ಜುಲೈ 24-2020 ಶುಕ್ರವಾರ: ಇಂದಿನ ರಾಶಿಭವಿಷ್ಯ ಯಾರಿಗೆ ಶುಭ ಯಾರಿಗೆ ಅಶುಭ ಫಲ ವೀಕ್ಷಿಸಿ

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ದಕ್ಷಿಣಾಯನ ಪುಣ್ಯಕಾಲ,
ವರ್ಷ ಋತು, ಶ್ರಾವಣ ಮಾಸ,
ಶುಕ್ಲ ಪಕ್ಷ, ಚತುರ್ಥಿ ತಿಥಿ,
ಮಧ್ಯಾಹ್ನ 2:35 ನಂತರ ಪಂಚಮಿ ತಿಥಿ,
ಶುಕ್ರವಾರ, ಪೂರ್ವಫಾಲ್ಗುಣಿ ನಕ್ಷತ್ರ
ಸಂಜೆ 4:02 ಉತ್ತರ ಫಾಲ್ಗುಣಿ ನಕ್ಷತ್ರ

ರಾಹುಕಾಲ: ಬೆಳಗ್ಗೆ 10:54 ರಿಂದ 12:29
ಗುಳಿಕಕಾಲ: ಬೆಳಗ್ಗೆ 7:44 ರಿಂದ 9:19
ಯಮಗಂಡಕಾಲ: ಮಧ್ಯಾಹ್ನ 3:40 ರಿಂದ 5:15

ಮೇಷ

ಬೇರೆಯವರ ಅಪಹಾಸ್ಯಕ್ಕೆ ಗುರಿಯಾಗುವ ಸಾಧ್ಯತೆಯಿದ್ದು ಗಂಭೀರ ನಡವಳಿಕೆ ಅಗತ್ಯ. ಮಾನಸಿಕ ಚಂಚಲತೆಯುಂಟಾಗಿ ದುಸ್ವಪ್ನಗಳು ಉಂಟಾಗಬಹುದು. ಮನೆಯವರ ಆರೋಗ್ಯದೆಡೆಗೆ ಹೆಚ್ಚಿನ ಗಮನ ಅಗತ್ಯ.

ವೃಷಭ

ಹಿರಿಯರೊಂದಿಗೆ ವಿಧೇಯತೆಯಿಂದ ನಡೆದುಕೊಳ್ಳಿ. ಸಾಮಾಜಿಕ ಕಾರ್ಯಗಳಿಂದಾಗಿ ನೆಮ್ಮದಿ. ವೃಥಾ ವೈಮನಸ್ಸು ಎದುರಾಗಬಹುದು. ಆರ್ಥಿಕ ವಿಷಯದಲ್ಲಿ ಯಥಾಸ್ಥಿತಿ ಮುಂದುವರೆದು, ಕೆಲಸ–ಕಾರ್ಯಗಳಲ್ಲಿ ಉತ್ಸಾಹ.

ಮಿಥುನ

ಕಣ್ಣು ಅಥವಾ ತಲೆನೋವಿನಿಂದ ಬಳಲುವ ಸಾಧ್ಯತೆ. ಅತಿಯಾದ ವಾದ–ವಿವಾದದಿಂದಾಗಿ ವೈರತ್ವ. ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆಯಿದ್ದು ಜಾಗೃತೆ ವಹಿಸಿ. ಅನಾವಶ್ಯಕ ದಂಡ ತೆರಬೇಕಾದಿತು.

ಕಟಕ

ಮನೆಯಲ್ಲಿ ಶುಭಕಾರ್ಯಗಳು ನೆರವೇರುವ ಸಾಧ್ಯತೆ. ನೌಕರಿಯಲ್ಲಿ ಬದಲಾವಣೆ ಕಂಡುಬರುವುದು. ಆರ್ಥಿಕ ಅನುಕೂಲತೆ ಉತ್ತಮಗೊಳ್ಳುವುದು. ಮಕ್ಕಳಿಂದ ಸಂತಸದ ಸುದ್ದಿ ಕೇಳುವಿರಿ. ಬಂಧುಗಳ ಸಮಾಗಮದ ನಿರೀಕ್ಷೆ.

ಸಿಂಹ

ನಿಮ್ಮ ನಿರ್ಣಯಗಳು ಫಲ ನೀಡುವವು. ಆದಾಯದಲ್ಲಿ ಹೆಚ್ಚಳ ಕಂಡುಬಂದು ಪರಿಸ್ಥಿತಿ ಸುಧಾರಿಸುವುದು. ವಾಹನ ಖರೀದಿ ಭಾಗ್ಯ ನಿಮ್ಮದಾಗಲಿದೆ. ಸ್ನೇಹಿತರೊಂದಿಗೆ ಸಂತೋಷ ಹಂಚಿಕೊಳ್ಳುವಿರಿ.

ಕನ್ಯಾ

ನಿಮ್ಮ ಕೆಲಸ–ಕಾರ್ಯಗಳು ಮಂದಗತಿಯಲ್ಲೂ ಪ್ರಗತಿ. ಉದರ ಸಂಬಂಧಿ ಸಣ್ಣಪುಟ್ಟ ತೊಂದರೆಗಳು ಕಂಡುಬರಬಹುದು. ಹೊಸ ಕಾರ್ಯಯೋಜನೆ ಪ್ರಾರಂಭಿಸದಿರುವುದೇ ಒಳ್ಳೆಯದು.

ತುಲಾ

ಸಂಕಷ್ಟಗಳು ಕಡಿಮೆಯಾಗಿ ಕೆಲಸ-ಕಾರ್ಯಗಳು ಸುಗಮ ಚಾಲನೆ ಪಡೆದುಕೊಳ್ಳುವವು. ಸಿಟ್ಟು ಸೆಡವುಗಳಿಂದಾಗಿ ತೊಂದರೆಗಳು ತಲೆದೋರಬಹುದು. ಅನಿರೀಕ್ಷಿತ ಅನವಶ್ಯಕ ಖರ್ಚು ಸಂಭವಿಸುವವು.

ವೃಶ್ಚಿಕ

ಆರ್ಥಿಕ ಉನ್ನತಿ ಕಂಡುಬರುವುದು. ಶತ್ರುಗಳ ವಿರುದ್ಧ ಜಯದ ಸವಾರಿ ಮಾಡುವ ಯೋಗ ಕೂಡಿದೆ. ಬಹುದಿನಗಳ ಸಮಸ್ಯೆಯಿಂದ ಪರಿಹಾರ ದೊರೆತು ನೆಮ್ಮದಿ. ಬಂಧುಗಳ ಆಗಮನವನ್ನು ನಿರೀಕ್ಷಿಸಿ.

ಧನು

ಅನವಶ್ಯಕ ಖರ್ಚು ತಲೆದೋರಬಹುದು. ಬಂಧುಗಳ ಭೇಟಿಯ ಸಾಧ್ಯತೆ. ಉದ್ಯೋಗದಲ್ಲಿ ಹೆಚ್ಚಿನ ಒತ್ತಡ. ಆಹಾರದಲ್ಲಿನ ವ್ಯತ್ಯದಿಂದಾಗಿ ಅಜೀರ್ಣ ಸಂಬಂಧಿ ರೋಗಗಳು ಕಂಡುಬರಬಹುದು. ಸಂಗಾತಿಯಿಂದ ಸಹಕಾರ.

ಮಕರ

ಬರಬೇಕಾದ ಹಣ ಹಿಂದಿರುಗಿ ಬರುವ ಸಾಧ್ಯತೆ. ಉಳಿತಾಯದಲ್ಲಿ ಪ್ರಗತಿ. ಆರೋಗ್ಯದಲ್ಲಿ ಸುಧಾರಣೆ. ಸಂತಾನಭಾಗ್ಯ ಪ್ರಾಪ್ತಿಯಾಗುವ ಕಾಲ ಸನ್ನಿಹಿತವಾಗಿದೆ. ನಿಂತುಹೋದ ಯೋಜನೆಗಳು ಪುನರಾರಂಭಗೊಳ್ಳುವವು.

ಕುಂಭ

ಆರ್ಥಿಕ ಅನುಕೂಲ ನಿಮ್ಮನ್ನರಸಿ ಬರುವುದು. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರೊಂದಿಗೆ ವೆಚ್ಚವನ್ನೂ ಮಾಡುವಿರಿ. ನಿಮ್ಮ ಉತ್ತಮ ನಡುವಳಿಕೆಯಿಂದಾಗಿ ಗೌರವಾದರಗಳು ಲಭ್ಯವಾಗುವವು.

ಮೀನ

ನೌಕರರು ಮತ್ತು ಸ್ವಂತ ಉದ್ಯೋಗಿಗಳು ತಪ್ಪು ನಡೆಗಳಿಗೆ ಅವಕಾಶವಾಗದಂತೆ ಎಚ್ಚರಿಕೆ ವಹಿಸುವುದು ಅಗತ್ಯ. ಉದ್ಯೋಗ ಅಥವಾ ವಾಸದ ಸ್ಥಾನ ಪಲ್ಲಟವಾಗುವ ಸಾಧ್ಯತೆ. ಉತ್ತಮ ಸ್ಥಾನ ದೊರಕುವುದು.

Spread the love
  • Related Posts

    ಶನಿವಾರದ ದಿನಭವಿಷ್ಯ ಯಾವ ರಾಶಿಯವರಿಗಿದೆ ಶುಭ ಫಲ!

    ಮೇಷ ರಾಶಿ: ನಿಮ್ಮ ಸಂಗಾತಿ ಎಂದಿಗೂ ಇಷ್ಟೊಂದು ಸುಂದರವಾಗಿರಲಿಲ್ಲ ಎಂದು ನಿಮಗೆ ಅರಿವಾಗುತ್ತದೆ. ನಿಮ್ಮ ಹಿತನುಡಿಗಳಿಂದ ಸಂಗಾತಿ ಫುಲ್ ಖುಷಿ. ನೀವು ಸಂಗಾತಿಯೊಡನೆ ದಿನಪೂರ್ತಿ ಕಾಲ ಕಳೆಯಬಹುದು. ಕೆಲಸದಲ್ಲಿ ಸಂಭವಿಸುವ ದೌರ್ಜನ್ಯ ಅದು ನಿಮಗೆ ಮುಂದಿನ ಭವಿಷ್ಯದಲ್ಲಿ ಪ್ರಜ್ವಲ ಶಕ್ತಿ ನೀಡುತ್ತದೆ.…

    Spread the love

    ಶನಿವಾರದ ರಾಶಿಭವಿಷ್ಯ ಯಾರಿಗೆಲ್ಲ ಇಂದು ಶುಭಕರ

    ಮೇಷ: ಸಾಲದ ಸಹಾಯ, ಆರ್ಥಿಕ ಚೇತರಿಕೆಯ ಲಕ್ಷಣ, ಉದ್ಯೋಗದಲ್ಲಿ ಹಿನ್ನಡೆ, ಆತುರದಿಂದ ಸಂಕಷ್ಟ ತಂದುಕೊಳ್ಳುವಿರಿ, ಶುಭಕಾರ್ಯಕ್ಕೆ ಮನಸ್ಸು ಮಾಡುವಿರಿ ವೃಷಭ: ಸ್ವಯಂಕೃತ ಅಪರಾಧಗಳು, ಆರ್ಥಿಕ ಸಂಕಷ್ಟದ ದಿವಸಗಳು, ಶುಭಕಾರ್ಯದ ಚಿಂತೆ, ಕಾರ್ಯ ವಿಘ್ನ, ಸ್ಥಿರಾಸ್ತಿ ವ್ಯವಹಾರಗಳಲ್ಲಿ ಸೋಲು, ತಂದೆಯಿಂದ ನಷ್ಟ, ಸರ್ಕಾರಿ…

    Spread the love

    You Missed

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    • By admin
    • June 17, 2025
    • 157 views
    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ  ವರ್ಗಾವಣೆ

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    • By admin
    • June 16, 2025
    • 75 views
    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 266 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 184 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 107 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 65 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ