ಜುಲೈ 24-2020 ಶುಕ್ರವಾರ: ಇಂದಿನ ರಾಶಿಭವಿಷ್ಯ ಯಾರಿಗೆ ಶುಭ ಯಾರಿಗೆ ಅಶುಭ ಫಲ ವೀಕ್ಷಿಸಿ

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ದಕ್ಷಿಣಾಯನ ಪುಣ್ಯಕಾಲ,
ವರ್ಷ ಋತು, ಶ್ರಾವಣ ಮಾಸ,
ಶುಕ್ಲ ಪಕ್ಷ, ಚತುರ್ಥಿ ತಿಥಿ,
ಮಧ್ಯಾಹ್ನ 2:35 ನಂತರ ಪಂಚಮಿ ತಿಥಿ,
ಶುಕ್ರವಾರ, ಪೂರ್ವಫಾಲ್ಗುಣಿ ನಕ್ಷತ್ರ
ಸಂಜೆ 4:02 ಉತ್ತರ ಫಾಲ್ಗುಣಿ ನಕ್ಷತ್ರ

ರಾಹುಕಾಲ: ಬೆಳಗ್ಗೆ 10:54 ರಿಂದ 12:29
ಗುಳಿಕಕಾಲ: ಬೆಳಗ್ಗೆ 7:44 ರಿಂದ 9:19
ಯಮಗಂಡಕಾಲ: ಮಧ್ಯಾಹ್ನ 3:40 ರಿಂದ 5:15

ಮೇಷ

ಬೇರೆಯವರ ಅಪಹಾಸ್ಯಕ್ಕೆ ಗುರಿಯಾಗುವ ಸಾಧ್ಯತೆಯಿದ್ದು ಗಂಭೀರ ನಡವಳಿಕೆ ಅಗತ್ಯ. ಮಾನಸಿಕ ಚಂಚಲತೆಯುಂಟಾಗಿ ದುಸ್ವಪ್ನಗಳು ಉಂಟಾಗಬಹುದು. ಮನೆಯವರ ಆರೋಗ್ಯದೆಡೆಗೆ ಹೆಚ್ಚಿನ ಗಮನ ಅಗತ್ಯ.

ವೃಷಭ

ಹಿರಿಯರೊಂದಿಗೆ ವಿಧೇಯತೆಯಿಂದ ನಡೆದುಕೊಳ್ಳಿ. ಸಾಮಾಜಿಕ ಕಾರ್ಯಗಳಿಂದಾಗಿ ನೆಮ್ಮದಿ. ವೃಥಾ ವೈಮನಸ್ಸು ಎದುರಾಗಬಹುದು. ಆರ್ಥಿಕ ವಿಷಯದಲ್ಲಿ ಯಥಾಸ್ಥಿತಿ ಮುಂದುವರೆದು, ಕೆಲಸ–ಕಾರ್ಯಗಳಲ್ಲಿ ಉತ್ಸಾಹ.

ಮಿಥುನ

ಕಣ್ಣು ಅಥವಾ ತಲೆನೋವಿನಿಂದ ಬಳಲುವ ಸಾಧ್ಯತೆ. ಅತಿಯಾದ ವಾದ–ವಿವಾದದಿಂದಾಗಿ ವೈರತ್ವ. ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆಯಿದ್ದು ಜಾಗೃತೆ ವಹಿಸಿ. ಅನಾವಶ್ಯಕ ದಂಡ ತೆರಬೇಕಾದಿತು.

ಕಟಕ

ಮನೆಯಲ್ಲಿ ಶುಭಕಾರ್ಯಗಳು ನೆರವೇರುವ ಸಾಧ್ಯತೆ. ನೌಕರಿಯಲ್ಲಿ ಬದಲಾವಣೆ ಕಂಡುಬರುವುದು. ಆರ್ಥಿಕ ಅನುಕೂಲತೆ ಉತ್ತಮಗೊಳ್ಳುವುದು. ಮಕ್ಕಳಿಂದ ಸಂತಸದ ಸುದ್ದಿ ಕೇಳುವಿರಿ. ಬಂಧುಗಳ ಸಮಾಗಮದ ನಿರೀಕ್ಷೆ.

ಸಿಂಹ

ನಿಮ್ಮ ನಿರ್ಣಯಗಳು ಫಲ ನೀಡುವವು. ಆದಾಯದಲ್ಲಿ ಹೆಚ್ಚಳ ಕಂಡುಬಂದು ಪರಿಸ್ಥಿತಿ ಸುಧಾರಿಸುವುದು. ವಾಹನ ಖರೀದಿ ಭಾಗ್ಯ ನಿಮ್ಮದಾಗಲಿದೆ. ಸ್ನೇಹಿತರೊಂದಿಗೆ ಸಂತೋಷ ಹಂಚಿಕೊಳ್ಳುವಿರಿ.

ಕನ್ಯಾ

ನಿಮ್ಮ ಕೆಲಸ–ಕಾರ್ಯಗಳು ಮಂದಗತಿಯಲ್ಲೂ ಪ್ರಗತಿ. ಉದರ ಸಂಬಂಧಿ ಸಣ್ಣಪುಟ್ಟ ತೊಂದರೆಗಳು ಕಂಡುಬರಬಹುದು. ಹೊಸ ಕಾರ್ಯಯೋಜನೆ ಪ್ರಾರಂಭಿಸದಿರುವುದೇ ಒಳ್ಳೆಯದು.

ತುಲಾ

ಸಂಕಷ್ಟಗಳು ಕಡಿಮೆಯಾಗಿ ಕೆಲಸ-ಕಾರ್ಯಗಳು ಸುಗಮ ಚಾಲನೆ ಪಡೆದುಕೊಳ್ಳುವವು. ಸಿಟ್ಟು ಸೆಡವುಗಳಿಂದಾಗಿ ತೊಂದರೆಗಳು ತಲೆದೋರಬಹುದು. ಅನಿರೀಕ್ಷಿತ ಅನವಶ್ಯಕ ಖರ್ಚು ಸಂಭವಿಸುವವು.

ವೃಶ್ಚಿಕ

ಆರ್ಥಿಕ ಉನ್ನತಿ ಕಂಡುಬರುವುದು. ಶತ್ರುಗಳ ವಿರುದ್ಧ ಜಯದ ಸವಾರಿ ಮಾಡುವ ಯೋಗ ಕೂಡಿದೆ. ಬಹುದಿನಗಳ ಸಮಸ್ಯೆಯಿಂದ ಪರಿಹಾರ ದೊರೆತು ನೆಮ್ಮದಿ. ಬಂಧುಗಳ ಆಗಮನವನ್ನು ನಿರೀಕ್ಷಿಸಿ.

ಧನು

ಅನವಶ್ಯಕ ಖರ್ಚು ತಲೆದೋರಬಹುದು. ಬಂಧುಗಳ ಭೇಟಿಯ ಸಾಧ್ಯತೆ. ಉದ್ಯೋಗದಲ್ಲಿ ಹೆಚ್ಚಿನ ಒತ್ತಡ. ಆಹಾರದಲ್ಲಿನ ವ್ಯತ್ಯದಿಂದಾಗಿ ಅಜೀರ್ಣ ಸಂಬಂಧಿ ರೋಗಗಳು ಕಂಡುಬರಬಹುದು. ಸಂಗಾತಿಯಿಂದ ಸಹಕಾರ.

ಮಕರ

ಬರಬೇಕಾದ ಹಣ ಹಿಂದಿರುಗಿ ಬರುವ ಸಾಧ್ಯತೆ. ಉಳಿತಾಯದಲ್ಲಿ ಪ್ರಗತಿ. ಆರೋಗ್ಯದಲ್ಲಿ ಸುಧಾರಣೆ. ಸಂತಾನಭಾಗ್ಯ ಪ್ರಾಪ್ತಿಯಾಗುವ ಕಾಲ ಸನ್ನಿಹಿತವಾಗಿದೆ. ನಿಂತುಹೋದ ಯೋಜನೆಗಳು ಪುನರಾರಂಭಗೊಳ್ಳುವವು.

ಕುಂಭ

ಆರ್ಥಿಕ ಅನುಕೂಲ ನಿಮ್ಮನ್ನರಸಿ ಬರುವುದು. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರೊಂದಿಗೆ ವೆಚ್ಚವನ್ನೂ ಮಾಡುವಿರಿ. ನಿಮ್ಮ ಉತ್ತಮ ನಡುವಳಿಕೆಯಿಂದಾಗಿ ಗೌರವಾದರಗಳು ಲಭ್ಯವಾಗುವವು.

ಮೀನ

ನೌಕರರು ಮತ್ತು ಸ್ವಂತ ಉದ್ಯೋಗಿಗಳು ತಪ್ಪು ನಡೆಗಳಿಗೆ ಅವಕಾಶವಾಗದಂತೆ ಎಚ್ಚರಿಕೆ ವಹಿಸುವುದು ಅಗತ್ಯ. ಉದ್ಯೋಗ ಅಥವಾ ವಾಸದ ಸ್ಥಾನ ಪಲ್ಲಟವಾಗುವ ಸಾಧ್ಯತೆ. ಉತ್ತಮ ಸ್ಥಾನ ದೊರಕುವುದು.

Spread the love
  • Related Posts

    ಶನಿವಾರದ ದಿನಭವಿಷ್ಯ ಯಾವ ರಾಶಿಯವರಿಗಿದೆ ಶುಭ ಫಲ!

    ಮೇಷ ರಾಶಿ: ನಿಮ್ಮ ಸಂಗಾತಿ ಎಂದಿಗೂ ಇಷ್ಟೊಂದು ಸುಂದರವಾಗಿರಲಿಲ್ಲ ಎಂದು ನಿಮಗೆ ಅರಿವಾಗುತ್ತದೆ. ನಿಮ್ಮ ಹಿತನುಡಿಗಳಿಂದ ಸಂಗಾತಿ ಫುಲ್ ಖುಷಿ. ನೀವು ಸಂಗಾತಿಯೊಡನೆ ದಿನಪೂರ್ತಿ ಕಾಲ ಕಳೆಯಬಹುದು. ಕೆಲಸದಲ್ಲಿ ಸಂಭವಿಸುವ ದೌರ್ಜನ್ಯ ಅದು ನಿಮಗೆ ಮುಂದಿನ ಭವಿಷ್ಯದಲ್ಲಿ ಪ್ರಜ್ವಲ ಶಕ್ತಿ ನೀಡುತ್ತದೆ.…

    Spread the love

    ಶನಿವಾರದ ರಾಶಿಭವಿಷ್ಯ ಯಾರಿಗೆಲ್ಲ ಇಂದು ಶುಭಕರ

    ಮೇಷ: ಸಾಲದ ಸಹಾಯ, ಆರ್ಥಿಕ ಚೇತರಿಕೆಯ ಲಕ್ಷಣ, ಉದ್ಯೋಗದಲ್ಲಿ ಹಿನ್ನಡೆ, ಆತುರದಿಂದ ಸಂಕಷ್ಟ ತಂದುಕೊಳ್ಳುವಿರಿ, ಶುಭಕಾರ್ಯಕ್ಕೆ ಮನಸ್ಸು ಮಾಡುವಿರಿ ವೃಷಭ: ಸ್ವಯಂಕೃತ ಅಪರಾಧಗಳು, ಆರ್ಥಿಕ ಸಂಕಷ್ಟದ ದಿವಸಗಳು, ಶುಭಕಾರ್ಯದ ಚಿಂತೆ, ಕಾರ್ಯ ವಿಘ್ನ, ಸ್ಥಿರಾಸ್ತಿ ವ್ಯವಹಾರಗಳಲ್ಲಿ ಸೋಲು, ತಂದೆಯಿಂದ ನಷ್ಟ, ಸರ್ಕಾರಿ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 11 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 22 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 11 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 15 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 12 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 16 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ