ನಿರ್ಮಾಣ ಹಂತದಲ್ಲಿದ್ದ ಮನೆ ಕಾಮಗಾರಿಗೆ ತಡೆಯೊಡ್ಡಿ ಮನೆ ತೆರವಿಗೆ ಮುಂದಾದ ಅರಣ್ಯ ಇಲಾಖೆ ಆಕ್ರೋಶಗೊಂಡ ಜನಪ್ರತಿನಿಧಿಗಳು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ದೇವಣ್ಣಗೌಡರ ಮನೆಯನ್ನು ಅರಣ್ಯ ಇಲಾಖೆ ಕಿತ್ತೆಸೆದ ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಶಾಸಕರು ದೌಡಾಯಿಸುತ್ತಲೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದ ಪ್ರಕರಣ ತಾತ್ಕಾಲಿಕ ಸುಖಾಂತ್ಯ ಕಂಡಿದೆ.

ಸ್ಥಳಕ್ಕೆ ಜಿಲ್ಲಾ ಅರಣ್ಯಾಧಿಕಾರಿ ವೆಲಂಟನಿ ಮರಿಯಪ್ಪ ಅವರು ಭೇಟಿ ನೀಡಿ ಮನೆ ತೆರವುಗೊಳಿಸುವುದಾಗಿ ತಿಳಿಸಿದಾಗ, ಶಾಸಕರುಗಳು ತೆರವುಗೊಳಿಸುವುದಾದರೆ 309 ಸರ್ವೇ ನಂಬರ್ ಗೆ ಒಳಪಟ್ಟ ಎಲ್ಲ ಮನೆ ತೆರವುಗೊಳಿಸಿ, ಇಲ್ಲವೇ ಕಂದಾಯ, ಅರಣ್ಯ ಜಂಟಿ ಸರ್ವೇ ನಡೆಸಿ ಎಲ್ಲರಿಗೂ ಹಕ್ಕುಪತ್ರ ನೀಡಿ. ಬಡವರಿಗೊಂದು ನ್ಯಾಯ ಸಿರಿವಂತರಿಗೊಂದು ನ್ಯಾಯ ಬೇಡ ಎಂದು ಊರವರು ಜತೆಗೂಡಿ ಪಟ್ಟು ಹಿಡಿದರು.

ಬಳಿಕ ವಿಚಾರ ಗಂಭೀರ ಸ್ವರೂಪ ಪಡೆಯುತ್ತಲೆ, ಡಿಎಫ್ಒ, ಎಸಿಎಫ್, ಆರ್.ಎಫ್.ಒ ಘಟನೆ ಕುರಿತು ವಿಶ್ಲೇಷಿಸಿ, ಜಿಲ್ಲಾಧಿಕಾರಿಯವರೊಂದಿಗೆ ಮಾತುಕತೆ ನಡೆಸಿ, ತಹಶೀಲ್ದಾರ್ ಅವರ ಸಲಹೆ ಪಡೆದರು. ಬಳಿಕ ಆಗಮಿಸಿದ ಡಿಎಫ್ಒ ಮನೆಮಂದಿ ಹಾಗೂ ಶಾಸಕರಲ್ಲಿ ಮಾತುಕತೆ ನಡೆಸಿ, ‌309 ಸರ್ವೇ ನಂಬರ್ ಗೆ ಒಳಪಟ್ಟಂತೆ ಸುಮಾರು 6000 ಕ್ಕೂ ಅಧಿಕ ಎಕ್ರೆ ಭೂಮಿಯಿದೆ. ಅರಣ್ಯ ಹಾಗೂ ಕಂದಾಯ ಜಂಟಿ ಸರ್ವೇ ನಡೆಸಿದ ಬಳಿಕ ಮನೆ ತೆರವಿನ ‌ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದರು. ಮಾತ್ರವಲ್ಲದೆ ಸದ್ಯ ಮನೆ ಯಥಾಸ್ಥಿತಿಯಲ್ಲಿ ಇರಿಸಬೇಕು, ಜಂಟಿ ಸರ್ವೇ ನಡೆಸುವವರೆಗೆ ಮನೆ ಮರು ನಿರ್ಮಾಣಕ್ಕೆ ಸಂಬಂಧಿಸಿ ಯಾವುದೇ ಕಾಮಗಾರಿ ನಡೆಸುವುದಿಲ್ಲ, ಒಂದು ವೇಳೆ ಮನೆ ಪ್ರದೇಶ ಅರಣ್ಯ ಎಂದಾದಲ್ಲಿ ತಾವೇ ನಿಂತು ತೆರವುಗೊಳಿಸುವುದಾಗಿ ಶಾಸಕ ಹರೀಶ್ ಪೂಂಜ ಅವರಿಂದ ಡಿಎಫ್ಒ ಅವರು ಲಿಖಿತ ಹೇಳಿಕೆ ಬರೆಸಿಕೊಂಡರು. ಅಲ್ಲಿಗೆ ಪ್ರಕರಣ ಒಂದು ಹಂತಕ್ಕೆ ತಾತ್ಕಾಲಿಕ ಅಂತ್ಯ ಸಿಕ್ಕಂತಾಗಿದೆ. ಮುಂದೆ ಸರ್ವೇ ಕಾರ್ಯ ನಡೆಸಿ‌ ಮುಂದಿನ ನಿರ್ಧಾರಕ್ಕೆ‌ ಬರಲಾಗುವುದು ಎಂದು ಡಿಎಫ್ಒ ಭರವಸೆ ನೀಡಿದರು.

ಪ್ರಕರಣದ ನಡೆದ ಸ್ಥಳವನ್ನು ಸರ್ವೇ ಮಾಡಿ ಮುಂದಿನ ವರದಿ ಬರುವವರೆಗೆ ಯಥಾಸ್ಥಿತಿ ಕಾಪಾಡಬೇಕು ಎನ್ನುವ ಹೋರಾಟಗಾರರ ಆಗ್ರಹಕ್ಕೆ ಅರಣ್ಯ ಇಲಾಖೆ ಸಮ್ಮತಿಸಿದೆ.

ಈ ಹೋರಾಟದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸೇರಿದಂತೆ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಬಂಟ್ವಾಳ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ, ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀ ಜಯಂತ್ ಕೋಟ್ಯಾನ್, ಹಿರಿಯರಾದ ಶ್ರೀ ಕುಶಾಲಪ್ಪ ಗೌಡ ಪೂವಾಜೆ, ಅರುಣ್ ಪುತ್ತಿಲ ಹಾಗೂ ಪರಿವಾರ ಸಂಘಟನೆಗಳ ಪ್ರಮುಖರು ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಸ್ಥಳೀಯ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Spread the love
  • Related Posts

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಬೆಳ್ತಂಗಡಿ: ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿ ಹಾಗೂ ತಾಯಿ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಮನೆಯ ಗೋಡೆಯಲ್ಲಿ ಕಳೆದ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು ಕಂಡ ಶ್ರೀನಿವಾಸಗೌಡ ಎಂಬವರು ಕಕ್ಕಿಂಜೆಯ ಉರಗಮಿತ್ರ,…

    Spread the love

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    🖊️• ಚೈತ್ರೇಶ್ ಸಿ. ಪತ್ರಕರ್ತರು, ಬೆಳ್ತಂಗಡಿ ಶಿಕ್ಷಣವೆಂಬುದು ವ್ಯಾಪಾರ ಆದಾಗಿನಿಂದ ಫಲಿತಾಂಶವೆಂಬುದು ವಿದ್ಯಾರ್ಥಿಗಳ ಪಾಲಿಗೆ ಮಾನಸಿಕ ಖಿನ್ನತೆಯ ಭಾಗವಾಗಿದೆ. ಮೌಲ್ಯಮಾಪನ ಮಾಡುವ ಕೆಲ ಉಪನ್ಯಾಸಕರ ನಿಲುವಿನಿಂದ ಮೌಲ್ಯಮಾಪನ ಮೌಲ್ಯವನ್ನೇ ಕಳೆದುಕೊಳ್ಳುವಂತಾಗಿದೆ. ಇದಕ್ಕೆ ಕಾರಣ ಪ್ರಸಕ್ತ ಸಾಲಿನ ಸಾವಿರಾರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ…

    Spread the love

    You Missed

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 29 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 75 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 39 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    • By admin
    • May 7, 2026
    • 37 views
    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    • By admin
    • May 7, 2026
    • 96 views
    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    ವಿಜಯ್‌ಗೆ ಸರ್ಕಾರ ರಚನೆ ಸವಾಲು: ಟಿವಿಕೆಗೆ ಬಹುಮತದ ಅಗ್ನಿಪರೀಕ್ಷೆ!!!

    • By admin
    • May 7, 2026
    • 24 views
    ವಿಜಯ್‌ಗೆ ಸರ್ಕಾರ ರಚನೆ ಸವಾಲು: ಟಿವಿಕೆಗೆ ಬಹುಮತದ ಅಗ್ನಿಪರೀಕ್ಷೆ!!!