ಅಂತರ್ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಯಲು ರಾಜ್ಯಕ್ಕೆ ಬೇರೆ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ನಿಬಂಧನೆಗಳನ್ನು ವಿಧಿಸಲಾಗಿದೆ.

ಇತ್ತೀಚಿಗೆ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರ ಅನ್ಲಾಕ್ -3 ಜಾರಿಗೊಳಿಸಿ ಹೊರಡಿಸಿದ ಮಾರ್ಗಸೂಚಿಯನ್ವಯ ವ್ಯಕ್ತಿಗಳ ಮತ್ತು ಸರಕುಗಳ ಅಂತರರಾಜ್ಯ ಚಲನೆಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಹೇಳಿದ್ದು ಮಾರ್ಗಸೂಚಿಗಳನ್ನು ನೀಡಲಾಗಿದೆ.

ರಾಜ್ಯಕ್ಕೆ ಬೇರೆ ರಾಜ್ಯಗಳಿಂದ ಬರುವ ಪ್ರಯಾಣಿಕರು ಈ ಹಿಂದೆ ಸೇವಾಸಿಂಧು ಪೋರ್ಟಲ್ ನಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕಿತ್ತು . ಹಾಗೇ ರಾಜ್ಯದ ಗಡಿ ಭಾಗ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ವಿಮಾನ ನಿಲ್ದಾಣಗಳಲ್ಲಿ ಪ್ರವೇಶ ಮಾಡುವ ವೇಳೆ ವೈದ್ಯಕೀಯ ತಪಾಸಣೆ ನಡೆಸಬೇಕಿತ್ತು. ಇದೀಗ ಈ ಎಲ್ಲಾ ನಿಯಮಗಳನ್ನು ಸಡಿಲಿಕೆ ಮಾಡಲಾಗಿದೆ.

ಜಿಲ್ಲಾ ಸ್ವೀಕಾರ ಕೇಂದ್ರಗಳಲ್ಲಿ ತಪಾಸಣೆಗೆ ಒಳಗಾಗಬೇಕು. ಪ್ರಯಾಣಿಕರ ವರ್ಗೀಕರಣ ಮಾಡಬೇಕು. ಕೈಗಳಮೇಲೆ ಸೀಲ್ ಹಾಕೋದು ಹಾಗೂ 14 ದಿನ ಕ್ವಾರಂಟೈನ್ ಇವುಗಳನ್ನೆಲ್ಲಾ ಕೈ ಬಿಡಲಾಗಿದೆ.

ಹಾಗೇ ಹೊಸ ಮಾರ್ಗಸೂಚಿ ಪ್ರಕಾರ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಸೋಂಕಿನ ಲಕ್ಷಣಗಳು ಇದ್ದಲ್ಲಿ ತಕ್ಷಣವೇ ಸ್ವಯಂ ಪ್ರತ್ಯೇಕವಾಗಿರಬೇಕು. ವೈದ್ಯಕೀಯ ಸಮಾಲೋಚನೆ ಪಡೆಯಬೇಕು. ಆಪ್ತಮಿತ್ರ 14410 ಸಹಾಯವಾಣಿಗೆ ಕರೆ ಮಾಡಬೇಕು. ಕಡ್ಡಾಯವಾಗಿ ದೈಹಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಸುವಂತೆ ತಿಳಿಸಲಾಗಿದೆ. ಈ ಸುತ್ತೋಲೆ ರಾಜ್ಯಕ್ಕೆ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಆಗಮಿಸುವ ವ್ಯಾಪಾರಿಗಳು, ವಿದ್ಯಾರ್ಥಿಗಳು, ಕಾರ್ಮಿಕರು, ಸಾರಿಗೆ ಮಧ್ಯಂತರ ಇತರರಿಗೆ ಅನ್ವಯವಾಗುತ್ತದೆ ಎಂದು ಹೇಳಲಾಗಿದೆ.

Spread the love
  • Related Posts

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಜಿಲ್ಲೆಯಾದ್ಯಂತ ಬಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ನದಿತೀರಗಳಿಗೆ ತಗ್ಗು ಪ್ರದೇಶಗಳಿಗೆ ತೆರಳದಂತೆ ಸೂಚನೆ ನೀಡಿದೆ ಮುನ್ನೆಚ್ಚರಿಕೆ ಕ್ರಮವಾಗಿ ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿಸಲಾಗಿದೆ Spread the love

    Spread the love

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ಸೋಮಂತಡ್ಕದಲ್ಲಿ ರಸ್ತೆ ಕಾಮಗಾರಿ ನಡೆದಿದ್ದು ಬಳಿಕ ಚರಂಡಿ ನಿರ್ಮಿಸಿದ್ದು, ಕೆಲವು ಕಡೆ ಮುಚ್ಚಲಾಗಿಲ್ಲ, ಇಂದು ಸಂಜೆ ತೆರೆದ ಚರಂಡಿಯ ಬಗ್ಗೆ ಅರಿವಿಲ್ಲದೆ ಅಂಗಡಿಯಿಂದ ಸಾಮಾಗ್ರಿ ಖರೀದಿಸಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯಗೊಂಡಿರುವ…

    Spread the love

    You Missed

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 138 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 154 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 97 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 56 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

    • By admin
    • June 11, 2025
    • 68 views
    ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು

    • By admin
    • June 11, 2025
    • 75 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು