ಅಂತರ್ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಯಲು ರಾಜ್ಯಕ್ಕೆ ಬೇರೆ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ನಿಬಂಧನೆಗಳನ್ನು ವಿಧಿಸಲಾಗಿದೆ.

ಇತ್ತೀಚಿಗೆ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರ ಅನ್ಲಾಕ್ -3 ಜಾರಿಗೊಳಿಸಿ ಹೊರಡಿಸಿದ ಮಾರ್ಗಸೂಚಿಯನ್ವಯ ವ್ಯಕ್ತಿಗಳ ಮತ್ತು ಸರಕುಗಳ ಅಂತರರಾಜ್ಯ ಚಲನೆಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಹೇಳಿದ್ದು ಮಾರ್ಗಸೂಚಿಗಳನ್ನು ನೀಡಲಾಗಿದೆ.

ರಾಜ್ಯಕ್ಕೆ ಬೇರೆ ರಾಜ್ಯಗಳಿಂದ ಬರುವ ಪ್ರಯಾಣಿಕರು ಈ ಹಿಂದೆ ಸೇವಾಸಿಂಧು ಪೋರ್ಟಲ್ ನಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕಿತ್ತು . ಹಾಗೇ ರಾಜ್ಯದ ಗಡಿ ಭಾಗ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ವಿಮಾನ ನಿಲ್ದಾಣಗಳಲ್ಲಿ ಪ್ರವೇಶ ಮಾಡುವ ವೇಳೆ ವೈದ್ಯಕೀಯ ತಪಾಸಣೆ ನಡೆಸಬೇಕಿತ್ತು. ಇದೀಗ ಈ ಎಲ್ಲಾ ನಿಯಮಗಳನ್ನು ಸಡಿಲಿಕೆ ಮಾಡಲಾಗಿದೆ.

ಜಿಲ್ಲಾ ಸ್ವೀಕಾರ ಕೇಂದ್ರಗಳಲ್ಲಿ ತಪಾಸಣೆಗೆ ಒಳಗಾಗಬೇಕು. ಪ್ರಯಾಣಿಕರ ವರ್ಗೀಕರಣ ಮಾಡಬೇಕು. ಕೈಗಳಮೇಲೆ ಸೀಲ್ ಹಾಕೋದು ಹಾಗೂ 14 ದಿನ ಕ್ವಾರಂಟೈನ್ ಇವುಗಳನ್ನೆಲ್ಲಾ ಕೈ ಬಿಡಲಾಗಿದೆ.

ಹಾಗೇ ಹೊಸ ಮಾರ್ಗಸೂಚಿ ಪ್ರಕಾರ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಸೋಂಕಿನ ಲಕ್ಷಣಗಳು ಇದ್ದಲ್ಲಿ ತಕ್ಷಣವೇ ಸ್ವಯಂ ಪ್ರತ್ಯೇಕವಾಗಿರಬೇಕು. ವೈದ್ಯಕೀಯ ಸಮಾಲೋಚನೆ ಪಡೆಯಬೇಕು. ಆಪ್ತಮಿತ್ರ 14410 ಸಹಾಯವಾಣಿಗೆ ಕರೆ ಮಾಡಬೇಕು. ಕಡ್ಡಾಯವಾಗಿ ದೈಹಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಸುವಂತೆ ತಿಳಿಸಲಾಗಿದೆ. ಈ ಸುತ್ತೋಲೆ ರಾಜ್ಯಕ್ಕೆ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಆಗಮಿಸುವ ವ್ಯಾಪಾರಿಗಳು, ವಿದ್ಯಾರ್ಥಿಗಳು, ಕಾರ್ಮಿಕರು, ಸಾರಿಗೆ ಮಧ್ಯಂತರ ಇತರರಿಗೆ ಅನ್ವಯವಾಗುತ್ತದೆ ಎಂದು ಹೇಳಲಾಗಿದೆ.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 6 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 11 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ