ಜುಲೈ 20, 2020; ಸೋಮವಾರ : ಇಂದಿನ ರಾಶಿಭವಿಷ್ಯ

ಪಂಚಾಂಗ

ಶ್ರೀ ಶಾರ್ವರಿನಾಮ ಸಂವತ್ಸರ,
ದಕ್ಷಿಣಾಯನ ಪುಣ್ಯಕಾಲ,
ಗ್ರೀಷ್ಮ ಋತು, ಆಷಾಢ ಮಾಸ,
ಕೃಷ್ಣ ಪಕ್ಷ, ಅಮಾವಾಸ್ಯೆ ತಿಥಿ,
ಸೋಮವಾರ, ಪುನರ್ವಸು ನಕ್ಷತ್ರ

ರಾಹುಕಾಲ: ಬೆಳಗ್ಗೆ 7:42 ರಿಂದ 9:18
ಗುಳಿಕಕಾಲ: ಮಧ್ಯಾಹ್ನ 2:05 ರಿಂದ 3:41
ಯಮಗಂಡಕಾಲ: ಬೆಳಗ್ಗೆ 10:54 ರಿಂದ 12:30

ದಿನ ವಿಶೇಷ: ಆಷಾಡ ಅಮವಾಸ್ಯೆ/ ಭೀಮನ ಅಮಾವಾಸ್ಯೆ

ಮೇಷ

ವ್ಯವಹಾರದಲ್ಲಿ ಉತ್ತಮ ಧನಪ್ರಾಪ್ತಿ. ಕೌಟುಂಬಿಕ ನೆಮ್ಮದಿ. ಹೊಸ ಸಂಬಂಧಗಳು ಕೂಡಿಬರುವ ಸಾಧ್ಯತೆ. ದೂರದ ಪ್ರಯಾಣ ಅಷ್ಟೊಂದು ಶ್ರೇಯಸಲ್ಲ. ದೈನಂದಿನ ಕಾರ್ಯಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುವಿರಿ.

ವೃಷಭ

ವೈಯಕ್ತಿಕ ಜೀವನದಲ್ಲಿ ಸಾಧನೆಯೊಂದನ್ನು ಮಾಡಿದ ತೃಪ್ತಿ ನಿಮ್ಮದಾಗಲಿದೆ. ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಕಬ್ಬಿಣ, ಸಿಮೆಂಟ್‌ ಮುಂತಾದ ಕಟ್ಟಡ ಸಾಮಗ್ರಿಗಳ ವ್ಯಾಪಾರದಲ್ಲಿ ಉತ್ತಮ ಲಾಭ.

ಮಿಥುನ

ಮಂಗಳಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಲಿದ್ದೀರಿ. ಬಂಧು–ಬಾಂಧವರ ಭೇಟಿಯಿಂದಾಗಿ ಸಂಭ್ರಮ. ಕಲಾವಿದರಿಗೆ ತಮ್ಮ ಪ್ರತಿಭೆಯನ್ನು ತೋರಿಸಲು ಉತ್ತಮ ಅವಕಾಶ ದೊರಕಲಿದೆ.

ಕಟಕ

ಹೊಸ ಮನೆಯ ಕನಸು ನನಸಾಗಲಿದೆ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶದ ಬಾಗಿಲು ತೆರೆಯುವ ಸಾಧ್ಯತೆ. ವಾಹನಗಳ ವಿಷಯದಲ್ಲಿ ಸ್ವಲ್ಪ ಮಟ್ಟಿನ ಎಚ್ಚರಿಕೆ ಅಗತ್ಯ. ಸಂಗಾತಿಯ ಸಹಕಾರದಿಂದ ಸಂತಸ.

ಸಿಂಹ

ಕ್ರೀಡಾಪಟುಗಳಿಗೆ ತಮ್ಮ ಸಾಮರ್ಥ್ಯವನ್ನು ತೋರಿಸುವ ಎಲ್ಲ ಅವಕಾಶಗಳು ಕಂಡುಬರುತ್ತಿದೆ. ನೂತನ ಕಾರ್ಯಯೋಜನೆಗಳಲ್ಲಿ ತಲ್ಲೀನರಾಗುವಿರಿ. ಆರೋಗ್ಯದ ಬಗ್ಗೆ ವಿಶೇಷ ಗಮನ ಅಗತ್ಯ.

ಕನ್ಯಾ

ಬಹಳ ಪ್ರಯತ್ನದಿಂದ ಮಾಡಿದ ಕೆಲಸಗಳಲ್ಲಿ ಉತ್ತಮ ಫಲ. ಮಕ್ಕಳಿಂದ ಮನೆಯಲ್ಲಿ ಸಂತೋಷದ ವಾತಾವರಣ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ. ವೃಥಾ ಖರ್ಚು ಸಂಭವ.

ತುಲಾ

ವಾಹನ ಚಾಲನೆಯಲ್ಲಿ ಜಾಗರೂಕರಾಗಿರಿ. ವೆಚ್ಚದ ಮೇಲೆ ಹಿಡಿತವಿರಲಿ. ನೆರೆಹೊರೆಯವರೊಂದಿಗೆ ವಿನಾಕಾರಣ ದ್ವೇಷ ಉಂಟಾದೀತು. ಶಾರದಾ ದೇವಿಯ ಆರಾಧನೆ ಮಾಡಿ. ದೂರದ ಪ್ರಯಾಣ ಸಾಧ್ಯತೆ.

ವೃಶ್ಚಿಕ

ಕುಟುಂಬಕ್ಕೆ ಹೊಸ ಸದಸ್ಯರೊಬ್ಬರು ಸೇರ್ಪಡೆಯಾಗುವ ಲಕ್ಷಣಗಳು ಕಂಡುಬರುತ್ತಿವೆ. ವಿದ್ಯಾ ಸಂಪನ್ನರಿಗೆ ಗೌರವ ದೊರೆಯಲಿದೆ. ಸಂಗಾತಿಯ ಆಶೋತ್ತರಗಳನ್ನು ಈಡೇರಿಸಲಿದ್ದೀರಿ.

ಧನು

ಹಣಕಾಸಿನ ವ್ಯವಹಾರದಲ್ಲಿ ಮುಲಾಜಿಗೆ ಒಳಗಾಗುವ ಸಾಧ್ಯತೆ. ಹಿತಮಿತವಾದ ಮಾತಿನಿಂದ ಬಾಂಧವ್ಯ ವೃದ್ಧಿ. ಆತ್ಮೀಯರೊಂದಿಗೆ ಔತಣಕೂಟಗಳಲ್ಲಿ ಭಾಗವಹಿಸುವ ಸಾಧ್ಯತೆ.

ಮಕರ

ಆರ್ಥಿಕ ಅನುಕೂಲತೆಗಳು ಕೂಡಿಬರಲಿವೆ. ವಿವಾಹಾಕಾಂಕ್ಷಿಗಳಿಗೆ ಸರಿಯಾದ ಸಂಬಂಧಗಳು ಕೂಡಿಬರುವ ಲಕ್ಷಣವಿದೆ. ಸ್ವಯಂ ಉದ್ಯೋಗಿಗಳಿಗೆ ವ್ಯವಹಾರದಲ್ಲಿ ಹಿನ್ನಡೆ. ಬಹುದಿನಗಳ ಆಸೆ ಈಡೇರಲಿದೆ.‌

ಕುಂಭ

ಭೂಮಿ ಮಾರಾಟ, ಖರೀದಿಗಳಲ್ಲಿ ತೊಡಗಿರುವವರಿಗೆ ಅಧಿಕ ಲಾಭ. ಸರ್ಕಾರದ ಕಾನೂನಿನ ಅನ್ವಯ ತೊಂದರೆಗಳು ಎದುರಾಗುವ ಸಾಧ್ಯತೆ. ಮನೆಯಲ್ಲಿ ಹರ್ಷ ಮೂಡುವುದು.

ಮೀನ

ಹಿಂದಿನ ಬಾಕಿ ವ್ಯವಹಾರಗಳು ಪೂರ್ಣ ಚುಕ್ತಗೊಂಡು ಋಣ ಬಾಧೆಯಿಂದ ಮುಕ್ತರಾಗುವಿರಿ. ಮನೆಯವರೊಂದಿಗೆ ಸಮಾರಂಭ ವೊಂದರಲ್ಲಿ ಭಾಗಿಯಾಗುವ ಸಾಧ್ಯತೆ. ಹಿರಿಯರ ಸಲಹೆಗಳಿಗೆ ಗೌರವವಿರಲಿ.

ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA

Spread the love
  • Related Posts

    ಶನಿವಾರದ ದಿನಭವಿಷ್ಯ ಯಾವ ರಾಶಿಯವರಿಗಿದೆ ಶುಭ ಫಲ!

    ಮೇಷ ರಾಶಿ: ನಿಮ್ಮ ಸಂಗಾತಿ ಎಂದಿಗೂ ಇಷ್ಟೊಂದು ಸುಂದರವಾಗಿರಲಿಲ್ಲ ಎಂದು ನಿಮಗೆ ಅರಿವಾಗುತ್ತದೆ. ನಿಮ್ಮ ಹಿತನುಡಿಗಳಿಂದ ಸಂಗಾತಿ ಫುಲ್ ಖುಷಿ. ನೀವು ಸಂಗಾತಿಯೊಡನೆ ದಿನಪೂರ್ತಿ ಕಾಲ ಕಳೆಯಬಹುದು. ಕೆಲಸದಲ್ಲಿ ಸಂಭವಿಸುವ ದೌರ್ಜನ್ಯ ಅದು ನಿಮಗೆ ಮುಂದಿನ ಭವಿಷ್ಯದಲ್ಲಿ ಪ್ರಜ್ವಲ ಶಕ್ತಿ ನೀಡುತ್ತದೆ.…

    Spread the love

    ಶನಿವಾರದ ರಾಶಿಭವಿಷ್ಯ ಯಾರಿಗೆಲ್ಲ ಇಂದು ಶುಭಕರ

    ಮೇಷ: ಸಾಲದ ಸಹಾಯ, ಆರ್ಥಿಕ ಚೇತರಿಕೆಯ ಲಕ್ಷಣ, ಉದ್ಯೋಗದಲ್ಲಿ ಹಿನ್ನಡೆ, ಆತುರದಿಂದ ಸಂಕಷ್ಟ ತಂದುಕೊಳ್ಳುವಿರಿ, ಶುಭಕಾರ್ಯಕ್ಕೆ ಮನಸ್ಸು ಮಾಡುವಿರಿ ವೃಷಭ: ಸ್ವಯಂಕೃತ ಅಪರಾಧಗಳು, ಆರ್ಥಿಕ ಸಂಕಷ್ಟದ ದಿವಸಗಳು, ಶುಭಕಾರ್ಯದ ಚಿಂತೆ, ಕಾರ್ಯ ವಿಘ್ನ, ಸ್ಥಿರಾಸ್ತಿ ವ್ಯವಹಾರಗಳಲ್ಲಿ ಸೋಲು, ತಂದೆಯಿಂದ ನಷ್ಟ, ಸರ್ಕಾರಿ…

    Spread the love

    You Missed

    ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ, ಆಮೆಗಳ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

    • By admin
    • February 15, 2026
    • 55 views
    ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ, ಆಮೆಗಳ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

    ಮುಂಡಾಜೆ ಮೈರಣಗುಡ್ಡೆಯಲ್ಲಿ ಕಾಣಿಸಿಕೊಂಡ ಬೆಂಕಿ

    • By admin
    • February 14, 2026
    • 23 views
    ಮುಂಡಾಜೆ ಮೈರಣಗುಡ್ಡೆಯಲ್ಲಿ  ಕಾಣಿಸಿಕೊಂಡ ಬೆಂಕಿ

    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್

    • By admin
    • February 14, 2026
    • 52 views
    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ  ಹಿಲಿಯಂ ಗ್ಯಾಸ್ ಬ್ಲಾಸ್ಟ್

    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    • By admin
    • February 13, 2026
    • 36 views
    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    ಅಪಘಾತದ ಪರಿಹಾರದ ಹಣ ನೀಡದ ಕಾರಣ 2 ಕೆಎಸ್ಆರ್ ಟಿಸಿ ಬಸ್ ಸೀಜ್ ಮಾಡಿದ ಕೋರ್ಟ್

    • By admin
    • February 13, 2026
    • 35 views
    ಅಪಘಾತದ ಪರಿಹಾರದ ಹಣ ನೀಡದ ಕಾರಣ 2 ಕೆಎಸ್ಆರ್ ಟಿಸಿ ಬಸ್ ಸೀಜ್ ಮಾಡಿದ ಕೋರ್ಟ್

    ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

    • By admin
    • February 11, 2026
    • 698 views
    ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ