ಜನಪರ ಕೆಲಸಗಳನ್ನು ಸಮಾಜದ ಎದುರು ಹಿಡಿಯುವ ಕನ್ನಡಿ ಪತ್ರಿಕೆ: ಶಿರಿಯಾರ ಜೆ.ಸಿ.ಐ ವತಿಯಿಂದ ಪತ್ರಕರ್ತ ಲಕ್ಷ್ಮೀಮಚ್ಚಿನರಿಗೆ ಸಮ್ಮಾನ


ಕುಂದಾಪುರ: ಜನಪರವಾದ ಕೆಲಸಗಳನ್ನು ಸಮಾಜದ ಎದುರು ಎತ್ತಿಹಿಡಿದು ಅದರ ಅಂಕುಡೊಂಕುಗಳನ್ನು ಸರಿಪಡಿಸುವುದೇ ಪತ್ರಿಕೆಗಳ ಕೆಲಸ ಎಂದು ನ್ಯಾಯವಾದಿ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಹೇಳಿದರು.

ಜೆಸಿಐ ಕುಂದಾಪುರ ಸಿಟಿ ವತಿಯಿಂದ ಸೆಲ್ಯೂಟ್ ದ ಸೈಲೆಂಟ್ ವರ್ಕರ್ ಎಂಬ ಕಾರ್ಯಕ್ರಮದಡಿಯಲ್ಲಿ ನಡೆದ ಸಮ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಮಾಜದ ವಿವಿಧ ಸ್ತರಗಳಲ್ಲಿ ಇರುವ ಲೋಪದೋಷಗಳನ್ನು ಪತ್ತೆ ಹಚ್ಚಿ, ಒಳಿತುಗಳನ್ನು ಕಂಡುಹುಡುಕಿ ಇತರರಿಗೆ ತೋರಿಸುವ ಕನ್ನಡಿಯಂತಹ ಮಾಧ್ಯಮ ಪತ್ರಿಕೆ. ಅಂತಹ ಕೆಲಸವನ್ನು ಕುಂದಾಪುರದ ವಿವಿಧ ಪತ್ರಕರ್ತರು ನಡೆಸುತ್ತಿದ್ದಾರೆ ಎಂದರು.
ಪುರಸಭೆ ಉಪಾಧ್ಯಕ್ಷ ಸಂದೀಪ್ ಖಾರ್ವಿ, ಆಡಳಿತದವರಿಗೂ ಅನೇಕ ಬಾರಿ ಸಮಸ್ಯೆಗಳು ಗಮನಕ್ಕೆ ಬರುವುದಿಲ್ಲ. ಆದರೆ ಮಾಧ್ಯಮದವರಿಗೆ ನಾವೆಲ್ಲಿ ಎಡವುತ್ತಿದ್ದೇವೆ ಎನ್ನುವುದು ತಿಳಿಯುತ್ತದೆ. ಅಂತಹ ಎಚ್ಚರಿಸುವ ಕೆಲಸ ಮಾಧ್ಯಮಗಳಿಂದ ನಡೆಯುತ್ತಿದೆ ಎಂದರು.

ಪತ್ರಕರ್ತ ಲಕ್ಷ್ಮೀ ಮಚ್ಚಿನ ಅವರನ್ನು ಜೆಸಿಐ ಸಿಟಿ ಕುಂದಾಪುರದ ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ ಸಮ್ಮಾನಿಸಿದರು.

ಈ ಸಂದರ್ಭದಲ್ಲಿ ಜೆಸಿಐ ಕುಂದಾಪುರ ಸಿಟಿಯ ಅಧ್ಯಕ್ಷ ವಿಜಯ್ ಭಂಡಾರಿ, ಜೆಡಿಎಸ್ ಮುಖಂಡ ಮನ್ಸೂರ್ ಇಬ್ರಾಹಿಂ, ಜೆಸಿಐ ವಲಯಾದಿಕಾರಿ ಪ್ರಶಾಂತ್ ಹವಾಲ್ದಾರ್ , ಜೆ ಸಿರೇಟ್ ಅಧ್ಯಕ್ಷೆ ಡಾ| ಸೋನಿ, ಪೂರ್ವ ಅಧ್ಯಕ್ಷ ರು ಹಾಗೂ ನ್ಯಾಯವಾದಿಗಳಾದ ರಾಘವೇಂದ್ರ ಚರಣ್ ನಾವಡ ,ಜಯಚಂದ್ರ ಶೆಟ್ಟಿ ,ಗಿರೀಶ್ ಹೆಬ್ಬಾರ್ ಸದಸ್ಯರಾದ ಅಭಿಲಾಷ್, ಉಪನ್ಯಾಸಕಿ ಸರೋಜಾ, ಕಾರ್ಯದರ್ಶಿ ಗುರುರಾಜ್ ಕೊತ್ವಾಲ್ ಇನ್ನಿತರರು ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 6 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 11 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ