ನಿರ್ಮಾಣ ಹಂತದಲ್ಲಿದ್ದ ಮನೆ ಕಾಮಗಾರಿಗೆ ತಡೆಯೊಡ್ಡಿ ಮನೆ ತೆರವಿಗೆ ಮುಂದಾದ ಅರಣ್ಯ ಇಲಾಖೆ ಆಕ್ರೋಶಗೊಂಡ ಜನಪ್ರತಿನಿಧಿಗಳು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ದೇವಣ್ಣಗೌಡರ ಮನೆಯನ್ನು ಅರಣ್ಯ ಇಲಾಖೆ ಕಿತ್ತೆಸೆದ ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಶಾಸಕರು ದೌಡಾಯಿಸುತ್ತಲೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದ ಪ್ರಕರಣ ತಾತ್ಕಾಲಿಕ ಸುಖಾಂತ್ಯ ಕಂಡಿದೆ.

ಸ್ಥಳಕ್ಕೆ ಜಿಲ್ಲಾ ಅರಣ್ಯಾಧಿಕಾರಿ ವೆಲಂಟನಿ ಮರಿಯಪ್ಪ ಅವರು ಭೇಟಿ ನೀಡಿ ಮನೆ ತೆರವುಗೊಳಿಸುವುದಾಗಿ ತಿಳಿಸಿದಾಗ, ಶಾಸಕರುಗಳು ತೆರವುಗೊಳಿಸುವುದಾದರೆ 309 ಸರ್ವೇ ನಂಬರ್ ಗೆ ಒಳಪಟ್ಟ ಎಲ್ಲ ಮನೆ ತೆರವುಗೊಳಿಸಿ, ಇಲ್ಲವೇ ಕಂದಾಯ, ಅರಣ್ಯ ಜಂಟಿ ಸರ್ವೇ ನಡೆಸಿ ಎಲ್ಲರಿಗೂ ಹಕ್ಕುಪತ್ರ ನೀಡಿ. ಬಡವರಿಗೊಂದು ನ್ಯಾಯ ಸಿರಿವಂತರಿಗೊಂದು ನ್ಯಾಯ ಬೇಡ ಎಂದು ಊರವರು ಜತೆಗೂಡಿ ಪಟ್ಟು ಹಿಡಿದರು.

ಬಳಿಕ ವಿಚಾರ ಗಂಭೀರ ಸ್ವರೂಪ ಪಡೆಯುತ್ತಲೆ, ಡಿಎಫ್ಒ, ಎಸಿಎಫ್, ಆರ್.ಎಫ್.ಒ ಘಟನೆ ಕುರಿತು ವಿಶ್ಲೇಷಿಸಿ, ಜಿಲ್ಲಾಧಿಕಾರಿಯವರೊಂದಿಗೆ ಮಾತುಕತೆ ನಡೆಸಿ, ತಹಶೀಲ್ದಾರ್ ಅವರ ಸಲಹೆ ಪಡೆದರು. ಬಳಿಕ ಆಗಮಿಸಿದ ಡಿಎಫ್ಒ ಮನೆಮಂದಿ ಹಾಗೂ ಶಾಸಕರಲ್ಲಿ ಮಾತುಕತೆ ನಡೆಸಿ, ‌309 ಸರ್ವೇ ನಂಬರ್ ಗೆ ಒಳಪಟ್ಟಂತೆ ಸುಮಾರು 6000 ಕ್ಕೂ ಅಧಿಕ ಎಕ್ರೆ ಭೂಮಿಯಿದೆ. ಅರಣ್ಯ ಹಾಗೂ ಕಂದಾಯ ಜಂಟಿ ಸರ್ವೇ ನಡೆಸಿದ ಬಳಿಕ ಮನೆ ತೆರವಿನ ‌ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದರು. ಮಾತ್ರವಲ್ಲದೆ ಸದ್ಯ ಮನೆ ಯಥಾಸ್ಥಿತಿಯಲ್ಲಿ ಇರಿಸಬೇಕು, ಜಂಟಿ ಸರ್ವೇ ನಡೆಸುವವರೆಗೆ ಮನೆ ಮರು ನಿರ್ಮಾಣಕ್ಕೆ ಸಂಬಂಧಿಸಿ ಯಾವುದೇ ಕಾಮಗಾರಿ ನಡೆಸುವುದಿಲ್ಲ, ಒಂದು ವೇಳೆ ಮನೆ ಪ್ರದೇಶ ಅರಣ್ಯ ಎಂದಾದಲ್ಲಿ ತಾವೇ ನಿಂತು ತೆರವುಗೊಳಿಸುವುದಾಗಿ ಶಾಸಕ ಹರೀಶ್ ಪೂಂಜ ಅವರಿಂದ ಡಿಎಫ್ಒ ಅವರು ಲಿಖಿತ ಹೇಳಿಕೆ ಬರೆಸಿಕೊಂಡರು. ಅಲ್ಲಿಗೆ ಪ್ರಕರಣ ಒಂದು ಹಂತಕ್ಕೆ ತಾತ್ಕಾಲಿಕ ಅಂತ್ಯ ಸಿಕ್ಕಂತಾಗಿದೆ. ಮುಂದೆ ಸರ್ವೇ ಕಾರ್ಯ ನಡೆಸಿ‌ ಮುಂದಿನ ನಿರ್ಧಾರಕ್ಕೆ‌ ಬರಲಾಗುವುದು ಎಂದು ಡಿಎಫ್ಒ ಭರವಸೆ ನೀಡಿದರು.

ಪ್ರಕರಣದ ನಡೆದ ಸ್ಥಳವನ್ನು ಸರ್ವೇ ಮಾಡಿ ಮುಂದಿನ ವರದಿ ಬರುವವರೆಗೆ ಯಥಾಸ್ಥಿತಿ ಕಾಪಾಡಬೇಕು ಎನ್ನುವ ಹೋರಾಟಗಾರರ ಆಗ್ರಹಕ್ಕೆ ಅರಣ್ಯ ಇಲಾಖೆ ಸಮ್ಮತಿಸಿದೆ.

ಈ ಹೋರಾಟದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸೇರಿದಂತೆ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಬಂಟ್ವಾಳ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ, ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀ ಜಯಂತ್ ಕೋಟ್ಯಾನ್, ಹಿರಿಯರಾದ ಶ್ರೀ ಕುಶಾಲಪ್ಪ ಗೌಡ ಪೂವಾಜೆ, ಅರುಣ್ ಪುತ್ತಿಲ ಹಾಗೂ ಪರಿವಾರ ಸಂಘಟನೆಗಳ ಪ್ರಮುಖರು ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಸ್ಥಳೀಯ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 15 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು