ಕಂಬಳ ಕ್ಷೇತ್ರದಲ್ಲಿ ಹೊಸ ದಾಖಲೆ ಬರೆದ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ

ಮಂಗಳೂರು: ಬೆಳ್ತಂಗಡಿ ತಾಲೂಕಿನ ವೇಣೂರು–ಪೆರ್ಮುಡದಲ್ಲಿ ಶನಿವಾರ ನಡೆದ ಸೂರ್ಯ–ಚಂದ್ರ ಜೋಡುಕರೆ ಕಂಬಳದಲ್ಲಿ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಹೊಸ ದಾಖಲೆ ಬರೆದಿದ್ದಾರೆ. 8.96 ಸೆಕೆಂಡ್‌ನಲ್ಲಿ 100 ಮೀಟರ್‌ ಕ್ರಮಿಸುವ ಮೂಲಕ ಇದುವರೆಗಿನ ಎಲ್ಲ ದಾಖಲೆಗಳನ್ನು ಅಳಿಸಿ ಹಾಕಿದ್ದಾರೆ.

ಕಂಬಳದ 125 ಮೀಟರ್‌ ಉದ್ದದ ಕರೆಯನ್ನು 11.21 ಸೆಕೆಂಡ್‌ನಲ್ಲಿ ಶ್ರೀನಿವಾಸಗೌಡ ತಲುಪಿದ್ದಾರೆ. ಇದನ್ನು 100 ಮೀಟರ್‌ಗೆ ಲೆಕ್ಕ ಹಾಕಿದಾಗ 8.96 ಸೆಕೆಂಡ್‌ ಸಮಯ ತೆಗೆದುಕೊಂಡಿದ್ದಾರೆ. ಕಂಬಳದ ನೇಗಿಲು ಹಿರಿಯ ವಿಭಾಗದಲ್ಲಿ ಇರುವೈಲ್ ಪಾಣಿಲ ಬಾಡ ಪೂಜಾರಿ ಅವರ ಕೋಣಗಳನ್ನು ಶ್ರೀನಿವಾಸ ಗೌಡ ಓಡಿಸಿದ್ದಾರೆ.

ಈ ಮೊದಲು ಕಳೆದ ವರ್ಷ ಐಕಳದಲ್ಲಿ ನಡೆದ ಕಂಬಳದಲ್ಲಿ ಇದೇ ಶ್ರೀನಿವಾಸ ಗೌಡ 100 ಮೀಟರ್‌ ಅನ್ನು 9.55 ಸೆಕೆಂಡ್‌ನಲ್ಲಿ ಕ್ರಮಿಸಿ ದಾಖಲೆ ಬರೆದಿದ್ದರು. ಅದಾದ ನಂತರ ಕಳೆದ ವರ್ಷದ ವೇಣೂರು ಕಂಬಳದಲ್ಲಿ ಈ ದಾಖಲೆ ಮುರಿದಿದ್ದ ಬಜಗೋಳಿ ನಿಶಾಂತ್‌ ಶೆಟ್ಟಿ 100 ಮೀಟರ್‌ ಅನ್ನು 9.52 ಸೆಕೆಂಡ್‌ನಲ್ಲಿ ಕ್ರಮಿಸಿದ್ದರು. ಬೈಂದೂರು ವಿಶ್ವನಾಥ ದೇವಾಡಿಗ ಈ ವರ್ಷ ನಡೆದ ಐಕಳ ಕಂಬಳದಲ್ಲಿ 100 ಮೀಟರ್ ಅನ್ನು 9.15 ಸೆಕೆಂಡ್‌ನಲ್ಲಿ ಕ್ರಮಿಸಿ, ಹೊಸ ದಾಖಲೆ ಬರೆದಿದ್ದರು. ಇದೀಗ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಹೊಸ ದಾಖಲೆ ಬರೆದಿದ್ದಾರೆ.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 6 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 8 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 11 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ