ಕೈಲಾಸದಲ್ಲಿ ನಿತ್ಯಾನಂದನ ರಿಸರ್ವ್ ಬ್ಯಾಂಕ್! ಕೈಲಾಸದ ಕರೆನ್ಸಿ ಹೇಗಿದೆ ನೋಡೋಣ ಬನ್ನಿ!

ನವದೆಹಲಿ: ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ಗಣೇಶ ಚತುರ್ಥಿ ದಿನದಂದೇ ದೂರದ ಈಕ್ವೆಡಾರ್​ ದೇಶದ ಕರಾವಳಿಯ ಸಣ್ಣ ದ್ವೀಪದಲ್ಲಿ ಕೈಲಾಸ ದೇಶದ ರಿಸರ್ವ ಬ್ಯಾಂಕ್​ ಕೈಲಾಸ ಆರಂಭಿಸಿದ್ದಾನೆ.


ಈತನ ಕೈಲಾಸ ದೇಶ ನಿಖರವಾಗಿ ಎಲ್ಲಿದೆ ಎಂಬುದನ್ನು ಈವರೆಗೂ ನಿತ್ಯಾನಂದ ತಿಳಿಸಿಲ್ಲವಾದರೂ, ಹಲವು ಮಾಧ್ಯಮಗಳಲ್ಲಿ ಇದು ಈಕ್ವೆಡಾರ್​ನಲ್ಲಿರುವ ಒಂದು ದ್ವೀಪ ಎಂದೇ ಗುರುತಿಸಲಾಗಿದೆ. ಇದನ್ನು ನಿತ್ಯಾನಂದ ಖರೀದಿಸಿದ್ದಾನೆ ಎಂದೇ ಹೇಳಲಾಗಿದೆ.

ಕೈಲಾಸ ದೇಶದ ಪ್ರಧಾನಮಂತ್ರಿಯೂ ಆಗಿರುವ ನಿತ್ಯಾನಂದ, ತನ್ನ ಬೆಂಬಲಿಗರೊಂದಿಗೆ ಬ್ಯಾಂಕ್​ ಕಾರ್ಯಾರಂಭಕ್ಕೆ ಚಾಲನೆ ನೀಡಿದ್ದಾನೆ. ಈತ ದೇಶ ತೊರೆದಿದ್ದಾನೆಂದು ಹೇಳಲಾದ ಕಳೆದ ನವೆಂಬರ್​ ನಲ್ಲಿ ಈ ರಾಷ್ಟ್ರ ಉದಯವಾಗಿದೆ ಎಂದು ನಿತ್ಯಾನಂದ ಹೇಳಿಕೊಂಡಿದ್ದ. ಜತೆಗೆ ಈ ದೇಶದ ಪ್ರಜೆಗಳಿಗೆಂದೇ ಈ ಪಾಸ್​ಪೋರ್ಟ್​ ಆರಂಭಿಸಿದ್ದ.

ಕೈಲಾಸವೊಂದು ರಾಜ್ಯಗಳಿಲ್ಲದ ದೇಶ, ಜತೆಗೆ ಹೊಸ ಭೂಭಾಗವನ್ನು ಬಯಸುವುದಿಲ್ಲ ಎಂಬುದು ನಿತ್ಯಾನಂದನ ವ್ಯಾಖ್ಯಾನ. ತಾವಿರುವ ನೆಲದಲ್ಲಿ ಹಿಂದೂ ಧರ್ಮವನ್ನು ಪಾಲಿಸಲಾಗದ ಜನರಿಂದ ಈ ಕೈಲಾಸ ಸೃಷ್ಟಿಯಾಗಿದೆ ಎಂದು ಕೈಲಾಸ ವೆಬ್​ಸೈಟ್​ನಲ್ಲಿ ಹೇಳಿಕೊಳ್ಳಲಾಗಿದೆ.

ಕೈಲಾಸದಲ್ಲಿ ಆಚರಿಸಲ್ಪಡುತ್ತಿರುವ ಗಣೇಶ ಚತುರ್ಥಿ ಸಂದರ್ಭದಲ್ಲಿ ರಿಸರ್ವ್​ ಬ್ಯಾಂಕ್​ ಆಫ್​ ಕೈಲಾಸದ ಕರೆನ್ಸಿಯನ್ನು ಗಣಪತಿ, ಪರಮಶಿವ ಹಾಗೂ ಗುರು ನಿತ್ಯಾನಂದ ಸ್ವಾಮೀಜಿ ಪದತಲಕ್ಕೆ ಅರ್ಪಿಸಲಾಗಿದೆ ಎಂದು ಘೋಷಿಸಲಾಗಿದೆ.

ಅಷ್ಟಕ್ಕೂ ಇಲ್ಲಿನ ಕರೆನ್ಸಿ ಕೈಲಾಸಿಯನ್​ ಡಾಲರ್​. ಜತೆಗೆ, ಇತರ ನಾಣ್ಯಗಳನ್ನು ಬಿಡುಗಡೆ ಮಾಡಲಾಗಿದೆ. ಇದರ ಮೌಲ್ಯವೆಷ್ಟು ಎಂಬುದು ಇನ್ನೂ ಗೊತ್ತಾಗಿಲ್ಲ. ಡಾಲರ್​ ಎಂದ ಮೇಲೆ ಅಮೆರಿಕನ್​ ಡಾಲರ್​ ಮೌಲ್ಯವೇ ಹೊಂದಿರಬಹದು ಎಂದು ಅಂದಾಜಿಸಲಾಗುತ್ತಿದೆ. ಭಾರತೀಯ ರೂ. ವಿನಿಮಯ ದರ ಅಂದಾಜು 75 ರ.ಗಳಿಬಹುದೆಂದು ಅಂದಾಜಿಸಲಾಗುತ್ತಿದೆ.

ಕೈಲಾಸ ದ್ವಿಪಕ್ಷೀಯ ಒಪ್ಪಂದ ಮಾಡಿಕೊಂಡಿರುವ ದೇಶಗಳಲ್ಲಿ ಮಾತ್ರ ಈ ಕರೆನ್ಸಿ ಚಲಾವಣೆಯಲ್ಲಿ ಇರಲಿದೆಯಂತೆ. ಹಿಂದು ಧಾರ್ಮಿಕ ನೀತಿಗಳ 100ಕ್ಕೂ ಅಧಿಕ ಪುಸ್ತಕಗಳು 360ಕ್ಕೂ ಅಧಿಕ ಲೇಖನಗಳನ್ನು ಅಧ್ಯಯನ ಮಾಡಿ ಈ ಕರೆನ್ಸಿಯನ್ನು ಬಿಡುಗಡೆ ಮಾಡಲಾಗಿದೆ. ಹಾಗೂ ರಿಸರ್ವ್​ ಬ್ಯಾಂಕ್​ ಆರಂಭಿಸಲು ದೇಶವೊಂದರ ಜತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಹೀಗಾಗಿ ರಿಸರ್ವ್​ ಬ್ಯಾಂಕ್​ ಆಫ್​ ಕೈಲಾಸ ಕಾನೂನು ಬದ್ಧವಾಗಿದೆ ಎಂದು ಕೈಲಾಸ ವೆಬ್​ಸೈಟ್​ನಲ್ಲಿ ಹೇಳಿಕೊಳ್ಳಲಾಗಿದೆ.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 6 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 8 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 12 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ