ನಿರ್ಮಾಣ ಹಂತದಲ್ಲಿದ್ದ ಮನೆ ಕಾಮಗಾರಿಗೆ ತಡೆಯೊಡ್ಡಿ ಮನೆ ತೆರವಿಗೆ ಮುಂದಾದ ಅರಣ್ಯ ಇಲಾಖೆ ಆಕ್ರೋಶಗೊಂಡ ಜನಪ್ರತಿನಿಧಿಗಳು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ದೇವಣ್ಣಗೌಡರ ಮನೆಯನ್ನು ಅರಣ್ಯ ಇಲಾಖೆ ಕಿತ್ತೆಸೆದ ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಶಾಸಕರು ದೌಡಾಯಿಸುತ್ತಲೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದ ಪ್ರಕರಣ ತಾತ್ಕಾಲಿಕ ಸುಖಾಂತ್ಯ ಕಂಡಿದೆ.

ಸ್ಥಳಕ್ಕೆ ಜಿಲ್ಲಾ ಅರಣ್ಯಾಧಿಕಾರಿ ವೆಲಂಟನಿ ಮರಿಯಪ್ಪ ಅವರು ಭೇಟಿ ನೀಡಿ ಮನೆ ತೆರವುಗೊಳಿಸುವುದಾಗಿ ತಿಳಿಸಿದಾಗ, ಶಾಸಕರುಗಳು ತೆರವುಗೊಳಿಸುವುದಾದರೆ 309 ಸರ್ವೇ ನಂಬರ್ ಗೆ ಒಳಪಟ್ಟ ಎಲ್ಲ ಮನೆ ತೆರವುಗೊಳಿಸಿ, ಇಲ್ಲವೇ ಕಂದಾಯ, ಅರಣ್ಯ ಜಂಟಿ ಸರ್ವೇ ನಡೆಸಿ ಎಲ್ಲರಿಗೂ ಹಕ್ಕುಪತ್ರ ನೀಡಿ. ಬಡವರಿಗೊಂದು ನ್ಯಾಯ ಸಿರಿವಂತರಿಗೊಂದು ನ್ಯಾಯ ಬೇಡ ಎಂದು ಊರವರು ಜತೆಗೂಡಿ ಪಟ್ಟು ಹಿಡಿದರು.

ಬಳಿಕ ವಿಚಾರ ಗಂಭೀರ ಸ್ವರೂಪ ಪಡೆಯುತ್ತಲೆ, ಡಿಎಫ್ಒ, ಎಸಿಎಫ್, ಆರ್.ಎಫ್.ಒ ಘಟನೆ ಕುರಿತು ವಿಶ್ಲೇಷಿಸಿ, ಜಿಲ್ಲಾಧಿಕಾರಿಯವರೊಂದಿಗೆ ಮಾತುಕತೆ ನಡೆಸಿ, ತಹಶೀಲ್ದಾರ್ ಅವರ ಸಲಹೆ ಪಡೆದರು. ಬಳಿಕ ಆಗಮಿಸಿದ ಡಿಎಫ್ಒ ಮನೆಮಂದಿ ಹಾಗೂ ಶಾಸಕರಲ್ಲಿ ಮಾತುಕತೆ ನಡೆಸಿ, ‌309 ಸರ್ವೇ ನಂಬರ್ ಗೆ ಒಳಪಟ್ಟಂತೆ ಸುಮಾರು 6000 ಕ್ಕೂ ಅಧಿಕ ಎಕ್ರೆ ಭೂಮಿಯಿದೆ. ಅರಣ್ಯ ಹಾಗೂ ಕಂದಾಯ ಜಂಟಿ ಸರ್ವೇ ನಡೆಸಿದ ಬಳಿಕ ಮನೆ ತೆರವಿನ ‌ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದರು. ಮಾತ್ರವಲ್ಲದೆ ಸದ್ಯ ಮನೆ ಯಥಾಸ್ಥಿತಿಯಲ್ಲಿ ಇರಿಸಬೇಕು, ಜಂಟಿ ಸರ್ವೇ ನಡೆಸುವವರೆಗೆ ಮನೆ ಮರು ನಿರ್ಮಾಣಕ್ಕೆ ಸಂಬಂಧಿಸಿ ಯಾವುದೇ ಕಾಮಗಾರಿ ನಡೆಸುವುದಿಲ್ಲ, ಒಂದು ವೇಳೆ ಮನೆ ಪ್ರದೇಶ ಅರಣ್ಯ ಎಂದಾದಲ್ಲಿ ತಾವೇ ನಿಂತು ತೆರವುಗೊಳಿಸುವುದಾಗಿ ಶಾಸಕ ಹರೀಶ್ ಪೂಂಜ ಅವರಿಂದ ಡಿಎಫ್ಒ ಅವರು ಲಿಖಿತ ಹೇಳಿಕೆ ಬರೆಸಿಕೊಂಡರು. ಅಲ್ಲಿಗೆ ಪ್ರಕರಣ ಒಂದು ಹಂತಕ್ಕೆ ತಾತ್ಕಾಲಿಕ ಅಂತ್ಯ ಸಿಕ್ಕಂತಾಗಿದೆ. ಮುಂದೆ ಸರ್ವೇ ಕಾರ್ಯ ನಡೆಸಿ‌ ಮುಂದಿನ ನಿರ್ಧಾರಕ್ಕೆ‌ ಬರಲಾಗುವುದು ಎಂದು ಡಿಎಫ್ಒ ಭರವಸೆ ನೀಡಿದರು.

ಪ್ರಕರಣದ ನಡೆದ ಸ್ಥಳವನ್ನು ಸರ್ವೇ ಮಾಡಿ ಮುಂದಿನ ವರದಿ ಬರುವವರೆಗೆ ಯಥಾಸ್ಥಿತಿ ಕಾಪಾಡಬೇಕು ಎನ್ನುವ ಹೋರಾಟಗಾರರ ಆಗ್ರಹಕ್ಕೆ ಅರಣ್ಯ ಇಲಾಖೆ ಸಮ್ಮತಿಸಿದೆ.

ಈ ಹೋರಾಟದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸೇರಿದಂತೆ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಬಂಟ್ವಾಳ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ, ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀ ಜಯಂತ್ ಕೋಟ್ಯಾನ್, ಹಿರಿಯರಾದ ಶ್ರೀ ಕುಶಾಲಪ್ಪ ಗೌಡ ಪೂವಾಜೆ, ಅರುಣ್ ಪುತ್ತಿಲ ಹಾಗೂ ಪರಿವಾರ ಸಂಘಟನೆಗಳ ಪ್ರಮುಖರು ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಸ್ಥಳೀಯ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Spread the love
  • Related Posts

    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    ಅಪಾಯದ ತಿರುವು: ಕ್ರಮಕ್ಕೆ ಕಾಯುತ್ತಿರುವ ಸೋಮಂತಡ್ಕ ರಸ್ತೆ ಸೋಮಂತಡ್ಕ: ಮುಂಡಾಜೆ ಗ್ರಾಮದ ಸೋಮಂತಡ್ಕದಿಂದ ಹಾಸ್ಟೆಲ್ ರಸ್ತೆಗೆ ಸೇರುವ ತಿರುವು ವಾಹನ ಸವಾರರ ಜೀವಕ್ಕೆ ಅಪಾಯಕಾರಿಯಾಗಿ ಪರಿಣಮಿಸಿದೆ. ಕಳೆದ ಕೆಲವು ತಿಂಗಳಿಂದ ಈ ಜಂಕ್ಷನ್‌ನಲ್ಲಿ ಅನೇಕ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿದ್ದು, ದೈವದ ಕೃಪೆಯಿಂದ…

    Spread the love

    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    ಚಿಕ್ಕಮಗಳೂರು: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಯಲ್ಲಿ (Sringeri Postal Ballot Recount) ಕೊನೆಗೂ ಕಾಂಗ್ರೆಸ್​​ ಶಾಸಕ ಟಿ.ಡಿ.ರಾಜೇಗೌಡ (MLA TD Rajegowda) ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.…

    Spread the love

    You Missed

    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು

    • By admin
    • May 3, 2026
    • 15 views
    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು

    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    • By admin
    • May 3, 2026
    • 34 views
    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    • By admin
    • May 2, 2026
    • 28 views
    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    • By admin
    • May 1, 2026
    • 30 views
    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    • By admin
    • April 30, 2026
    • 67 views
    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 236 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ