ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ವತಿಯಿಂದ, ರುಡ್ ಸೆಟ್ ಸಂಸ್ಥೆಯ ಸಹಯೋಗದಲ್ಲಿ ನವಜೀವನ ಸದಸ್ಯರಿಗೆ ಹೈನುಗಾರಿಕೆ ತರಬೇತಿ ಕಾರ್ಯಗಾರದ ಉದ್ಘಾಟನಾ ಕಾರ್ಯಕ್ರಮ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ಕಾರ್ಯಕ್ರಮದ ಮೂಲಕ ದುಶ್ಚಟಗಳನ್ನು ಬಿಟ್ಟು ನವಜೀವನಕ್ಕೆ ಕಾಲಿರಿಸಿದ ನವಜೀವನ ಸದಸ್ಯರಿಗೆ ಬದುಕು ಕಟ್ಟಿಕೊಳ್ಳಲು ಉಪಯುಕ್ತವಾಗುವಂತೆ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆ(ರುಡ್ ಸೆಟ್) ಅರಿಶಿನಕುಂಟೆ ನೆಲಮಂಗಲ ಬೆಂಗಳೂರಿನಲ್ಲಿ ರಾಜ್ಯದಲ್ಲೇ ಪ್ರಪ್ರಥಮ ಭಾರಿಗೆ 10 ದಿನಗಳ ಹೈನುಗಾರಿಕೆ ತರಬೇತಿಯನ್ನು ಬೆಂಗಳೂರು ಪ್ರಾದೇಶಿಕ ವ್ಯಾಪ್ತಿಯ ಜನಜಾಗೃತಿ ವೇದಿಕೆಯ ವತಿಯಿಂದ ನಡೆಸಲಾಯಿತು.

ಬೆಂಗಳೂರು ಪ್ರಾದೇಶಿಕ ವ್ಯಾಪ್ತಿಯ ನವಜೀವನ ಸಮಿತಿಯ ಪಾನಮುಕ್ತ ಸದಸ್ಯರಿಗೆ Rudset ಅರಿಶಿನಕುಂಟೆ ನೆಲಮಂಗಲದಲ್ಲಿ ವಿಶೇಷವಾಗಿ ಸ್ವಉದ್ಯೋಗದಡಿಯಲ್ಲಿ 10 ದಿನದ ಹೈನುಗಾರಿಕೆ ತರಬೇತಿ ಕಾರ್ಯಗಾರವನ್ನು ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಶೀನಪ್ಪ M ರವರು ಉದ್ಘಾಟಿಸಿದರು.

ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಧರ್ಮಸ್ಥಳದ ಧರ್ಮಾಧಿಕಾರಿಯವರು ಹೇಳಿದಂತೆ “ಸತತವಾಗಿ ಮೂರು ವರ್ಷ ಉನ್ನತ ವ್ಯಾಸಂಗ ಮಾಡಿ ಬೇರೆಯವರ ಲೆಕ್ಕ ಬರೆಯುವ ಬದಲು ಸ್ವಉದ್ಯೋಗ ಮಾಡಿ ತಮ್ಮ ಲೆಕ್ಕವನ್ನು ನಾವೇ ಬರೆಯುವುದು ಸೂಕ್ತ” ಇದಕ್ಕೆ ಪೂರಕವಾಗಿ ದುಶ್ಚಟ ಮುಕ್ತ ಜೀವನದೊಂದಿಗೆ ಸ್ವಾವಲಂಬಿಗಳಾಗಿ ಬದುಕಬೇಕು ಅದಕ್ಕೆ ಅನುಗುಣವಾಗಿ ಹೈನುಗಾರಿಕೆ ತರಬೇತಿ ಕಾರ್ಯಕ್ರಮ ಹಾಗೂ ಯಾವುದೇ ಕಷ್ಟದ ಸಮಯದಲ್ಲಿ ಮನೆಯಲ್ಲಿ ಒಂದು ಹಸು ಇದ್ದರೆ ಎಲ್ಲಾ ಕಷ್ಟಗಳು ದೂರವಾಗುತ್ತದೆ ಎಂಬ ಹಿರಿಯರ ಮಾತಿನಂತೆ ನೀವು ಕೂಡ ಮಾದರಿ ಸದಸ್ಯರಾಗಿ ಬಾಳಿ ಬದುಕಿ ಎಂದು ಶುಭ ಹಾರೈಸಿದರು.

ಈ ಸಂಧರ್ಭದಲ್ಲಿ ಹಿರಿಯ ಉಪನ್ಯಾಸಕರಾದ ಉದಯ್ ಕುಮಾರ್, ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಉಪಸ್ಥಿತರಿದ್ದರು.

ತರಬೇತಿ ಕಾರ್ಯಕ್ರಮದಲ್ಲಿ 30 ಜನ ಪಾನಮುಕ್ತ ಸದಸ್ಯರು ಭಾಗವಹಿಸಿದ್ದು ತುಮಕೂರು ಜಿಲ್ಲೆಯ ತಿಪಟೂರು ಹಾಗೂ ತುರುವೇಕೆರೆ ಯೋಜನಾ ಕಛೇರಿ ವ್ಯಾಪ್ತಿಯಿಂದ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ದಿನಾಂಕ 16.12.2020 ರಂದು ಈ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ವಿ.ರಾಮಸ್ವಾಮಿಯವರು ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ.

Spread the love
  • Related Posts

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

    Spread the love

    You Missed

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 7 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 6 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 11 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 8 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 10 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ