ಕೈಲಾಸದಲ್ಲಿ ನಿತ್ಯಾನಂದನ ರಿಸರ್ವ್ ಬ್ಯಾಂಕ್! ಕೈಲಾಸದ ಕರೆನ್ಸಿ ಹೇಗಿದೆ ನೋಡೋಣ ಬನ್ನಿ!

ನವದೆಹಲಿ: ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ಗಣೇಶ ಚತುರ್ಥಿ ದಿನದಂದೇ ದೂರದ ಈಕ್ವೆಡಾರ್​ ದೇಶದ ಕರಾವಳಿಯ ಸಣ್ಣ ದ್ವೀಪದಲ್ಲಿ ಕೈಲಾಸ ದೇಶದ ರಿಸರ್ವ ಬ್ಯಾಂಕ್​ ಕೈಲಾಸ ಆರಂಭಿಸಿದ್ದಾನೆ.


ಈತನ ಕೈಲಾಸ ದೇಶ ನಿಖರವಾಗಿ ಎಲ್ಲಿದೆ ಎಂಬುದನ್ನು ಈವರೆಗೂ ನಿತ್ಯಾನಂದ ತಿಳಿಸಿಲ್ಲವಾದರೂ, ಹಲವು ಮಾಧ್ಯಮಗಳಲ್ಲಿ ಇದು ಈಕ್ವೆಡಾರ್​ನಲ್ಲಿರುವ ಒಂದು ದ್ವೀಪ ಎಂದೇ ಗುರುತಿಸಲಾಗಿದೆ. ಇದನ್ನು ನಿತ್ಯಾನಂದ ಖರೀದಿಸಿದ್ದಾನೆ ಎಂದೇ ಹೇಳಲಾಗಿದೆ.

ಕೈಲಾಸ ದೇಶದ ಪ್ರಧಾನಮಂತ್ರಿಯೂ ಆಗಿರುವ ನಿತ್ಯಾನಂದ, ತನ್ನ ಬೆಂಬಲಿಗರೊಂದಿಗೆ ಬ್ಯಾಂಕ್​ ಕಾರ್ಯಾರಂಭಕ್ಕೆ ಚಾಲನೆ ನೀಡಿದ್ದಾನೆ. ಈತ ದೇಶ ತೊರೆದಿದ್ದಾನೆಂದು ಹೇಳಲಾದ ಕಳೆದ ನವೆಂಬರ್​ ನಲ್ಲಿ ಈ ರಾಷ್ಟ್ರ ಉದಯವಾಗಿದೆ ಎಂದು ನಿತ್ಯಾನಂದ ಹೇಳಿಕೊಂಡಿದ್ದ. ಜತೆಗೆ ಈ ದೇಶದ ಪ್ರಜೆಗಳಿಗೆಂದೇ ಈ ಪಾಸ್​ಪೋರ್ಟ್​ ಆರಂಭಿಸಿದ್ದ.

ಕೈಲಾಸವೊಂದು ರಾಜ್ಯಗಳಿಲ್ಲದ ದೇಶ, ಜತೆಗೆ ಹೊಸ ಭೂಭಾಗವನ್ನು ಬಯಸುವುದಿಲ್ಲ ಎಂಬುದು ನಿತ್ಯಾನಂದನ ವ್ಯಾಖ್ಯಾನ. ತಾವಿರುವ ನೆಲದಲ್ಲಿ ಹಿಂದೂ ಧರ್ಮವನ್ನು ಪಾಲಿಸಲಾಗದ ಜನರಿಂದ ಈ ಕೈಲಾಸ ಸೃಷ್ಟಿಯಾಗಿದೆ ಎಂದು ಕೈಲಾಸ ವೆಬ್​ಸೈಟ್​ನಲ್ಲಿ ಹೇಳಿಕೊಳ್ಳಲಾಗಿದೆ.

ಕೈಲಾಸದಲ್ಲಿ ಆಚರಿಸಲ್ಪಡುತ್ತಿರುವ ಗಣೇಶ ಚತುರ್ಥಿ ಸಂದರ್ಭದಲ್ಲಿ ರಿಸರ್ವ್​ ಬ್ಯಾಂಕ್​ ಆಫ್​ ಕೈಲಾಸದ ಕರೆನ್ಸಿಯನ್ನು ಗಣಪತಿ, ಪರಮಶಿವ ಹಾಗೂ ಗುರು ನಿತ್ಯಾನಂದ ಸ್ವಾಮೀಜಿ ಪದತಲಕ್ಕೆ ಅರ್ಪಿಸಲಾಗಿದೆ ಎಂದು ಘೋಷಿಸಲಾಗಿದೆ.

ಅಷ್ಟಕ್ಕೂ ಇಲ್ಲಿನ ಕರೆನ್ಸಿ ಕೈಲಾಸಿಯನ್​ ಡಾಲರ್​. ಜತೆಗೆ, ಇತರ ನಾಣ್ಯಗಳನ್ನು ಬಿಡುಗಡೆ ಮಾಡಲಾಗಿದೆ. ಇದರ ಮೌಲ್ಯವೆಷ್ಟು ಎಂಬುದು ಇನ್ನೂ ಗೊತ್ತಾಗಿಲ್ಲ. ಡಾಲರ್​ ಎಂದ ಮೇಲೆ ಅಮೆರಿಕನ್​ ಡಾಲರ್​ ಮೌಲ್ಯವೇ ಹೊಂದಿರಬಹದು ಎಂದು ಅಂದಾಜಿಸಲಾಗುತ್ತಿದೆ. ಭಾರತೀಯ ರೂ. ವಿನಿಮಯ ದರ ಅಂದಾಜು 75 ರ.ಗಳಿಬಹುದೆಂದು ಅಂದಾಜಿಸಲಾಗುತ್ತಿದೆ.

ಕೈಲಾಸ ದ್ವಿಪಕ್ಷೀಯ ಒಪ್ಪಂದ ಮಾಡಿಕೊಂಡಿರುವ ದೇಶಗಳಲ್ಲಿ ಮಾತ್ರ ಈ ಕರೆನ್ಸಿ ಚಲಾವಣೆಯಲ್ಲಿ ಇರಲಿದೆಯಂತೆ. ಹಿಂದು ಧಾರ್ಮಿಕ ನೀತಿಗಳ 100ಕ್ಕೂ ಅಧಿಕ ಪುಸ್ತಕಗಳು 360ಕ್ಕೂ ಅಧಿಕ ಲೇಖನಗಳನ್ನು ಅಧ್ಯಯನ ಮಾಡಿ ಈ ಕರೆನ್ಸಿಯನ್ನು ಬಿಡುಗಡೆ ಮಾಡಲಾಗಿದೆ. ಹಾಗೂ ರಿಸರ್ವ್​ ಬ್ಯಾಂಕ್​ ಆರಂಭಿಸಲು ದೇಶವೊಂದರ ಜತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಹೀಗಾಗಿ ರಿಸರ್ವ್​ ಬ್ಯಾಂಕ್​ ಆಫ್​ ಕೈಲಾಸ ಕಾನೂನು ಬದ್ಧವಾಗಿದೆ ಎಂದು ಕೈಲಾಸ ವೆಬ್​ಸೈಟ್​ನಲ್ಲಿ ಹೇಳಿಕೊಳ್ಳಲಾಗಿದೆ.

Spread the love
  • Related Posts

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ ಜ. 12 ರಂದು ಜರಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ ಮಕ್ಕಳ ಗ್ರಾಮ ಸಭೆಯ ಮಹತ್ವ ಮಕ್ಕಳ ಹಕ್ಕುಗಳು ಮತ್ತು ಸಮಸ್ಯೆಗಳು ಸೂಕ್ತ ಪರಿಹಾರದ ಬಗ್ಗೆ…

    Spread the love

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    Ujire: ಜನವರಿ 11ನೇ ಆದಿತ್ಯವಾರದಂದು ಬೆಲಾಲು ಗುತ್ತು ಮನೆಯಲ್ಲಿ ಇದೇ ಬರುವ 24ನೇ ತಾರೀಕು ಶನಿವಾರದಂದು ನಡೆಯುವ ರಾಜನ್ ದೈವವಾದ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ” ಕಲ್ಕುಡ ಕಲ್ಲುರ್ಟಿ ದೈವಗಳ ಉತ್ಸವ ಹಾಗೂ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ…

    Spread the love

    You Missed

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    • By admin
    • January 12, 2026
    • 12 views
    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    • By admin
    • January 12, 2026
    • 16 views
    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    • By admin
    • January 10, 2026
    • 36 views
    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    • By admin
    • January 10, 2026
    • 101 views
    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    • By admin
    • January 10, 2026
    • 87 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    • By admin
    • January 8, 2026
    • 40 views
    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ