ಬದುಕಿರುವಷ್ಟು ಕಾಲ ಇತರರಿಗೆ ಪ್ರೇರಣೆಯಾಗುವ ವ್ಯಕ್ತಿಗಳನ್ನು ಜಗತ್ತು ನೆನಪಿಟ್ಟುಕೊಳ್ಳುತ್ತದೆ: ಶ್ರೀದೇವಿ ಪುತ್ತೂರು

ಧರ್ಮಸ್ಥಳ: ಗಣೇಶೋತ್ಸವ ರಾಷ್ಟ್ರೀಯತೆಯ ಭಾವವನ್ನು ಜಾಗರಣ ಮಾಡುವ ಜನರ ಉತ್ಸವ. ಸ್ವಾತಂತ್ರ್ಯ ಹೋರಾಟದಲ್ಲಿ ಬಾಲಗಂಗಾಧರ ತಿಲಕರ ನೇತೃತ್ವದಲ್ಲಿ ಸರ್ವರ ಮನೆಬಾಗಿಲಿಗೆ ದೇವರನ್ನು ಕೊಂಡೊಯ್ದು ಸಂಘಟಿತ ಸಮಾಜವನ್ನು ಕಟ್ಟುವುದಕ್ಕೆ ಸಹಕರಿಸಿದ ಧಾರ್ಮಿಕ ಉತ್ಸವ. ಇದರ ಮೂಲಕ ಸ್ವರಾಜ್ಯ, ಸ್ವದೇಶಿ, ರಾಷ್ಟ್ರೀಯ ಶಿಕ್ಷಣದ ಚಿಂತನೆಗಳನ್ನು ಸಮಾಜದ ಮುಂದಿಡಲು ಸಾಧ್ಯವಾಯಿತು ಎಂದು ಯುವ ವಾಗ್ಮಿ ಶ್ರೀದೇವಿ ಪುತ್ತೂರು ಹೇಳಿದರು.

ಕನ್ಯಾಡಿ ಗ್ರಾಮದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ಆಚರಿಸಲ್ಪಟ್ಟ 9ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದಲ್ಲಿ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು.

ಭಾರತವನ್ನು ಕೇವಲ ನಕ್ಷೆಯಲ್ಲಿರುವ ದೇಶ ಮಾತ್ರ ಎಂದುಕೊಂಡವರು ಆಕ್ರಮಣಕಾರರಾದರು. ಆದರೆ ಭಾರತಾಂಬೆಯ ಅಂತಃಸತ್ವವನ್ನು ಅರಿತುಕೊಳ್ಳಲು ಹೊರಟವರು ಜ್ಞಾನಮಾರ್ಗದಲ್ಲಿ ಮೋಕ್ಷ ಸಾಧನೆಯತ್ತ ಸಾಗಿದರು. ಹೀಗೆ ಜಗತ್ತಿನ ಜನರಿಗೆ ಅವರವರ ಮನೋಧರ್ಮಕ್ಕೆ ಅನುಗುಣವಾಗಿ ಸ್ಪಂದಿಸಿದ ಶ್ರೇಷ್ಠ ಪರಂಪರೆ ಭಾರತದ್ದು ಎಂದು ಅಭಿಪ್ರಾಯಪಟ್ಟರು.

ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಹಸ್ರಾರು ಮಹಾನ್ ಪುರುಷರು ಸ್ವರಾಜ್ಯವೆಂಬ ಧ್ಯೇಯಕ್ಕಾಗಿ ಕಟಿಬದ್ಧರಾಗಿ ತಮ್ಮ ಸರ್ವಸ್ವವನ್ನು ಸಮರ್ಪಿಸಿಕೊಂಡಿದ್ದಾರೆ‌. ಅಂತಹ ವೀರರನ್ನು ಸಮಾಜಕ್ಕೆ ಕೊಡುಗೆಯಾಗಿ ಕೊಟ್ಟ ಮಾತೆಯರ ತ್ಯಾಗವನ್ನು ಸ್ಮರಿಸಬೇಕಿದೆ. ಅವರ ತ್ಯಾಗವನ್ನು ಗೌರವಿಸುತ್ತಾ ಪ್ರೇರಣೆಯನ್ನು ಪಡೆದು ಕಾರ್ಯಪ್ರವೃತ್ತರಾಗಬೇಕಾದ ಅಗತ್ಯತೆ ನಮ್ಮ ಮುಂದಿದೆ ಎಂದು ನುಡಿದರು.

ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಕನ್ಯಾಡಿ ರಾಮಕ್ಷೇತ್ರದ ಮಠಾಧೀಶರಾದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಸಮಾಜವನ್ನು, ಯುವಕರನ್ನು ಒಗ್ಗೂಡಿಸುವಲ್ಲಿ ಇಂತಹ ಉತ್ಸವಗಳು ಹಿಂದೆ ಕೆಲಸ ಮಾಡಿದ್ದವು. ಇನ್ನು ಮುಂದಿನ ದಿನಗಳಲ್ಲಿ ಅದರ ಅನಿವಾರ್ಯ ನಮಗಿಲ್ಲವೆಂದು ಕೈ ಬಿಡದೆ ಮುಂದುವರೆಸಿಕೊಂಡು ಹೋಗುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.

ಇದೇ ವೇಳೆ ಕನ್ಯಾಡಿಯ ನೂತನ ಕುಣಿತ ಭಜನಾ ತಂಡ ಭಕ್ತಪ್ರಿಯ ಉದ್ಘಾಟನೆಗೊಂಡಿತು.

ಪೃಥ್ವೀಶ್ ಧರ್ಮಸ್ಥಳ ನಿರೂಪಿಸಿದ ಕಾರ್ಯಕ್ರಮದಲ್ಲಿ ಸುದರ್ಶನ್ ಕನ್ಯಾಡಿ ಪ್ರಸ್ತಾವಿಕವಾಗಿ ಮಾತನಾಡಿದರು. ಗಣೇಶ್ ಬಜಿಲ ಸ್ವಾಗತಿಸಿ ಚಂದ್ರಾವತಿ ಬಜಿಲ ವಂದಿಸಿದರು.

ಕಾರ್ಯಕ್ರಮದಲ್ಲಿ ಗಣೇಶೋತ್ಸವ ಸಮಿತಿ ಹಾಗೂ ಹಿಂದೂ ಧಾರ್ಮಿಕ ಸೇವಾಸಮಿತಿ(ರಿ) ಕನ್ಯಾಡಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 20 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 72 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ