ನಿರ್ಮಾಣ ಹಂತದಲ್ಲಿದ್ದ ಮನೆ ಕಾಮಗಾರಿಗೆ ತಡೆಯೊಡ್ಡಿ ಮನೆ ತೆರವಿಗೆ ಮುಂದಾದ ಅರಣ್ಯ ಇಲಾಖೆ ಆಕ್ರೋಶಗೊಂಡ ಜನಪ್ರತಿನಿಧಿಗಳು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ದೇವಣ್ಣಗೌಡರ ಮನೆಯನ್ನು ಅರಣ್ಯ ಇಲಾಖೆ ಕಿತ್ತೆಸೆದ ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಶಾಸಕರು ದೌಡಾಯಿಸುತ್ತಲೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದ ಪ್ರಕರಣ ತಾತ್ಕಾಲಿಕ ಸುಖಾಂತ್ಯ ಕಂಡಿದೆ.

ಸ್ಥಳಕ್ಕೆ ಜಿಲ್ಲಾ ಅರಣ್ಯಾಧಿಕಾರಿ ವೆಲಂಟನಿ ಮರಿಯಪ್ಪ ಅವರು ಭೇಟಿ ನೀಡಿ ಮನೆ ತೆರವುಗೊಳಿಸುವುದಾಗಿ ತಿಳಿಸಿದಾಗ, ಶಾಸಕರುಗಳು ತೆರವುಗೊಳಿಸುವುದಾದರೆ 309 ಸರ್ವೇ ನಂಬರ್ ಗೆ ಒಳಪಟ್ಟ ಎಲ್ಲ ಮನೆ ತೆರವುಗೊಳಿಸಿ, ಇಲ್ಲವೇ ಕಂದಾಯ, ಅರಣ್ಯ ಜಂಟಿ ಸರ್ವೇ ನಡೆಸಿ ಎಲ್ಲರಿಗೂ ಹಕ್ಕುಪತ್ರ ನೀಡಿ. ಬಡವರಿಗೊಂದು ನ್ಯಾಯ ಸಿರಿವಂತರಿಗೊಂದು ನ್ಯಾಯ ಬೇಡ ಎಂದು ಊರವರು ಜತೆಗೂಡಿ ಪಟ್ಟು ಹಿಡಿದರು.

ಬಳಿಕ ವಿಚಾರ ಗಂಭೀರ ಸ್ವರೂಪ ಪಡೆಯುತ್ತಲೆ, ಡಿಎಫ್ಒ, ಎಸಿಎಫ್, ಆರ್.ಎಫ್.ಒ ಘಟನೆ ಕುರಿತು ವಿಶ್ಲೇಷಿಸಿ, ಜಿಲ್ಲಾಧಿಕಾರಿಯವರೊಂದಿಗೆ ಮಾತುಕತೆ ನಡೆಸಿ, ತಹಶೀಲ್ದಾರ್ ಅವರ ಸಲಹೆ ಪಡೆದರು. ಬಳಿಕ ಆಗಮಿಸಿದ ಡಿಎಫ್ಒ ಮನೆಮಂದಿ ಹಾಗೂ ಶಾಸಕರಲ್ಲಿ ಮಾತುಕತೆ ನಡೆಸಿ, ‌309 ಸರ್ವೇ ನಂಬರ್ ಗೆ ಒಳಪಟ್ಟಂತೆ ಸುಮಾರು 6000 ಕ್ಕೂ ಅಧಿಕ ಎಕ್ರೆ ಭೂಮಿಯಿದೆ. ಅರಣ್ಯ ಹಾಗೂ ಕಂದಾಯ ಜಂಟಿ ಸರ್ವೇ ನಡೆಸಿದ ಬಳಿಕ ಮನೆ ತೆರವಿನ ‌ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದರು. ಮಾತ್ರವಲ್ಲದೆ ಸದ್ಯ ಮನೆ ಯಥಾಸ್ಥಿತಿಯಲ್ಲಿ ಇರಿಸಬೇಕು, ಜಂಟಿ ಸರ್ವೇ ನಡೆಸುವವರೆಗೆ ಮನೆ ಮರು ನಿರ್ಮಾಣಕ್ಕೆ ಸಂಬಂಧಿಸಿ ಯಾವುದೇ ಕಾಮಗಾರಿ ನಡೆಸುವುದಿಲ್ಲ, ಒಂದು ವೇಳೆ ಮನೆ ಪ್ರದೇಶ ಅರಣ್ಯ ಎಂದಾದಲ್ಲಿ ತಾವೇ ನಿಂತು ತೆರವುಗೊಳಿಸುವುದಾಗಿ ಶಾಸಕ ಹರೀಶ್ ಪೂಂಜ ಅವರಿಂದ ಡಿಎಫ್ಒ ಅವರು ಲಿಖಿತ ಹೇಳಿಕೆ ಬರೆಸಿಕೊಂಡರು. ಅಲ್ಲಿಗೆ ಪ್ರಕರಣ ಒಂದು ಹಂತಕ್ಕೆ ತಾತ್ಕಾಲಿಕ ಅಂತ್ಯ ಸಿಕ್ಕಂತಾಗಿದೆ. ಮುಂದೆ ಸರ್ವೇ ಕಾರ್ಯ ನಡೆಸಿ‌ ಮುಂದಿನ ನಿರ್ಧಾರಕ್ಕೆ‌ ಬರಲಾಗುವುದು ಎಂದು ಡಿಎಫ್ಒ ಭರವಸೆ ನೀಡಿದರು.

ಪ್ರಕರಣದ ನಡೆದ ಸ್ಥಳವನ್ನು ಸರ್ವೇ ಮಾಡಿ ಮುಂದಿನ ವರದಿ ಬರುವವರೆಗೆ ಯಥಾಸ್ಥಿತಿ ಕಾಪಾಡಬೇಕು ಎನ್ನುವ ಹೋರಾಟಗಾರರ ಆಗ್ರಹಕ್ಕೆ ಅರಣ್ಯ ಇಲಾಖೆ ಸಮ್ಮತಿಸಿದೆ.

ಈ ಹೋರಾಟದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸೇರಿದಂತೆ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಬಂಟ್ವಾಳ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ, ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀ ಜಯಂತ್ ಕೋಟ್ಯಾನ್, ಹಿರಿಯರಾದ ಶ್ರೀ ಕುಶಾಲಪ್ಪ ಗೌಡ ಪೂವಾಜೆ, ಅರುಣ್ ಪುತ್ತಿಲ ಹಾಗೂ ಪರಿವಾರ ಸಂಘಟನೆಗಳ ಪ್ರಮುಖರು ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಸ್ಥಳೀಯ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Spread the love
  • Related Posts

    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    ಮಂಗಳೂರು: ವಿದ್ಯುತ್ ಸರಬರಾಜು ಕಂಪನಿಯು ತನ್ನ ಬಿಲ್ಲುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಬಾರಿ ಮಾರ್ಪಾಡು ಮಾಡಿ P&G ಹೆಸರಿನಲ್ಲಿ 0.36 surcharge ಮಾಡುತ್ತಿದ್ದು ಬಳಕೆದಾರರು ಈ ಬಗ್ಗೆ ಅರಿವಿಲ್ಲದೇ ವಿದ್ಯುತ್ ಬಿಲ್ ಪಾವತಿ ಮಾಡುತ್ತಾ ಬಂದಿದ್ದು ಕಳೆದ ಎರಡು ಮೂರು ತಿಂಗಳುಗಳಿಂದ ಈ…

    Spread the love

    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    ಧರ್ಮಸ್ಥಳ : ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ ಹಾಗೂ ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರವರು ಜುಲೈ 08 ರಂದು ಧರ್ಮಸ್ಥಳ ದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ…

    Spread the love

    You Missed

    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    • By admin
    • July 8, 2025
    • 325 views
    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    • By admin
    • July 8, 2025
    • 137 views
    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು  ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

    • By admin
    • July 8, 2025
    • 52 views
    ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    • By admin
    • July 5, 2025
    • 53 views
    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    • By admin
    • July 5, 2025
    • 39 views
    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ

    • By admin
    • July 5, 2025
    • 59 views
    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ