ಕನ್ಯಾಡಿ ಶ್ರೀಗಳಿಂದ ಕಾಲನಿರ್ಣಯನ್ಯೂಸ್ “ಶ್ರೀ ಕೃಷ್ಣವೇಷ ಸ್ಪರ್ಧೆ 2020” ಕಾರ್ಯಕ್ರಮದ ಪ್ರಶಸ್ತಿ ಪ್ರಧಾನ

ಬೆಳ್ತಂಗಡಿ: ಕಾಲನಿರ್ಣಯನ್ಯೂಸ್ ಪ್ರಾಯೋಜಕತ್ವದ “ಶ್ರೀ ಕೃಷ್ಣವೇಷ ಸ್ಪರ್ಧೆ 2020” ಕಾರ್ಯಕ್ರಮದಲ್ಲಿ
ಕನ್ಯಾಡಿಯ ಶ್ರೀ ರಾಮ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಪ್ರಶಸ್ತಿ ಪ್ರಧಾನ ಮಾಡಿ ಆಶೀರ್ವಚನ ನೀಡಿದರು.

ಮಕ್ಕಳಿಗೆ ಪ್ರೇರಣೆಯನ್ನು ತುಂಬುವ ಕೆಲಸ, ಆಧ್ಯಾತ್ಮ ಯುತವಾದ ಮೌಲ್ಯಗಳು ಪ್ರೇರಣೆಗಳು ಬರಬೇಕು ಇವತ್ತು ಸಮಾಜ ಸ್ವಲ್ಪ ಹಿಮ್ಮುಖವಾಗಿ ಹೋಗಿದ್ದು ನಮ್ಮ ಯುವ ಜನತೆ ಮೊಬೈಲ್, ಸುಖ ಭೋಗದ ಹಿಂದೆ ಬಿದ್ದಿದ್ದು ಶಾರೀರಿಕ ಸುಖ ಮನಸಿನ ಸುಖ ಎಲ್ಲವೂ, ಆಧ್ಯಾತ್ಮದಿಂದ ಮಾತ್ರ ಸುಖ ಶಾಂತಿ ನೆಮ್ಮದಿ ಪ್ರಾಪ್ತಿಸುತ್ತದೆ.

ನೈಜವಾದ ಧರ್ಮದ ಶಿಕ್ಷಣ ಮಕ್ಕಳಿಗೆ ಸಿಕ್ಕಾಗ ಆ ಮಗು ಧರ್ಮವನ್ನು ಪರಿಪಾಲಿಸುವ ಕಾರ್ಯಕ್ಕೆ ಮುಂದಾಗುತ್ತಾರೆ. ಮಕ್ಕಳಿಗೆ ಯಾವ ವಿಚಾರಧಾರೆಯನ್ನು ನೀಡಿದರು ಅದನ್ನು ಸ್ವೀಕರಿಸುವ ಗುಣ ಮಗುವಿಗೆ ಇದೆ. ಹಾಗಾಗಿ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಿ. ಗಿಡಕ್ಕೆ ಸರಿಯಾಗಿ ಪಾಲನೆ ಪೋಷಣೆ ಮಾಡಿ ಬೆಳೆಸಿದರೆ ಅದು ಹೆಮ್ಮರವಾಗಿ ಬೆಳೆದು ನೆರಳನ್ನು ನೀಡುತ್ತದೆ.

ಹಾಗೆಯೇ ಮಕ್ಕಳಿಗೆ ಬಾಲ್ಯ ಶಿಕ್ಷಣವನ್ನು ಸರಿಯಾಗಿಸಂಸ್ಕಾರಯುತವಾಗಿ ನೀಡಿದರೆ ಆ ಮಗು ದೇಶದ ಸರ್ವಶ್ರೇಷ್ಠ ಪ್ರಜೆಯಾಗುತ್ತಾನೆ. ಮಕ್ಕಳಿಗೆ ಭಗವದ್ಗೀತೆ, ಧರ್ಮದ ವಿಚಾರಗಳನ್ನು ಭೋದಿಸುವ ಕಾರ್ಯ ಆಗಬೇಕಿದೆ. ಮಗುವಿನ ಪೋಷಕರು ಆ ಮಗುವಿನ ಪೂರ್ಣ ಪ್ರಮಾಣದ ಬೆಳವಣಿಗೆಗೆ ಸಹಾಯಕರಾಗುತ್ತಾರೆ. ಮಕ್ಕಳನ್ನು ಒತ್ತಡ ರಹಿತವಾಗಿ ಪ್ರೀತಿಯಿಂದ ಸಾಕಿ ಸಲಹಿ, ಮಹಾಭಾರತ,ರಾಮಾಯಣದ ಕಥೆಗಳನ್ನು ಮಕ್ಕಳಿಗೆ ತಿಳಿಸುವ ಹಾಗೂ ಉತ್ತಮ ವಿಚಾರಧಾರೆಗಳನ್ನು ಕಲಿಸುವ ಗುರುಗಳಾಗಿ ಪೋಷಕರು ಪ್ರಮುಖ ಪಾತ್ರವಹಿಸಬೇಕೆಂದರು.

ಕಾಲನಿರ್ಣಯನ್ಯೂಸ್ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ “ಶ್ರೀಕೃಷ ವೇಷ ಸ್ಪರ್ಧೆ 2020″ನ್ನು ಆಯೋಜಿಸಲಾಗಿತ್ತು.

ಈ ಸ್ಪರ್ಧೆಯಲ್ಲಿ 369 ಪುಟಾಣಿ ಮಕ್ಕಳು ಭಾಗವಹಿಸಿದ್ದು

ಸ್ಪರ್ಧೆಯ ಪ್ರಥಮ ಬಹುಮಾನವನ್ನು ಮಹೀಕಾ ಕಲ್ಲಡ್ಕ, ದ್ವಿತೀಯ ಬಹುಮಾನವನ್ನು ಅನ್ವಿಕ್ ಗುರಿಪಳ್ಳ, ಉಜಿರೆ, ಹಾಗೂ ತೃತೀಯ ಬಹುಮಾನವನ್ನು ಅರ್ಘ್ಯ ಸಾಯಿ ಕನಸು ಮನೆ ಜೋಡು ಸ್ಥಾನ ಧರ್ಮಸ್ಥಳ ಪಡೆದು ಕೊಂಡಿದ್ದಾರೆ.

ಪ್ರೋತ್ಸಾಹಕರ ಬಹುಮಾನವನ್ನು ಅನ್ವಿ ಸುವರ್ಣ ಕೊಡಂಗಲ್ಲು ಮೂಡಬಿದ್ರೆ, ತ್ರಿಷಾ ಯು.ಕೆ ಕೋಡಿಗದ್ದೆ ನೂಜಿಬಾಳ್ತಿಲ ಕಡಬ, ಹೃದಾನ್ ಶೆಟ್ಟಿ ಈದು ಕಾರ್ಕಳ ಪಡೆದುಕೊಂಡಿದ್ದಾರೆ.

ಕಾರ್ಯಕ್ರಮದಲ್ಲಿ, ಧರ್ಮಣ್ಣ, ದಯಾನಂದ ಬೆಳಾಲು,ಗಣೇಶ್, ನವೀನ್ ಕನ್ಯಾಡಿ, ಸ್ವಸ್ತಿಕ್ ಕನ್ಯಾಡಿ, ಭರತ್.ಕೆ ಹಾಗೂ ಸ್ಪರ್ಧಾವಿಜೇತ ಮಕ್ಕಳ ಮನೆಯವರು ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ