ಲೆಕ್ಕ ಕೊಡಿ ಎಂದವರಿಗೆ ಕಾಳಜಿ ಫಂಡ್ ನ ಲೆಕ್ಕ ಕೊಟ್ಟ ಕಾಳಜಿ ರಿಲೀಪ್ ಸಮಿತಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ವರ್ಷ ಸಂಭವಿಸಿದ ಭಾರಿ ಪ್ರವಾಹ ಹಾಗೂ ಭೂ ಕುಸಿತದ ಸಂದರ್ಭ ಶಾಸಕ ಹರೀಶ್ ಪೂಂಜರು ‘ಕಾಳಜಿ ಫಂಡ್’ ಹೆಸರಿನಲ್ಲಿ ಸಾರ್ವಜನಿಕರಿಂದ ದೊಡ್ಡ ಮಟ್ಟದಲ್ಲಿ ಹಣ ಸಂಗ್ರಹ ಮಾಡಿದ್ದಾರೆ. ಇದೀಗ ಒಂದು ವರ್ಷ ಕಳೆದರೂ ಅದರಿಂದ ಯಾರಿಗೂ ಒಂದು ರೂ. ಕೂಡಾ ವಿತರಿಸಿಲ್ಲ. ಇದರಲ್ಲಿ ಭಾರೀ ಅವ್ಯವಹಾರವಾಗಿದ್ದು, ಈ ಬಗ್ಗೆ ತನಿಖೆ ಆಗಬೇಕು ಎಂದು ಕೆಲದಿನಗಳ ಹಿಂದೆ ಮಾಜಿ ಶಾಸಕ ಮತ್ತು ಕಾಂಗ್ರೆಸ್ ನಾಯಕ ಕೆ.ವಸಂತ ಬಂಗೇರ ಒತ್ತಾಯಿಸಿದ್ದರು.

ಬೆಳ್ತಂಗಡಿ ಕಾಳಜಿ ರಿಲೀಫ್ ಫಂಡ್ ನಲ್ಲಿ ಸಂಗ್ರಹವಾದ ಒಟ್ಟು ಮೊತ್ತ 2,59,04,464.085 ಮೊಬಲಗು ಬೆಳ್ತಂಗಡಿಯ ಸಿಂಡಿಕೇಟ್ ಬ್ಯಾಂಕ್ ಖಾತೆ ನಂ: 01202200153274 ಜಮೆ ಇರುತ್ತದೆ ಎಂದು ಕಾಳಜಿ ರಿಲೀಫ್ ಫಂಡ್ ನ ಕೋಶಾಧಿಕಾರಿ ನಂದ ಕುಮಾರ್ ಯು.ಟಿ ಬೆಳ್ತಂಗಡಿಯಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

ಬೆಳ್ತಂಗಡಿ ಪ್ರವಾಸಿತಾಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಳಜಿ ಬೆಳ್ತಂಗಡಿ ಫ್ಲಡ್ ರಿಲೀಫ್ ಫಂಡ್ ನ ಕಾರ್ಯದರ್ಶಿ ವಕೀಲರಾದ ಬಿ.ಕೆ. ಧನಂಜಯ ರಾವ್ ಮತ್ತು ಕೋಶಾಧಿಕಾರಿ ನಂದಕುಮಾರ್ ಯು.ಟಿಯವರು ಕೆನೆರಾ ಬ್ಯಾಂಕ್ ನ ಅಧಿಕೃತ ಮುದ್ರೆಯೊಂದಿಗೆ ಕಾಳಜಿ ಫಂಡ್ ನ ಲೆಕ್ಕಾಚಾರವನ್ನು ತಾಲೂಕಿನ ಜನತೆಯ ಮುಂದೆ ಇಟ್ಟಿದ್ದಾರೆ.

ಕಳೆದ ವರ್ಷದ 09-08-2019 ರಿಂದ ಇಂದಿನವರೆಗೆ ಕಾಳಜಿ ಫಂಡ್ ಗೆ ಜಮೆಯಾಗಿರುವ ಹಣದ ಮಾಹಿತಿಯನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ಕಾಳಜಿ ಬೆಳ್ತಂಗಡಿ ಫ್ಲಂಡ್ ರಿಲೀಫ್ ಫಂಡ್ ನ ಸದಸ್ಯರಾದ ಉಜಿರೆ ಸಂದ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ,ಉಜಿರೆ ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ , ಲ್ಯಾನ್ಸಿ ಪಿಂಟೋ, ಜಯಕರ್ ಶೆಟ್ಟಿ, ಪ್ರವೀಣ್ ಇಂದ್ರ , ಗಣೇಶ್ ಗೌಡ , ಅಬುಬಕರ್ ಉಜಿರೆ‌ ಉಪಸ್ಥಿತರಿದ್ದರು.

Spread the love
  • Related Posts

    ಭಜನೆಯಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ: ಡಾ. ಎಂ. ಮೋಹನ ಆಳ್ವ

    ಬೆಳ್ತಂಗಡಿ: ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಪರಿಶುದ್ಧ ದೇಹ ಮತ್ತು ಮನಸಿನಿಂದ ರಾಗ, ತಾಳ, ಲಯಬದ್ಧವಾಗಿ ಭಜನೆ ಮಾಡುವುದರಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮೂಡಬಿದ್ರೆಯ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು. ಅವರು ಭಾನುವಾರ…

    Spread the love

    ಗಣೇಶೋತ್ಸವ ಮೆರವಣಿಗೆ ಮೇಲೆ ಟ್ರಕ್ ಹರಿದು 8ಮಂದಿ ದುರ್ಮರಣ

    ಹಾಸನ: ಹಾಸನದ ಮೊಸಳೆ ಹೊಸಹಳ್ಳಿಯ ಗಣೇಶೋತ್ಸವದ ಮೆರವಣಿಗೆ ವೇಳೆಯಲ್ಲಿ ಕ್ಯಾಂಟರ್ ನುಗ್ಗಿದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ 8ಮಂದಿ ಮೃತಪಟ್ಟಿದ್ದು 20ಕ್ಕೂ ಅಧಿಕ ಮಂದಿಗೆ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ. ಈ ಘಟನೆಯಿಂದ…

    Spread the love

    You Missed

    ಭಜನೆಯಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ: ಡಾ. ಎಂ. ಮೋಹನ ಆಳ್ವ

    • By admin
    • September 14, 2025
    • 49 views
    ಭಜನೆಯಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ: ಡಾ. ಎಂ. ಮೋಹನ ಆಳ್ವ

    ಗಣೇಶೋತ್ಸವ ಮೆರವಣಿಗೆ ಮೇಲೆ ಟ್ರಕ್ ಹರಿದು 8ಮಂದಿ ದುರ್ಮರಣ

    • By admin
    • September 12, 2025
    • 68 views
    ಗಣೇಶೋತ್ಸವ ಮೆರವಣಿಗೆ ಮೇಲೆ ಟ್ರಕ್ ಹರಿದು 8ಮಂದಿ ದುರ್ಮರಣ

    ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

    • By admin
    • September 9, 2025
    • 92 views
    ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 368 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 78 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 357 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ