ಕೈಲಾಸದಲ್ಲಿ ನಿತ್ಯಾನಂದನ ರಿಸರ್ವ್ ಬ್ಯಾಂಕ್! ಕೈಲಾಸದ ಕರೆನ್ಸಿ ಹೇಗಿದೆ ನೋಡೋಣ ಬನ್ನಿ!

ನವದೆಹಲಿ: ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ಗಣೇಶ ಚತುರ್ಥಿ ದಿನದಂದೇ ದೂರದ ಈಕ್ವೆಡಾರ್​ ದೇಶದ ಕರಾವಳಿಯ ಸಣ್ಣ ದ್ವೀಪದಲ್ಲಿ ಕೈಲಾಸ ದೇಶದ ರಿಸರ್ವ ಬ್ಯಾಂಕ್​ ಕೈಲಾಸ ಆರಂಭಿಸಿದ್ದಾನೆ.


ಈತನ ಕೈಲಾಸ ದೇಶ ನಿಖರವಾಗಿ ಎಲ್ಲಿದೆ ಎಂಬುದನ್ನು ಈವರೆಗೂ ನಿತ್ಯಾನಂದ ತಿಳಿಸಿಲ್ಲವಾದರೂ, ಹಲವು ಮಾಧ್ಯಮಗಳಲ್ಲಿ ಇದು ಈಕ್ವೆಡಾರ್​ನಲ್ಲಿರುವ ಒಂದು ದ್ವೀಪ ಎಂದೇ ಗುರುತಿಸಲಾಗಿದೆ. ಇದನ್ನು ನಿತ್ಯಾನಂದ ಖರೀದಿಸಿದ್ದಾನೆ ಎಂದೇ ಹೇಳಲಾಗಿದೆ.

ಕೈಲಾಸ ದೇಶದ ಪ್ರಧಾನಮಂತ್ರಿಯೂ ಆಗಿರುವ ನಿತ್ಯಾನಂದ, ತನ್ನ ಬೆಂಬಲಿಗರೊಂದಿಗೆ ಬ್ಯಾಂಕ್​ ಕಾರ್ಯಾರಂಭಕ್ಕೆ ಚಾಲನೆ ನೀಡಿದ್ದಾನೆ. ಈತ ದೇಶ ತೊರೆದಿದ್ದಾನೆಂದು ಹೇಳಲಾದ ಕಳೆದ ನವೆಂಬರ್​ ನಲ್ಲಿ ಈ ರಾಷ್ಟ್ರ ಉದಯವಾಗಿದೆ ಎಂದು ನಿತ್ಯಾನಂದ ಹೇಳಿಕೊಂಡಿದ್ದ. ಜತೆಗೆ ಈ ದೇಶದ ಪ್ರಜೆಗಳಿಗೆಂದೇ ಈ ಪಾಸ್​ಪೋರ್ಟ್​ ಆರಂಭಿಸಿದ್ದ.

ಕೈಲಾಸವೊಂದು ರಾಜ್ಯಗಳಿಲ್ಲದ ದೇಶ, ಜತೆಗೆ ಹೊಸ ಭೂಭಾಗವನ್ನು ಬಯಸುವುದಿಲ್ಲ ಎಂಬುದು ನಿತ್ಯಾನಂದನ ವ್ಯಾಖ್ಯಾನ. ತಾವಿರುವ ನೆಲದಲ್ಲಿ ಹಿಂದೂ ಧರ್ಮವನ್ನು ಪಾಲಿಸಲಾಗದ ಜನರಿಂದ ಈ ಕೈಲಾಸ ಸೃಷ್ಟಿಯಾಗಿದೆ ಎಂದು ಕೈಲಾಸ ವೆಬ್​ಸೈಟ್​ನಲ್ಲಿ ಹೇಳಿಕೊಳ್ಳಲಾಗಿದೆ.

ಕೈಲಾಸದಲ್ಲಿ ಆಚರಿಸಲ್ಪಡುತ್ತಿರುವ ಗಣೇಶ ಚತುರ್ಥಿ ಸಂದರ್ಭದಲ್ಲಿ ರಿಸರ್ವ್​ ಬ್ಯಾಂಕ್​ ಆಫ್​ ಕೈಲಾಸದ ಕರೆನ್ಸಿಯನ್ನು ಗಣಪತಿ, ಪರಮಶಿವ ಹಾಗೂ ಗುರು ನಿತ್ಯಾನಂದ ಸ್ವಾಮೀಜಿ ಪದತಲಕ್ಕೆ ಅರ್ಪಿಸಲಾಗಿದೆ ಎಂದು ಘೋಷಿಸಲಾಗಿದೆ.

ಅಷ್ಟಕ್ಕೂ ಇಲ್ಲಿನ ಕರೆನ್ಸಿ ಕೈಲಾಸಿಯನ್​ ಡಾಲರ್​. ಜತೆಗೆ, ಇತರ ನಾಣ್ಯಗಳನ್ನು ಬಿಡುಗಡೆ ಮಾಡಲಾಗಿದೆ. ಇದರ ಮೌಲ್ಯವೆಷ್ಟು ಎಂಬುದು ಇನ್ನೂ ಗೊತ್ತಾಗಿಲ್ಲ. ಡಾಲರ್​ ಎಂದ ಮೇಲೆ ಅಮೆರಿಕನ್​ ಡಾಲರ್​ ಮೌಲ್ಯವೇ ಹೊಂದಿರಬಹದು ಎಂದು ಅಂದಾಜಿಸಲಾಗುತ್ತಿದೆ. ಭಾರತೀಯ ರೂ. ವಿನಿಮಯ ದರ ಅಂದಾಜು 75 ರ.ಗಳಿಬಹುದೆಂದು ಅಂದಾಜಿಸಲಾಗುತ್ತಿದೆ.

ಕೈಲಾಸ ದ್ವಿಪಕ್ಷೀಯ ಒಪ್ಪಂದ ಮಾಡಿಕೊಂಡಿರುವ ದೇಶಗಳಲ್ಲಿ ಮಾತ್ರ ಈ ಕರೆನ್ಸಿ ಚಲಾವಣೆಯಲ್ಲಿ ಇರಲಿದೆಯಂತೆ. ಹಿಂದು ಧಾರ್ಮಿಕ ನೀತಿಗಳ 100ಕ್ಕೂ ಅಧಿಕ ಪುಸ್ತಕಗಳು 360ಕ್ಕೂ ಅಧಿಕ ಲೇಖನಗಳನ್ನು ಅಧ್ಯಯನ ಮಾಡಿ ಈ ಕರೆನ್ಸಿಯನ್ನು ಬಿಡುಗಡೆ ಮಾಡಲಾಗಿದೆ. ಹಾಗೂ ರಿಸರ್ವ್​ ಬ್ಯಾಂಕ್​ ಆರಂಭಿಸಲು ದೇಶವೊಂದರ ಜತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಹೀಗಾಗಿ ರಿಸರ್ವ್​ ಬ್ಯಾಂಕ್​ ಆಫ್​ ಕೈಲಾಸ ಕಾನೂನು ಬದ್ಧವಾಗಿದೆ ಎಂದು ಕೈಲಾಸ ವೆಬ್​ಸೈಟ್​ನಲ್ಲಿ ಹೇಳಿಕೊಳ್ಳಲಾಗಿದೆ.

Spread the love
  • Related Posts

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಜಿಲ್ಲೆಯಾದ್ಯಂತ ಬಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ನದಿತೀರಗಳಿಗೆ ತಗ್ಗು ಪ್ರದೇಶಗಳಿಗೆ ತೆರಳದಂತೆ ಸೂಚನೆ ನೀಡಿದೆ ಮುನ್ನೆಚ್ಚರಿಕೆ ಕ್ರಮವಾಗಿ ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿಸಲಾಗಿದೆ Spread the love

    Spread the love

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ಸೋಮಂತಡ್ಕದಲ್ಲಿ ರಸ್ತೆ ಕಾಮಗಾರಿ ನಡೆದಿದ್ದು ಬಳಿಕ ಚರಂಡಿ ನಿರ್ಮಿಸಿದ್ದು, ಕೆಲವು ಕಡೆ ಮುಚ್ಚಲಾಗಿಲ್ಲ, ಇಂದು ಸಂಜೆ ತೆರೆದ ಚರಂಡಿಯ ಬಗ್ಗೆ ಅರಿವಿಲ್ಲದೆ ಅಂಗಡಿಯಿಂದ ಸಾಮಾಗ್ರಿ ಖರೀದಿಸಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯಗೊಂಡಿರುವ…

    Spread the love

    You Missed

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 138 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 154 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 97 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 56 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

    • By admin
    • June 11, 2025
    • 67 views
    ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು

    • By admin
    • June 11, 2025
    • 75 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು