46 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 88 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ