ನಿರ್ಮಾಣ ಹಂತದಲ್ಲಿದ್ದ ಮನೆ ಕಾಮಗಾರಿಗೆ ತಡೆಯೊಡ್ಡಿ ಮನೆ ತೆರವಿಗೆ ಮುಂದಾದ ಅರಣ್ಯ ಇಲಾಖೆ ಆಕ್ರೋಶಗೊಂಡ ಜನಪ್ರತಿನಿಧಿಗಳು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ದೇವಣ್ಣಗೌಡರ ಮನೆಯನ್ನು ಅರಣ್ಯ ಇಲಾಖೆ ಕಿತ್ತೆಸೆದ ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಶಾಸಕರು ದೌಡಾಯಿಸುತ್ತಲೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದ ಪ್ರಕರಣ ತಾತ್ಕಾಲಿಕ ಸುಖಾಂತ್ಯ ಕಂಡಿದೆ.

ಸ್ಥಳಕ್ಕೆ ಜಿಲ್ಲಾ ಅರಣ್ಯಾಧಿಕಾರಿ ವೆಲಂಟನಿ ಮರಿಯಪ್ಪ ಅವರು ಭೇಟಿ ನೀಡಿ ಮನೆ ತೆರವುಗೊಳಿಸುವುದಾಗಿ ತಿಳಿಸಿದಾಗ, ಶಾಸಕರುಗಳು ತೆರವುಗೊಳಿಸುವುದಾದರೆ 309 ಸರ್ವೇ ನಂಬರ್ ಗೆ ಒಳಪಟ್ಟ ಎಲ್ಲ ಮನೆ ತೆರವುಗೊಳಿಸಿ, ಇಲ್ಲವೇ ಕಂದಾಯ, ಅರಣ್ಯ ಜಂಟಿ ಸರ್ವೇ ನಡೆಸಿ ಎಲ್ಲರಿಗೂ ಹಕ್ಕುಪತ್ರ ನೀಡಿ. ಬಡವರಿಗೊಂದು ನ್ಯಾಯ ಸಿರಿವಂತರಿಗೊಂದು ನ್ಯಾಯ ಬೇಡ ಎಂದು ಊರವರು ಜತೆಗೂಡಿ ಪಟ್ಟು ಹಿಡಿದರು.

ಬಳಿಕ ವಿಚಾರ ಗಂಭೀರ ಸ್ವರೂಪ ಪಡೆಯುತ್ತಲೆ, ಡಿಎಫ್ಒ, ಎಸಿಎಫ್, ಆರ್.ಎಫ್.ಒ ಘಟನೆ ಕುರಿತು ವಿಶ್ಲೇಷಿಸಿ, ಜಿಲ್ಲಾಧಿಕಾರಿಯವರೊಂದಿಗೆ ಮಾತುಕತೆ ನಡೆಸಿ, ತಹಶೀಲ್ದಾರ್ ಅವರ ಸಲಹೆ ಪಡೆದರು. ಬಳಿಕ ಆಗಮಿಸಿದ ಡಿಎಫ್ಒ ಮನೆಮಂದಿ ಹಾಗೂ ಶಾಸಕರಲ್ಲಿ ಮಾತುಕತೆ ನಡೆಸಿ, ‌309 ಸರ್ವೇ ನಂಬರ್ ಗೆ ಒಳಪಟ್ಟಂತೆ ಸುಮಾರು 6000 ಕ್ಕೂ ಅಧಿಕ ಎಕ್ರೆ ಭೂಮಿಯಿದೆ. ಅರಣ್ಯ ಹಾಗೂ ಕಂದಾಯ ಜಂಟಿ ಸರ್ವೇ ನಡೆಸಿದ ಬಳಿಕ ಮನೆ ತೆರವಿನ ‌ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದರು. ಮಾತ್ರವಲ್ಲದೆ ಸದ್ಯ ಮನೆ ಯಥಾಸ್ಥಿತಿಯಲ್ಲಿ ಇರಿಸಬೇಕು, ಜಂಟಿ ಸರ್ವೇ ನಡೆಸುವವರೆಗೆ ಮನೆ ಮರು ನಿರ್ಮಾಣಕ್ಕೆ ಸಂಬಂಧಿಸಿ ಯಾವುದೇ ಕಾಮಗಾರಿ ನಡೆಸುವುದಿಲ್ಲ, ಒಂದು ವೇಳೆ ಮನೆ ಪ್ರದೇಶ ಅರಣ್ಯ ಎಂದಾದಲ್ಲಿ ತಾವೇ ನಿಂತು ತೆರವುಗೊಳಿಸುವುದಾಗಿ ಶಾಸಕ ಹರೀಶ್ ಪೂಂಜ ಅವರಿಂದ ಡಿಎಫ್ಒ ಅವರು ಲಿಖಿತ ಹೇಳಿಕೆ ಬರೆಸಿಕೊಂಡರು. ಅಲ್ಲಿಗೆ ಪ್ರಕರಣ ಒಂದು ಹಂತಕ್ಕೆ ತಾತ್ಕಾಲಿಕ ಅಂತ್ಯ ಸಿಕ್ಕಂತಾಗಿದೆ. ಮುಂದೆ ಸರ್ವೇ ಕಾರ್ಯ ನಡೆಸಿ‌ ಮುಂದಿನ ನಿರ್ಧಾರಕ್ಕೆ‌ ಬರಲಾಗುವುದು ಎಂದು ಡಿಎಫ್ಒ ಭರವಸೆ ನೀಡಿದರು.

ಪ್ರಕರಣದ ನಡೆದ ಸ್ಥಳವನ್ನು ಸರ್ವೇ ಮಾಡಿ ಮುಂದಿನ ವರದಿ ಬರುವವರೆಗೆ ಯಥಾಸ್ಥಿತಿ ಕಾಪಾಡಬೇಕು ಎನ್ನುವ ಹೋರಾಟಗಾರರ ಆಗ್ರಹಕ್ಕೆ ಅರಣ್ಯ ಇಲಾಖೆ ಸಮ್ಮತಿಸಿದೆ.

ಈ ಹೋರಾಟದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸೇರಿದಂತೆ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಬಂಟ್ವಾಳ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ, ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀ ಜಯಂತ್ ಕೋಟ್ಯಾನ್, ಹಿರಿಯರಾದ ಶ್ರೀ ಕುಶಾಲಪ್ಪ ಗೌಡ ಪೂವಾಜೆ, ಅರುಣ್ ಪುತ್ತಿಲ ಹಾಗೂ ಪರಿವಾರ ಸಂಘಟನೆಗಳ ಪ್ರಮುಖರು ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಸ್ಥಳೀಯ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 4 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ