ನಿರ್ಮಾಣ ಹಂತದಲ್ಲಿದ್ದ ಮನೆ ಕಾಮಗಾರಿಗೆ ತಡೆಯೊಡ್ಡಿ ಮನೆ ತೆರವಿಗೆ ಮುಂದಾದ ಅರಣ್ಯ ಇಲಾಖೆ ಆಕ್ರೋಶಗೊಂಡ ಜನಪ್ರತಿನಿಧಿಗಳು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ದೇವಣ್ಣಗೌಡರ ಮನೆಯನ್ನು ಅರಣ್ಯ ಇಲಾಖೆ ಕಿತ್ತೆಸೆದ ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಶಾಸಕರು ದೌಡಾಯಿಸುತ್ತಲೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದ ಪ್ರಕರಣ ತಾತ್ಕಾಲಿಕ ಸುಖಾಂತ್ಯ ಕಂಡಿದೆ.

ಸ್ಥಳಕ್ಕೆ ಜಿಲ್ಲಾ ಅರಣ್ಯಾಧಿಕಾರಿ ವೆಲಂಟನಿ ಮರಿಯಪ್ಪ ಅವರು ಭೇಟಿ ನೀಡಿ ಮನೆ ತೆರವುಗೊಳಿಸುವುದಾಗಿ ತಿಳಿಸಿದಾಗ, ಶಾಸಕರುಗಳು ತೆರವುಗೊಳಿಸುವುದಾದರೆ 309 ಸರ್ವೇ ನಂಬರ್ ಗೆ ಒಳಪಟ್ಟ ಎಲ್ಲ ಮನೆ ತೆರವುಗೊಳಿಸಿ, ಇಲ್ಲವೇ ಕಂದಾಯ, ಅರಣ್ಯ ಜಂಟಿ ಸರ್ವೇ ನಡೆಸಿ ಎಲ್ಲರಿಗೂ ಹಕ್ಕುಪತ್ರ ನೀಡಿ. ಬಡವರಿಗೊಂದು ನ್ಯಾಯ ಸಿರಿವಂತರಿಗೊಂದು ನ್ಯಾಯ ಬೇಡ ಎಂದು ಊರವರು ಜತೆಗೂಡಿ ಪಟ್ಟು ಹಿಡಿದರು.

ಬಳಿಕ ವಿಚಾರ ಗಂಭೀರ ಸ್ವರೂಪ ಪಡೆಯುತ್ತಲೆ, ಡಿಎಫ್ಒ, ಎಸಿಎಫ್, ಆರ್.ಎಫ್.ಒ ಘಟನೆ ಕುರಿತು ವಿಶ್ಲೇಷಿಸಿ, ಜಿಲ್ಲಾಧಿಕಾರಿಯವರೊಂದಿಗೆ ಮಾತುಕತೆ ನಡೆಸಿ, ತಹಶೀಲ್ದಾರ್ ಅವರ ಸಲಹೆ ಪಡೆದರು. ಬಳಿಕ ಆಗಮಿಸಿದ ಡಿಎಫ್ಒ ಮನೆಮಂದಿ ಹಾಗೂ ಶಾಸಕರಲ್ಲಿ ಮಾತುಕತೆ ನಡೆಸಿ, ‌309 ಸರ್ವೇ ನಂಬರ್ ಗೆ ಒಳಪಟ್ಟಂತೆ ಸುಮಾರು 6000 ಕ್ಕೂ ಅಧಿಕ ಎಕ್ರೆ ಭೂಮಿಯಿದೆ. ಅರಣ್ಯ ಹಾಗೂ ಕಂದಾಯ ಜಂಟಿ ಸರ್ವೇ ನಡೆಸಿದ ಬಳಿಕ ಮನೆ ತೆರವಿನ ‌ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದರು. ಮಾತ್ರವಲ್ಲದೆ ಸದ್ಯ ಮನೆ ಯಥಾಸ್ಥಿತಿಯಲ್ಲಿ ಇರಿಸಬೇಕು, ಜಂಟಿ ಸರ್ವೇ ನಡೆಸುವವರೆಗೆ ಮನೆ ಮರು ನಿರ್ಮಾಣಕ್ಕೆ ಸಂಬಂಧಿಸಿ ಯಾವುದೇ ಕಾಮಗಾರಿ ನಡೆಸುವುದಿಲ್ಲ, ಒಂದು ವೇಳೆ ಮನೆ ಪ್ರದೇಶ ಅರಣ್ಯ ಎಂದಾದಲ್ಲಿ ತಾವೇ ನಿಂತು ತೆರವುಗೊಳಿಸುವುದಾಗಿ ಶಾಸಕ ಹರೀಶ್ ಪೂಂಜ ಅವರಿಂದ ಡಿಎಫ್ಒ ಅವರು ಲಿಖಿತ ಹೇಳಿಕೆ ಬರೆಸಿಕೊಂಡರು. ಅಲ್ಲಿಗೆ ಪ್ರಕರಣ ಒಂದು ಹಂತಕ್ಕೆ ತಾತ್ಕಾಲಿಕ ಅಂತ್ಯ ಸಿಕ್ಕಂತಾಗಿದೆ. ಮುಂದೆ ಸರ್ವೇ ಕಾರ್ಯ ನಡೆಸಿ‌ ಮುಂದಿನ ನಿರ್ಧಾರಕ್ಕೆ‌ ಬರಲಾಗುವುದು ಎಂದು ಡಿಎಫ್ಒ ಭರವಸೆ ನೀಡಿದರು.

ಪ್ರಕರಣದ ನಡೆದ ಸ್ಥಳವನ್ನು ಸರ್ವೇ ಮಾಡಿ ಮುಂದಿನ ವರದಿ ಬರುವವರೆಗೆ ಯಥಾಸ್ಥಿತಿ ಕಾಪಾಡಬೇಕು ಎನ್ನುವ ಹೋರಾಟಗಾರರ ಆಗ್ರಹಕ್ಕೆ ಅರಣ್ಯ ಇಲಾಖೆ ಸಮ್ಮತಿಸಿದೆ.

ಈ ಹೋರಾಟದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸೇರಿದಂತೆ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಬಂಟ್ವಾಳ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ, ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀ ಜಯಂತ್ ಕೋಟ್ಯಾನ್, ಹಿರಿಯರಾದ ಶ್ರೀ ಕುಶಾಲಪ್ಪ ಗೌಡ ಪೂವಾಜೆ, ಅರುಣ್ ಪುತ್ತಿಲ ಹಾಗೂ ಪರಿವಾರ ಸಂಘಟನೆಗಳ ಪ್ರಮುಖರು ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಸ್ಥಳೀಯ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 5 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 4 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 5 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 12 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 7 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 9 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ