ಕೈಲಾಸದಲ್ಲಿ ನಿತ್ಯಾನಂದನ ರಿಸರ್ವ್ ಬ್ಯಾಂಕ್! ಕೈಲಾಸದ ಕರೆನ್ಸಿ ಹೇಗಿದೆ ನೋಡೋಣ ಬನ್ನಿ!

ನವದೆಹಲಿ: ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ಗಣೇಶ ಚತುರ್ಥಿ ದಿನದಂದೇ ದೂರದ ಈಕ್ವೆಡಾರ್​ ದೇಶದ ಕರಾವಳಿಯ ಸಣ್ಣ ದ್ವೀಪದಲ್ಲಿ ಕೈಲಾಸ ದೇಶದ ರಿಸರ್ವ ಬ್ಯಾಂಕ್​ ಕೈಲಾಸ ಆರಂಭಿಸಿದ್ದಾನೆ.


ಈತನ ಕೈಲಾಸ ದೇಶ ನಿಖರವಾಗಿ ಎಲ್ಲಿದೆ ಎಂಬುದನ್ನು ಈವರೆಗೂ ನಿತ್ಯಾನಂದ ತಿಳಿಸಿಲ್ಲವಾದರೂ, ಹಲವು ಮಾಧ್ಯಮಗಳಲ್ಲಿ ಇದು ಈಕ್ವೆಡಾರ್​ನಲ್ಲಿರುವ ಒಂದು ದ್ವೀಪ ಎಂದೇ ಗುರುತಿಸಲಾಗಿದೆ. ಇದನ್ನು ನಿತ್ಯಾನಂದ ಖರೀದಿಸಿದ್ದಾನೆ ಎಂದೇ ಹೇಳಲಾಗಿದೆ.

ಕೈಲಾಸ ದೇಶದ ಪ್ರಧಾನಮಂತ್ರಿಯೂ ಆಗಿರುವ ನಿತ್ಯಾನಂದ, ತನ್ನ ಬೆಂಬಲಿಗರೊಂದಿಗೆ ಬ್ಯಾಂಕ್​ ಕಾರ್ಯಾರಂಭಕ್ಕೆ ಚಾಲನೆ ನೀಡಿದ್ದಾನೆ. ಈತ ದೇಶ ತೊರೆದಿದ್ದಾನೆಂದು ಹೇಳಲಾದ ಕಳೆದ ನವೆಂಬರ್​ ನಲ್ಲಿ ಈ ರಾಷ್ಟ್ರ ಉದಯವಾಗಿದೆ ಎಂದು ನಿತ್ಯಾನಂದ ಹೇಳಿಕೊಂಡಿದ್ದ. ಜತೆಗೆ ಈ ದೇಶದ ಪ್ರಜೆಗಳಿಗೆಂದೇ ಈ ಪಾಸ್​ಪೋರ್ಟ್​ ಆರಂಭಿಸಿದ್ದ.

ಕೈಲಾಸವೊಂದು ರಾಜ್ಯಗಳಿಲ್ಲದ ದೇಶ, ಜತೆಗೆ ಹೊಸ ಭೂಭಾಗವನ್ನು ಬಯಸುವುದಿಲ್ಲ ಎಂಬುದು ನಿತ್ಯಾನಂದನ ವ್ಯಾಖ್ಯಾನ. ತಾವಿರುವ ನೆಲದಲ್ಲಿ ಹಿಂದೂ ಧರ್ಮವನ್ನು ಪಾಲಿಸಲಾಗದ ಜನರಿಂದ ಈ ಕೈಲಾಸ ಸೃಷ್ಟಿಯಾಗಿದೆ ಎಂದು ಕೈಲಾಸ ವೆಬ್​ಸೈಟ್​ನಲ್ಲಿ ಹೇಳಿಕೊಳ್ಳಲಾಗಿದೆ.

ಕೈಲಾಸದಲ್ಲಿ ಆಚರಿಸಲ್ಪಡುತ್ತಿರುವ ಗಣೇಶ ಚತುರ್ಥಿ ಸಂದರ್ಭದಲ್ಲಿ ರಿಸರ್ವ್​ ಬ್ಯಾಂಕ್​ ಆಫ್​ ಕೈಲಾಸದ ಕರೆನ್ಸಿಯನ್ನು ಗಣಪತಿ, ಪರಮಶಿವ ಹಾಗೂ ಗುರು ನಿತ್ಯಾನಂದ ಸ್ವಾಮೀಜಿ ಪದತಲಕ್ಕೆ ಅರ್ಪಿಸಲಾಗಿದೆ ಎಂದು ಘೋಷಿಸಲಾಗಿದೆ.

ಅಷ್ಟಕ್ಕೂ ಇಲ್ಲಿನ ಕರೆನ್ಸಿ ಕೈಲಾಸಿಯನ್​ ಡಾಲರ್​. ಜತೆಗೆ, ಇತರ ನಾಣ್ಯಗಳನ್ನು ಬಿಡುಗಡೆ ಮಾಡಲಾಗಿದೆ. ಇದರ ಮೌಲ್ಯವೆಷ್ಟು ಎಂಬುದು ಇನ್ನೂ ಗೊತ್ತಾಗಿಲ್ಲ. ಡಾಲರ್​ ಎಂದ ಮೇಲೆ ಅಮೆರಿಕನ್​ ಡಾಲರ್​ ಮೌಲ್ಯವೇ ಹೊಂದಿರಬಹದು ಎಂದು ಅಂದಾಜಿಸಲಾಗುತ್ತಿದೆ. ಭಾರತೀಯ ರೂ. ವಿನಿಮಯ ದರ ಅಂದಾಜು 75 ರ.ಗಳಿಬಹುದೆಂದು ಅಂದಾಜಿಸಲಾಗುತ್ತಿದೆ.

ಕೈಲಾಸ ದ್ವಿಪಕ್ಷೀಯ ಒಪ್ಪಂದ ಮಾಡಿಕೊಂಡಿರುವ ದೇಶಗಳಲ್ಲಿ ಮಾತ್ರ ಈ ಕರೆನ್ಸಿ ಚಲಾವಣೆಯಲ್ಲಿ ಇರಲಿದೆಯಂತೆ. ಹಿಂದು ಧಾರ್ಮಿಕ ನೀತಿಗಳ 100ಕ್ಕೂ ಅಧಿಕ ಪುಸ್ತಕಗಳು 360ಕ್ಕೂ ಅಧಿಕ ಲೇಖನಗಳನ್ನು ಅಧ್ಯಯನ ಮಾಡಿ ಈ ಕರೆನ್ಸಿಯನ್ನು ಬಿಡುಗಡೆ ಮಾಡಲಾಗಿದೆ. ಹಾಗೂ ರಿಸರ್ವ್​ ಬ್ಯಾಂಕ್​ ಆರಂಭಿಸಲು ದೇಶವೊಂದರ ಜತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಹೀಗಾಗಿ ರಿಸರ್ವ್​ ಬ್ಯಾಂಕ್​ ಆಫ್​ ಕೈಲಾಸ ಕಾನೂನು ಬದ್ಧವಾಗಿದೆ ಎಂದು ಕೈಲಾಸ ವೆಬ್​ಸೈಟ್​ನಲ್ಲಿ ಹೇಳಿಕೊಳ್ಳಲಾಗಿದೆ.

Spread the love
  • Related Posts

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    ಹೊಸದಿಲ್ಲಿ: ಮರು ಮತ ಎಣಿಕೆ ಬಳಿಕ ತಮ್ಮ ಶಾಸಕ ಸ್ಥಾನ ರದ್ದಾಗಿರುವುದನ್ನು ಪ್ರಶ್ನಿಸಿ ಶೃಂಗೇರಿಯ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದೆದುರು ಈ ವಿಷಯವನ್ನು ಹಿರಿಯ ವಕೀಲ ದೇವದಾಸ್ ಕಾಮತ್ ಪ್ರಸ್ತಾಪಿಸಿದರು. “ಇದು…

    Spread the love

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಉಜಿರೆ: ಉಜಿರೆ-ಚಾರ್ಮಾಡಿ ರಸ್ತೆಯ ಅನುಗ್ರಹ ಸಮೀಪ ಸಂಭವಿಸಿದ ರಸ್ತೆ ಅಪಘಾತ ಇದೀಗ ಸಾರ್ವಜನಿಕರ ಗಮನವನ್ನು ಮತ್ತೊಂದು ಗಂಭೀರ ವಿಷಯದತ್ತ ಸೆಳೆದಿದೆ. ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಬುಲೋರೋ ಕಾರಿನ ಮೇಲೆ “Government of India” ಎಂಬ ನಾಮಫಲಕ ಅಳವಡಿಸಲಾಗಿದ್ದು, ಈ ಬಗ್ಗೆ…

    Spread the love

    You Missed

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 18 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    • By admin
    • May 9, 2026
    • 89 views
    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 37 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 117 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 117 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 47 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!