ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

ಕೆ.ಹೊಸಕೋಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಸಕಲೇಶಪುರ ಇದರ ವತಿಯಿಂದ ಶ್ರೀ ಕೆಂಚಾಂಬ ದೇವಸ್ಥಾನ ಹರಿಹಳ್ಳಿ ಕೆ. ಹೊಸಕೋಟೆಯಲ್ಲಿ ಸಾಮೂಹಿಕ ಲಕ್ಷ್ಮೀ ಪೂಜಾ ಕಾರ್ಯಕ್ರಮ ನಡೆಸಲಾಯಿತು.

ತೆಂಕಲಗೂಡು ಬೃಹನ್ಮಠದ ಶ್ರೀ.ಷ.ಬ್ರ.ಚೆನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಗಳು ಸಾಮೂಹಿಕ ಶ್ರೀ ಲಕ್ಷ್ಮಿ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳವು ಬಡವರ ಸೇವೆಗಾಗಿ ಗ್ರಾಮೀಣ ಪ್ರದೇಶದ ಜನರ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಮಠ ಮಂದಿರಗಳಿಗೆ, ದೇವಸ್ಥಾನಗಳ ಪುನರುಜ್ಜೀವನಕ್ಕಾಗಿ ಸಹಕಾರ ಮಾಡುವ ಮೂಲಕ ಧಾರ್ಮಿಕ ಕ್ಷೇತ್ರಗಳಿಗೆ ವಿಶೇಷ ಕೊಡುಗೆಗಳನ್ನು ನೀಡುತ್ತಾ ಬರುತ್ತಿದ್ದಾರೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಧಾರ್ಮಿಕ ನಂಬಿಕೆ ಗಳ ಜೊತೆ ಮಕ್ಕಳಿಗೆ ಭಕ್ತಿ ಭಾವಗಳನ್ನು ತುಂಬುವ ಕೆಲಸ ಮಾಡಬೇಕು ತಾಯಿಯನ್ನು ಪೂಜಿಸುವ, ತಾಯಿಯನ್ನು ಗೌರವಿಸುವ ಬಗ್ಗೆ ಮಕ್ಕಳಿಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ಹಲವು ದೇಶಗಳ ಪೈಕಿ ಭಾರತವನ್ನು ಮಾತ್ರ ನಾವು ತಾಯಿಗೆ ಹೋಲಿಸುತ್ತೇವೆ ಅದೇ ರೀತಿ ಗೌರವಿಸುತ್ತೇವೆ. ನಮ್ಮ ದೇಶ ಸಂಸ್ಕಾರ ಸಂಸ್ಕೃತಿಯಿಂದ ಕೂಡಿದ ದೇಶ ಆದ್ದರಿಂದ ನಾವೆಲ್ಲರೂ ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿಯನ್ನೇ ತಿಳಿಸಬೇಕೇ ಹೊರತು ಪಾಶ್ಚಾತ್ಯ ಸಂಸ್ಕೃತಿಯೆಡೆಗೆ ವಾಲದಂತೆ ಮುನ್ನಡೆಸುವ ಮಹತ್ತರವಾದ ಜವಾಬ್ದಾರಿ ನಮ್ಮ ಮೇಲಿದೆ. ಸಂಸ್ಕಾರದ ಮೂಲ ತಳಹದಿ ಮಾತೇಯಲ್ಲಿದೆ. ಈ ದೇಹವು ಆತ್ಮೋನ್ನತಿಗಾಗಿ ನಮಗೆ ದೊರೆತ ಮಹತ್ತರ ಅವಕಾಶ ಎಂದರು. ಆತ್ಮವನ್ನು ಪರಮಾತ್ಮನಲ್ಲಿ ವಿಲೀನ ಗೊಳಿಸುವ ಸಾಧನವೇ ಮಾನವನ ದೇಹ. ಇದನ್ನು ಪ್ರತಿಯೊಬ್ಬರೂ ಸದ್ಬಳಕೆ ಮಾಡಿ ಕೊಳ್ಳಬೇಕು. ದೇವರು ನಮಗೆ ಅಮೂಲ್ಯವಾದ ಜೀವನ ಕೊಟ್ಟಿದ್ದಾನೆ. ಆದರೆ ನಾವುಗಳು ಭೌತಿಕ ಸುಖಗಳ ಹಿಂದೆ ಓಡದೆ, ಭಕ್ತಿಯಿಂದ ಪರಮಾತ್ಮನ ಧ್ಯಾನ ಮಾಡುವ ಮೂಲಕ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕು ಎಂದರು. ಭಾರತ ವಿಶ್ವಕ್ಕೆ ಗುರು ಸ್ಥಾನವನ್ನು ನೀಡಿದ ಏಕೈಕ ದೇಶವಾಗಿದೆ. ನಮ್ಮ ಸಂಸ್ಕೃತಿ ಮತ್ತು ಧರ್ಮವನ್ನು ಉಳಿಸುವ ಹೊಣೆ ನಮ್ಮೆಲ್ಲರ ಮೇಲಿದೆ ದೇವಾಲಯಗಳು ಕೇವಲ ಪೂಜಾ ಕೇಂದ್ರಗಳಲ್ಲ, ಅವು ಸಂಸ್ಕಾರ, ಸಂಸ್ಕೃತಿ ಮತ್ತು ಸಾಮಾಜಿಕ ಏಕತೆಯ ಕೇಂದ್ರಗಳಾಗಿವೆ. ಸಮಾಜದಲ್ಲಿ ಧರ್ಮ ಬೋಧನೆ ಹಾಗೂ ಆಧ್ಯಾತ್ಮಿಕ ಚಿಂತನೆ ಹೆಚ್ಚಿಸಬೇಕು ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಯುವ ಪೀಳಿಗೆಯಲ್ಲಿ ಧರ್ಮ, ಶ್ರದ್ಧೆ ಮತ್ತು ಸಂಪ್ರದಾಯಗಳ ಅರಿವು ಮೂಡಿಸಬೇಕು. ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಧರ್ಮ ಮತ್ತು ಮಾನವೀಯ ಮೌಲ್ಯಗಳನ್ನು ಅಳವಡಿಸಿ ಕೊಂಡಾಗ ಮಾತ್ರ ಸಮಾಜ ಸುಸಂಸ್ಕೃತವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಪೂಜಾ ಸಮಿತಿಯ ಅಧ್ಯಕ್ಷರಾದ ಗೋಪಾಲ ಎಚ್ ಡಿ, ಹಾಸನ ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಸುರೇಶ್ ಮೊಯ್ಲಿ, ಸಮಿತಿಯಉಪಾಧ್ಯಕ್ಷರಾದ ನಾರಾಯಣ ಶರ್ಮ, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಗಿರೀಶ್ ಮಂಜುನಾಥ್, ಉಮಾನಾಥ ಸುವರ್ಣ, ಸಮಿತಿಯ ಕೋಶಾಧಿಕಾರಿ ಸತ್ಯನಾರಾಯಣ, ಕೆಂಚಾಂಬ ದೇವಸ್ಥಾನದ ಪ್ರಧಾನ ಅರ್ಚಕರಾದ ರಾಮಸ್ವಾಮಿ, ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ರಾಜೇಶ್ ಎಂ ಕಾನರ್ಪ, ಮೇಲ್ವಿಚಾರಕರಾದ ಪುಟ್ಟರಾಜು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಆನಂದ ಹಾಗೂ ಯೋಜನೆಯ ಕಾರ್ಯಕರ್ತರು, ಒಕ್ಕೂಟದ ಪದಾಧಿಕಾರಿಗಳು ಸದಸ್ಯರುಗಳು ಹಾಗೂ ಕ್ಷೇತ್ರದ ಭಕ್ತಾದಿಗಳು ಭಾಗವಹಿಸಿದ್ದರು.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 2 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 6 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 21 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 11 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 6 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ