ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ವತಿಯಿಂದ, ರುಡ್ ಸೆಟ್ ಸಂಸ್ಥೆಯ ಸಹಯೋಗದಲ್ಲಿ ನವಜೀವನ ಸದಸ್ಯರಿಗೆ ಹೈನುಗಾರಿಕೆ ತರಬೇತಿ ಕಾರ್ಯಗಾರದ ಉದ್ಘಾಟನಾ ಕಾರ್ಯಕ್ರಮ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ಕಾರ್ಯಕ್ರಮದ ಮೂಲಕ ದುಶ್ಚಟಗಳನ್ನು ಬಿಟ್ಟು ನವಜೀವನಕ್ಕೆ ಕಾಲಿರಿಸಿದ ನವಜೀವನ ಸದಸ್ಯರಿಗೆ ಬದುಕು ಕಟ್ಟಿಕೊಳ್ಳಲು ಉಪಯುಕ್ತವಾಗುವಂತೆ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆ(ರುಡ್ ಸೆಟ್) ಅರಿಶಿನಕುಂಟೆ ನೆಲಮಂಗಲ ಬೆಂಗಳೂರಿನಲ್ಲಿ ರಾಜ್ಯದಲ್ಲೇ ಪ್ರಪ್ರಥಮ ಭಾರಿಗೆ 10 ದಿನಗಳ ಹೈನುಗಾರಿಕೆ ತರಬೇತಿಯನ್ನು ಬೆಂಗಳೂರು ಪ್ರಾದೇಶಿಕ ವ್ಯಾಪ್ತಿಯ ಜನಜಾಗೃತಿ ವೇದಿಕೆಯ ವತಿಯಿಂದ ನಡೆಸಲಾಯಿತು.

ಬೆಂಗಳೂರು ಪ್ರಾದೇಶಿಕ ವ್ಯಾಪ್ತಿಯ ನವಜೀವನ ಸಮಿತಿಯ ಪಾನಮುಕ್ತ ಸದಸ್ಯರಿಗೆ Rudset ಅರಿಶಿನಕುಂಟೆ ನೆಲಮಂಗಲದಲ್ಲಿ ವಿಶೇಷವಾಗಿ ಸ್ವಉದ್ಯೋಗದಡಿಯಲ್ಲಿ 10 ದಿನದ ಹೈನುಗಾರಿಕೆ ತರಬೇತಿ ಕಾರ್ಯಗಾರವನ್ನು ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಶೀನಪ್ಪ M ರವರು ಉದ್ಘಾಟಿಸಿದರು.

ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಧರ್ಮಸ್ಥಳದ ಧರ್ಮಾಧಿಕಾರಿಯವರು ಹೇಳಿದಂತೆ “ಸತತವಾಗಿ ಮೂರು ವರ್ಷ ಉನ್ನತ ವ್ಯಾಸಂಗ ಮಾಡಿ ಬೇರೆಯವರ ಲೆಕ್ಕ ಬರೆಯುವ ಬದಲು ಸ್ವಉದ್ಯೋಗ ಮಾಡಿ ತಮ್ಮ ಲೆಕ್ಕವನ್ನು ನಾವೇ ಬರೆಯುವುದು ಸೂಕ್ತ” ಇದಕ್ಕೆ ಪೂರಕವಾಗಿ ದುಶ್ಚಟ ಮುಕ್ತ ಜೀವನದೊಂದಿಗೆ ಸ್ವಾವಲಂಬಿಗಳಾಗಿ ಬದುಕಬೇಕು ಅದಕ್ಕೆ ಅನುಗುಣವಾಗಿ ಹೈನುಗಾರಿಕೆ ತರಬೇತಿ ಕಾರ್ಯಕ್ರಮ ಹಾಗೂ ಯಾವುದೇ ಕಷ್ಟದ ಸಮಯದಲ್ಲಿ ಮನೆಯಲ್ಲಿ ಒಂದು ಹಸು ಇದ್ದರೆ ಎಲ್ಲಾ ಕಷ್ಟಗಳು ದೂರವಾಗುತ್ತದೆ ಎಂಬ ಹಿರಿಯರ ಮಾತಿನಂತೆ ನೀವು ಕೂಡ ಮಾದರಿ ಸದಸ್ಯರಾಗಿ ಬಾಳಿ ಬದುಕಿ ಎಂದು ಶುಭ ಹಾರೈಸಿದರು.

ಈ ಸಂಧರ್ಭದಲ್ಲಿ ಹಿರಿಯ ಉಪನ್ಯಾಸಕರಾದ ಉದಯ್ ಕುಮಾರ್, ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಉಪಸ್ಥಿತರಿದ್ದರು.

ತರಬೇತಿ ಕಾರ್ಯಕ್ರಮದಲ್ಲಿ 30 ಜನ ಪಾನಮುಕ್ತ ಸದಸ್ಯರು ಭಾಗವಹಿಸಿದ್ದು ತುಮಕೂರು ಜಿಲ್ಲೆಯ ತಿಪಟೂರು ಹಾಗೂ ತುರುವೇಕೆರೆ ಯೋಜನಾ ಕಛೇರಿ ವ್ಯಾಪ್ತಿಯಿಂದ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ದಿನಾಂಕ 16.12.2020 ರಂದು ಈ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ವಿ.ರಾಮಸ್ವಾಮಿಯವರು ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ.

Spread the love
  • Related Posts

    ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ

    ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸ್ವ ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ 15.10.24 ರಿಂದ 24.10.24ರ ವರೆಗೆ (10ದಿನ) ಪ್ರತಿ…

    Spread the love

    ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ

    ನವರಾತ್ರಿ 9ನೇ ದಿನ: ಸಿದ್ಧಿದಾತ್ರಿ ದೇವಿಯನ್ನು ಈ ಮಂತ್ರಗಳನ್ನು ಹೇಳುತ್ತಾ ಪೂಜಿಸಿದರೆ ಒಳ್ಳೆಯದು ನವರಾತ್ರಿಯ 9ನೇ ಹಾಗೂ ಕೊನೆಯ ದಿನದಂದು ತಾಯಿ ಸಿದ್ಧಿದಾತ್ರಿ ಯ ಪೂಜೆ ಮಾಡಲಾಗುವುದು. ಈ ದಿನವನ್ನು ತುಂಬಾ ಸಂಭ್ರಮ ಹಾಗೂ ಸಡಗರಿಂದ ಆಚರಣೆ ಮಾಡಲಾಗುತ್ತದೆ.ದುರ್ಗಾದೇವಿಯು ಈಶ್ವರ ದೇವರ…

    Spread the love

    You Missed

    ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

    • By admin
    • October 16, 2024
    • 32 views
    ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

    ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ

    • By admin
    • October 11, 2024
    • 59 views
    ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ

    ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ

    • By admin
    • October 11, 2024
    • 25 views
    ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ

    ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

    • By admin
    • October 7, 2024
    • 81 views
    ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

    ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ

    • By admin
    • October 2, 2024
    • 44 views
    ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು

    • By admin
    • October 1, 2024
    • 428 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು