ನಿರ್ಮಾಣ ಹಂತದಲ್ಲಿದ್ದ ಮನೆ ಕಾಮಗಾರಿಗೆ ತಡೆಯೊಡ್ಡಿ ಮನೆ ತೆರವಿಗೆ ಮುಂದಾದ ಅರಣ್ಯ ಇಲಾಖೆ ಆಕ್ರೋಶಗೊಂಡ ಜನಪ್ರತಿನಿಧಿಗಳು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ದೇವಣ್ಣಗೌಡರ ಮನೆಯನ್ನು ಅರಣ್ಯ ಇಲಾಖೆ ಕಿತ್ತೆಸೆದ ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಶಾಸಕರು ದೌಡಾಯಿಸುತ್ತಲೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದ ಪ್ರಕರಣ ತಾತ್ಕಾಲಿಕ ಸುಖಾಂತ್ಯ ಕಂಡಿದೆ.

ಸ್ಥಳಕ್ಕೆ ಜಿಲ್ಲಾ ಅರಣ್ಯಾಧಿಕಾರಿ ವೆಲಂಟನಿ ಮರಿಯಪ್ಪ ಅವರು ಭೇಟಿ ನೀಡಿ ಮನೆ ತೆರವುಗೊಳಿಸುವುದಾಗಿ ತಿಳಿಸಿದಾಗ, ಶಾಸಕರುಗಳು ತೆರವುಗೊಳಿಸುವುದಾದರೆ 309 ಸರ್ವೇ ನಂಬರ್ ಗೆ ಒಳಪಟ್ಟ ಎಲ್ಲ ಮನೆ ತೆರವುಗೊಳಿಸಿ, ಇಲ್ಲವೇ ಕಂದಾಯ, ಅರಣ್ಯ ಜಂಟಿ ಸರ್ವೇ ನಡೆಸಿ ಎಲ್ಲರಿಗೂ ಹಕ್ಕುಪತ್ರ ನೀಡಿ. ಬಡವರಿಗೊಂದು ನ್ಯಾಯ ಸಿರಿವಂತರಿಗೊಂದು ನ್ಯಾಯ ಬೇಡ ಎಂದು ಊರವರು ಜತೆಗೂಡಿ ಪಟ್ಟು ಹಿಡಿದರು.

ಬಳಿಕ ವಿಚಾರ ಗಂಭೀರ ಸ್ವರೂಪ ಪಡೆಯುತ್ತಲೆ, ಡಿಎಫ್ಒ, ಎಸಿಎಫ್, ಆರ್.ಎಫ್.ಒ ಘಟನೆ ಕುರಿತು ವಿಶ್ಲೇಷಿಸಿ, ಜಿಲ್ಲಾಧಿಕಾರಿಯವರೊಂದಿಗೆ ಮಾತುಕತೆ ನಡೆಸಿ, ತಹಶೀಲ್ದಾರ್ ಅವರ ಸಲಹೆ ಪಡೆದರು. ಬಳಿಕ ಆಗಮಿಸಿದ ಡಿಎಫ್ಒ ಮನೆಮಂದಿ ಹಾಗೂ ಶಾಸಕರಲ್ಲಿ ಮಾತುಕತೆ ನಡೆಸಿ, ‌309 ಸರ್ವೇ ನಂಬರ್ ಗೆ ಒಳಪಟ್ಟಂತೆ ಸುಮಾರು 6000 ಕ್ಕೂ ಅಧಿಕ ಎಕ್ರೆ ಭೂಮಿಯಿದೆ. ಅರಣ್ಯ ಹಾಗೂ ಕಂದಾಯ ಜಂಟಿ ಸರ್ವೇ ನಡೆಸಿದ ಬಳಿಕ ಮನೆ ತೆರವಿನ ‌ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದರು. ಮಾತ್ರವಲ್ಲದೆ ಸದ್ಯ ಮನೆ ಯಥಾಸ್ಥಿತಿಯಲ್ಲಿ ಇರಿಸಬೇಕು, ಜಂಟಿ ಸರ್ವೇ ನಡೆಸುವವರೆಗೆ ಮನೆ ಮರು ನಿರ್ಮಾಣಕ್ಕೆ ಸಂಬಂಧಿಸಿ ಯಾವುದೇ ಕಾಮಗಾರಿ ನಡೆಸುವುದಿಲ್ಲ, ಒಂದು ವೇಳೆ ಮನೆ ಪ್ರದೇಶ ಅರಣ್ಯ ಎಂದಾದಲ್ಲಿ ತಾವೇ ನಿಂತು ತೆರವುಗೊಳಿಸುವುದಾಗಿ ಶಾಸಕ ಹರೀಶ್ ಪೂಂಜ ಅವರಿಂದ ಡಿಎಫ್ಒ ಅವರು ಲಿಖಿತ ಹೇಳಿಕೆ ಬರೆಸಿಕೊಂಡರು. ಅಲ್ಲಿಗೆ ಪ್ರಕರಣ ಒಂದು ಹಂತಕ್ಕೆ ತಾತ್ಕಾಲಿಕ ಅಂತ್ಯ ಸಿಕ್ಕಂತಾಗಿದೆ. ಮುಂದೆ ಸರ್ವೇ ಕಾರ್ಯ ನಡೆಸಿ‌ ಮುಂದಿನ ನಿರ್ಧಾರಕ್ಕೆ‌ ಬರಲಾಗುವುದು ಎಂದು ಡಿಎಫ್ಒ ಭರವಸೆ ನೀಡಿದರು.

ಪ್ರಕರಣದ ನಡೆದ ಸ್ಥಳವನ್ನು ಸರ್ವೇ ಮಾಡಿ ಮುಂದಿನ ವರದಿ ಬರುವವರೆಗೆ ಯಥಾಸ್ಥಿತಿ ಕಾಪಾಡಬೇಕು ಎನ್ನುವ ಹೋರಾಟಗಾರರ ಆಗ್ರಹಕ್ಕೆ ಅರಣ್ಯ ಇಲಾಖೆ ಸಮ್ಮತಿಸಿದೆ.

ಈ ಹೋರಾಟದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸೇರಿದಂತೆ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಬಂಟ್ವಾಳ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ, ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀ ಜಯಂತ್ ಕೋಟ್ಯಾನ್, ಹಿರಿಯರಾದ ಶ್ರೀ ಕುಶಾಲಪ್ಪ ಗೌಡ ಪೂವಾಜೆ, ಅರುಣ್ ಪುತ್ತಿಲ ಹಾಗೂ ಪರಿವಾರ ಸಂಘಟನೆಗಳ ಪ್ರಮುಖರು ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಸ್ಥಳೀಯ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 4 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 5 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ