ಮಹಾ ಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀಗಳು

ಕನ್ಯಾಡಿ: ಭಾರತದ ನಾಗಾ ಸಾಧು ಸನ್ಯಾಸಿ ಪರಂಪರೆಯಲ್ಲಿ ಕರ್ನಾಟಕದ ಮೊದಲ ಮಹಾ ಮಂಡಲೇಶ್ವರರಾಗಿ ಕನ್ಯಾಡಿಯ ಪೂಜ್ಯ ಗುರುಗಳಾದ ಶ್ರೀ ಬ್ರಹ್ಮಾಂನಂದ ಸರಸ್ವತಿ ಸ್ವಾಮೀಜಿಯವರು ಪಟ್ಟಾಭಿಶಿಕ್ತರಾಗಿದ್ದಾರೆ.

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಜುನಾ ಅಖಾಡದ ಆಚಾರ್ಯರಾದ ಅವದೇಶಾನಂದ ಗಿರಿ ಮಹಾರಾಜರು ಪೂಜ್ಯ ಸ್ವಾಮೀಜಿಯವರಿಗೆ ಪಟ್ಟಾಭಿಷೇಕ ನೆರವೇರಿಸಿದರು. ಇದು ಸ್ವಾಮೀಜಿಗಳ ಪೈಕಿ ಕನ್ಯಾಡಿ ಶ್ರೀರಾಮಕ್ಷೇತ್ರದ ಸದ್ಗರು ಶ್ರೀಗಳ ಮೂಲಕ ಕರ್ನಾಟಕಕ್ಕೆ ಬರುವ ಪ್ರಪ್ರಥಮ ಮಹಾಮಂಡಲೇಶ್ವರ ಪದವಿಯಾಗಿದೆ‌. ಈ ಪಟ್ಟಾಭಿಷೇಕರಾದವರಿಗೆ ಧಾರ್ಮಿಕ ಪುರುಷನಿಗೆ ರಾಷ್ಟ್ರಾದ್ಯಂತ ವಿಶೇಷ ಸೌಲಭ್ಯ ನೀಡಲಾಗುತ್ತದೆ. ಅಲ್ಲದೆ ಶ್ರೀಗಳು ಮುಂದೆ ರಾಷ್ಟ್ರಾದ್ಯಂತ ಧರ್ಮ ಪ್ರಚಾರದ ಜತೆಗೆ ಆಧ್ಯಾತ್ಮದ ಉನ್ನತ ಸಾಧನೆಗಾಗಿ ಧಾರ್ಮಿಕ ಮೌಲ್ಯಗಳನ್ನು ಮತ್ತಷ್ಟು ಬಲಿಷ್ಠಗೊಳಿಸಲು ಅರ್ಹತೆಯುಳ್ಳವರಾಗಿದ್ದಾರೆಂದು ಪರಿಗಣಿಸಿ ನಾಗಾ ಸಾದು ಸನ್ಯಾಸಿ ಪರಂಪರೆಯಲ್ಲಿ ಜುನಾ ಅಖಾಡ ಈ ಜವಾಬ್ದಾರಿಯನ್ನು ನೀಡಿದೆ.

ಹೇಗೆ ಆಯ್ಕೆ?
ಧಾರ್ಮಿಕ ಕ್ಷೇತ್ರ, ಆಧ್ಯಾತ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿದ ಮಹಾಪುರುಷರಿಗೆ ಈ ಪದವಿಯನ್ನು ಪ್ರದಾನ ಮಾಡುವುದು ಅಖಾಡದ ವಾಡಿಕೆಯಾಗಿದೆ. ಈ ಪದವಿಗೆ ಅರ್ಹರಾದವರು ಸ್ವತಂತ್ರ್ಯ ಪೀಠಾಧೀಶರಾಗಿರಬೇಕಾಗಿದೆ. ಪಟ್ಟಾಭಿಷೇಕಕ್ಕೂ ಮುನ್ನ ಅಖಾಡದಲ್ಲಿರುವ ಕ್ಯಾಬಿನೇಟ್ ಸದಸ್ಯರು ಸ್ವಾಮೀಜಿವರ ಆಧ್ಯಾತ್ಮಿಕ ಸತ್ಸಂಗವನ್ನು ಪರಿಶೀಲಿಸಿ ಬೈಟಕ್ ನಲ್ಲಿ ಚರ್ಚೆ ನಡೆಸಿ ಗೌರವ ಪ್ರದಾನ ಮಾಡುವುದಾಗಿದೆ. ಶ್ರೀಗಳು ಮುಂದೆ ರಾಷ್ಟ್ರಾದ್ಯಂತ ಧರ್ಮ ಪ್ರಚಾರದ ಜತೆಗೆ ಆಧ್ಯಾತ್ಮದ ಉನ್ನತ ಸಾಧನೆಗಾಗಿ ಧಾರ್ಮಿಕ ಮೌಲ್ಯಗಳನ್ನು ಮತ್ತಷ್ಟು ಬಲಿಷ್ಠಗೊಳಿಸಲು ಅರ್ಹತೆಯುಳ್ಳವರಾಗಿದ್ದಾರೆಂದು ಪರಿಗಣಿಸಿ ನಾಗಾ ಸಾದು ಸನ್ಯಾಸಿ ಪರಂಪರೆಯಲ್ಲಿ ಜುನಾ ಅಖಾಡ ಈ ಜವಾಬ್ದಾರಿಯನ್ನು ನೀಡಿದೆ.

ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಹಿನ್ನೆಲೆ ಏನು?
ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ಬಳಿಕ ಪೀಠಾಧೀಶರಾದವರು ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರು. ಬಳಿಕ ಜಗದ್ಗುರುಗಳಾಗಿ ಉಡುಪಿ, ಭಟ್ಕಳ ಅಶ್ರಕೇರಿ ನಿಶ್ಚಳ ಮಕ್ಕಿ, ಭಟ್ಕಳದ ಕರಿಕಲ್ ಸಮುದ್ರ ಕಿನಾರೆ ರಾಮಮಂದಿರ ಸಹಿತ ಹರಿದ್ವಾರ ಗಂಗಾ ಕಿನಾರೆಯಲ್ಲಿ ಶಾಖಾ ಮಠ ಸ್ಥಾಪಿಸಿದ್ದಾರೆ. ಪ್ರಸ್ತುತ ಅಯೋಧ್ಯೆಯಲ್ಲಿ ಶಾಖಾ ಮಠ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಕೇರಳ, ತಿರುಪತಿ, ಶಿವಮೊಗ್ಗ ದಲ್ಲಿ ಶಾಖಾ ಮಠ ನಿರ್ಮಿಸಲು ಜಾಗ ನಿಗದಿಯಾಗಿದೆ. ಈ ಮೂಲಕ ಭಾರತದಲ್ಲಿ ಒಟ್ಟು 9 ಕಡೆ ಶಾಖಾ ಮಠ ನಿರ್ಮಿಸಿ ಜನರಲ್ಲಿ ಧಾರ್ಮಿಕ ಪ್ರಜ್ಞೆ ಉತ್ತೇಜಿಸುತ್ತಿದ್ದಾರೆ. 2018 ರಲ್ಲಿ ದಕ್ಷಿಣ ಭಾರತದಲ್ಲಿ ಪ್ರಪ್ರಥಮ ಬಾರಿಗೆ ಕನ್ಯಾಡಿಗೆ ರಾಷ್ಟ್ರದಾದ್ಯಂತ ಸಾದುಸಂತರನ್ನು ಕರೆಸಿ ಧರ್ಮ ಸಂಸತ್ ನಡೆಸಿದ್ದರು.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸರ್ಕಾರವು ರಾಜ್ಯದ ವಿವಿಧ ಭಾಗಗಳಲ್ಲಿ ನೂತನ 12 ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಸಾರ್ವಜನಿಕರ ಭದ್ರತೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಸೇವೆಗಳನ್ನು ಜನರಿಗೆ ಇನ್ನಷ್ಟು ಸಮೀಪಕ್ಕೆ ತಲುಪಿಸಲು ಈ ಕ್ರಮ…

    Spread the love

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 8 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 14 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 39 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 52 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 17 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್