ಕನ್ಯಾಡಿ ಶ್ರೀಗಳಿಂದ ಕಾಲನಿರ್ಣಯನ್ಯೂಸ್ “ಶ್ರೀ ಕೃಷ್ಣವೇಷ ಸ್ಪರ್ಧೆ 2020” ಕಾರ್ಯಕ್ರಮದ ಪ್ರಶಸ್ತಿ ಪ್ರಧಾನ

ಬೆಳ್ತಂಗಡಿ: ಕಾಲನಿರ್ಣಯನ್ಯೂಸ್ ಪ್ರಾಯೋಜಕತ್ವದ “ಶ್ರೀ ಕೃಷ್ಣವೇಷ ಸ್ಪರ್ಧೆ 2020” ಕಾರ್ಯಕ್ರಮದಲ್ಲಿ
ಕನ್ಯಾಡಿಯ ಶ್ರೀ ರಾಮ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಪ್ರಶಸ್ತಿ ಪ್ರಧಾನ ಮಾಡಿ ಆಶೀರ್ವಚನ ನೀಡಿದರು.

ಮಕ್ಕಳಿಗೆ ಪ್ರೇರಣೆಯನ್ನು ತುಂಬುವ ಕೆಲಸ, ಆಧ್ಯಾತ್ಮ ಯುತವಾದ ಮೌಲ್ಯಗಳು ಪ್ರೇರಣೆಗಳು ಬರಬೇಕು ಇವತ್ತು ಸಮಾಜ ಸ್ವಲ್ಪ ಹಿಮ್ಮುಖವಾಗಿ ಹೋಗಿದ್ದು ನಮ್ಮ ಯುವ ಜನತೆ ಮೊಬೈಲ್, ಸುಖ ಭೋಗದ ಹಿಂದೆ ಬಿದ್ದಿದ್ದು ಶಾರೀರಿಕ ಸುಖ ಮನಸಿನ ಸುಖ ಎಲ್ಲವೂ, ಆಧ್ಯಾತ್ಮದಿಂದ ಮಾತ್ರ ಸುಖ ಶಾಂತಿ ನೆಮ್ಮದಿ ಪ್ರಾಪ್ತಿಸುತ್ತದೆ.

ನೈಜವಾದ ಧರ್ಮದ ಶಿಕ್ಷಣ ಮಕ್ಕಳಿಗೆ ಸಿಕ್ಕಾಗ ಆ ಮಗು ಧರ್ಮವನ್ನು ಪರಿಪಾಲಿಸುವ ಕಾರ್ಯಕ್ಕೆ ಮುಂದಾಗುತ್ತಾರೆ. ಮಕ್ಕಳಿಗೆ ಯಾವ ವಿಚಾರಧಾರೆಯನ್ನು ನೀಡಿದರು ಅದನ್ನು ಸ್ವೀಕರಿಸುವ ಗುಣ ಮಗುವಿಗೆ ಇದೆ. ಹಾಗಾಗಿ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಿ. ಗಿಡಕ್ಕೆ ಸರಿಯಾಗಿ ಪಾಲನೆ ಪೋಷಣೆ ಮಾಡಿ ಬೆಳೆಸಿದರೆ ಅದು ಹೆಮ್ಮರವಾಗಿ ಬೆಳೆದು ನೆರಳನ್ನು ನೀಡುತ್ತದೆ.

ಹಾಗೆಯೇ ಮಕ್ಕಳಿಗೆ ಬಾಲ್ಯ ಶಿಕ್ಷಣವನ್ನು ಸರಿಯಾಗಿಸಂಸ್ಕಾರಯುತವಾಗಿ ನೀಡಿದರೆ ಆ ಮಗು ದೇಶದ ಸರ್ವಶ್ರೇಷ್ಠ ಪ್ರಜೆಯಾಗುತ್ತಾನೆ. ಮಕ್ಕಳಿಗೆ ಭಗವದ್ಗೀತೆ, ಧರ್ಮದ ವಿಚಾರಗಳನ್ನು ಭೋದಿಸುವ ಕಾರ್ಯ ಆಗಬೇಕಿದೆ. ಮಗುವಿನ ಪೋಷಕರು ಆ ಮಗುವಿನ ಪೂರ್ಣ ಪ್ರಮಾಣದ ಬೆಳವಣಿಗೆಗೆ ಸಹಾಯಕರಾಗುತ್ತಾರೆ. ಮಕ್ಕಳನ್ನು ಒತ್ತಡ ರಹಿತವಾಗಿ ಪ್ರೀತಿಯಿಂದ ಸಾಕಿ ಸಲಹಿ, ಮಹಾಭಾರತ,ರಾಮಾಯಣದ ಕಥೆಗಳನ್ನು ಮಕ್ಕಳಿಗೆ ತಿಳಿಸುವ ಹಾಗೂ ಉತ್ತಮ ವಿಚಾರಧಾರೆಗಳನ್ನು ಕಲಿಸುವ ಗುರುಗಳಾಗಿ ಪೋಷಕರು ಪ್ರಮುಖ ಪಾತ್ರವಹಿಸಬೇಕೆಂದರು.

ಕಾಲನಿರ್ಣಯನ್ಯೂಸ್ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ “ಶ್ರೀಕೃಷ ವೇಷ ಸ್ಪರ್ಧೆ 2020″ನ್ನು ಆಯೋಜಿಸಲಾಗಿತ್ತು.

ಈ ಸ್ಪರ್ಧೆಯಲ್ಲಿ 369 ಪುಟಾಣಿ ಮಕ್ಕಳು ಭಾಗವಹಿಸಿದ್ದು

ಸ್ಪರ್ಧೆಯ ಪ್ರಥಮ ಬಹುಮಾನವನ್ನು ಮಹೀಕಾ ಕಲ್ಲಡ್ಕ, ದ್ವಿತೀಯ ಬಹುಮಾನವನ್ನು ಅನ್ವಿಕ್ ಗುರಿಪಳ್ಳ, ಉಜಿರೆ, ಹಾಗೂ ತೃತೀಯ ಬಹುಮಾನವನ್ನು ಅರ್ಘ್ಯ ಸಾಯಿ ಕನಸು ಮನೆ ಜೋಡು ಸ್ಥಾನ ಧರ್ಮಸ್ಥಳ ಪಡೆದು ಕೊಂಡಿದ್ದಾರೆ.

ಪ್ರೋತ್ಸಾಹಕರ ಬಹುಮಾನವನ್ನು ಅನ್ವಿ ಸುವರ್ಣ ಕೊಡಂಗಲ್ಲು ಮೂಡಬಿದ್ರೆ, ತ್ರಿಷಾ ಯು.ಕೆ ಕೋಡಿಗದ್ದೆ ನೂಜಿಬಾಳ್ತಿಲ ಕಡಬ, ಹೃದಾನ್ ಶೆಟ್ಟಿ ಈದು ಕಾರ್ಕಳ ಪಡೆದುಕೊಂಡಿದ್ದಾರೆ.

ಕಾರ್ಯಕ್ರಮದಲ್ಲಿ, ಧರ್ಮಣ್ಣ, ದಯಾನಂದ ಬೆಳಾಲು,ಗಣೇಶ್, ನವೀನ್ ಕನ್ಯಾಡಿ, ಸ್ವಸ್ತಿಕ್ ಕನ್ಯಾಡಿ, ಭರತ್.ಕೆ ಹಾಗೂ ಸ್ಪರ್ಧಾವಿಜೇತ ಮಕ್ಕಳ ಮನೆಯವರು ಉಪಸ್ಥಿತರಿದ್ದರು.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 183 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 41 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 49 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 101 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 45 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ