ಬೆಂಗಳೂರಿನ ಜನೀಶ್ ಚಿಕಿತ್ಸೆಗೂ ಸ್ಪಂಧಿಸುವರೇ ಪ್ರಧಾನಿ ಮೋದಿ! ರಾಜ್ಯದ ಜನಪ್ರತಿನಿಧಿಯವರು ಈ ಬಗ್ಗೆ ಗಮನ ಹರಿಸಿ

ಬೆಂಗಳೂರು: ಬೆಂಗಳೂರಿನ 11 ತಿಂಗಳ ಮುದ್ದಾದ ಕಂದಮ್ಮವೊಂದು ದೊಡ್ಡ ಸಮಸ್ಯೆಯಿಂದ ಬಳಲುತ್ತಿದೆ. ಈ ಮಗು ಬದುಕಬೇಕಾದರೆ 16 ಕೋಟಿಯ ಇಂಜೆಕ್ಷನ್ ಬೇಕೇ ಬೇಕು. ಆದ್ರೆ ಅಷ್ಟೊಂದು ದುಡ್ಡು ಹೊಂದಿಸಲಾಗದೇ ಮಗುವಿನ ಹೆತ್ತವರು ಇದೀಗ ಕಣ್ಣೀರಲ್ಲಿ ಕೈತೊಳುತ್ತಿದ್ದಾರೆ.

ಮುಂಬೈನ 5 ತಿಂಗಳಿನ ಟೀರಾಗೆ ಬೇಕಿರುವ ‘ಔಷಧಿ’ ಮೇಲಿನ 6 ಕೋಟಿ ರೂ.ಜಿಎಸ್’ಟಿ ಮನ್ನಾ ಮಾಡಿದಂತೆ ಪ್ರಧಾನಿ ಮೋದಿಯವರು ಕರ್ನಾಟಕದ ರಾಜಧಾನಿ ಬೆಂಗಳೂರಿನ ಸಂಜೀವಿನಿ ನಗರದ ಜನೀಶ್ ಚಿಕಿತ್ಸೆಗೆ ಸ್ಪಂಧಿಸುವಂತೆ ನಮ್ಮ ರಾಜ್ಯದ ಶಾಸಕರು ಹಾಗೂ ಮಂತ್ರಿಯವರು ಪ್ರಧಾನಿ ಮೋದಿಯವರಿಗೆ ಪತ್ರ ಬರೆಯುವ ಅನಿವಾರ್ಯತೆಯಿದೆ. ಇದು “ಕಾಲನಿರ್ಣಯನ್ಯೂಸ್” ಕಳಕಳಿಯ ಮನವಿ

ಬೆಂಗಳೂರಿನ ಸಂಜೀವಿನಿ ನಗರದ ನಿವಾಸಿಗಳಾಗಿರುವ ನವೀನ್​ಕುಮಾರ್-ಜ್ಯೋತಿ ದಂಪತಿ ಪುತ್ರ 11 ತಿಂಗಳ ಕಂದ ಜನೀಶ್ ವಿಶ್ವವೇ ಬೆಚ್ಚಿ ಬೀಳಿಸೋ ಕಾಯಿಲೆಗೆ ತುತ್ತಾಗಿದ್ದಾನೆ. ಮಗುವಿನ ಕುಟುಂಬದ ಪರಿಸ್ಥಿತಿಯೂ ಅಷ್ಟೇನು ಚೆನ್ನಾಗಿಲ್ಲ. ಇದರ ಮಧ್ಯೆ ಮಗುವಿಗೆ ಜೀನ್ ಸಮಸ್ಯೆ ಕಾಣಿಸಿಕೊಂಡಿದೆ. ಸ್ಪೈನಲ್ ಮಸ್ಕ್ಯೂಲರ್ ಆಟ್ರೋಪಿ ಸಮಸ್ಯೆ ಅಂದ್ರೆ, ಬೆನ್ನು ಮೂಳೆಯ ಸ್ನಾಯು ಕ್ಷೀಣತೆ ಅಂತಾ. ವೈದ್ಯಲೋಕದಲ್ಲೇ ಇದು ಅಪರೂಪದ ಸಮಸ್ಯೆ.

ಈಗ ಜನೀಶ್ ಉಳಿಯಬೇಕಾದ್ರೆ ಬರೋಬ್ಬರಿ 16 ಕೋಟಿಯ ಮೆಡಿಸಿನ್ ಬೇಕಾಗಿದೆ. ಅದೂ ಅಮೆರಿಕದಲ್ಲಿ ಸಿಗುವ ಔಷಧಿಯೇ ಬೇಕು. ಇಷ್ಟೊಂದು ದುಡ್ಡು ಎಲ್ಲಿಂದ ತರೋದು ಅಂತಾ ತಂದೆ ನವೀನ್​ಕುಮಾರ್ ಕಣ್ಣೀರಿಡ್ತಿದ್ದಾರೆ.

ಈ ವಿಚಿತ್ರ ರೋಗದಿಂದ ಬಳಲುತ್ತಿರುವ ಜನೀಶ್ ಗೆ ದೇಹದ ಯಾವುದೇ ಅಂಗಾಂಗ ಕೆಲಸ ಮಾಡುವುದಿಲ್ಲ. ಉಸಿರಾಡಲು ಕಷ್ಟವಿದೆ. ಆಹಾರ ಸೇವಿಸುವುದು ಸಾಧ್ಯವಿಲ್ಲ. ಸಧ್ಯ ಜನೀಶ್ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಗುವನ್ನು ಉಳಿಸಿಕೊಳ್ಳಲು ತಂದೆ-ತಾಯಿ ಹೃದಯವಂತರು ಸಹಾಯ ಮಾಡುವಂತೆ ಮೊರೆಯಿಟ್ಟಿದ್ದಾರೆ.

ಹೆಸರು -Jyothi
Bank-indian overseas bank
Ac no-374201000000285
Ifce code-IOBA0003742
Sahakar Nagar Branch, Bangalore
Phone pay -9611789719

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 193 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 42 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 49 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 105 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 46 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 87 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ