ಮಹಾ ಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀಗಳು

ಕನ್ಯಾಡಿ: ಭಾರತದ ನಾಗಾ ಸಾಧು ಸನ್ಯಾಸಿ ಪರಂಪರೆಯಲ್ಲಿ ಕರ್ನಾಟಕದ ಮೊದಲ ಮಹಾ ಮಂಡಲೇಶ್ವರರಾಗಿ ಕನ್ಯಾಡಿಯ ಪೂಜ್ಯ ಗುರುಗಳಾದ ಶ್ರೀ ಬ್ರಹ್ಮಾಂನಂದ ಸರಸ್ವತಿ ಸ್ವಾಮೀಜಿಯವರು ಪಟ್ಟಾಭಿಶಿಕ್ತರಾಗಿದ್ದಾರೆ.

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಜುನಾ ಅಖಾಡದ ಆಚಾರ್ಯರಾದ ಅವದೇಶಾನಂದ ಗಿರಿ ಮಹಾರಾಜರು ಪೂಜ್ಯ ಸ್ವಾಮೀಜಿಯವರಿಗೆ ಪಟ್ಟಾಭಿಷೇಕ ನೆರವೇರಿಸಿದರು. ಇದು ಸ್ವಾಮೀಜಿಗಳ ಪೈಕಿ ಕನ್ಯಾಡಿ ಶ್ರೀರಾಮಕ್ಷೇತ್ರದ ಸದ್ಗರು ಶ್ರೀಗಳ ಮೂಲಕ ಕರ್ನಾಟಕಕ್ಕೆ ಬರುವ ಪ್ರಪ್ರಥಮ ಮಹಾಮಂಡಲೇಶ್ವರ ಪದವಿಯಾಗಿದೆ‌. ಈ ಪಟ್ಟಾಭಿಷೇಕರಾದವರಿಗೆ ಧಾರ್ಮಿಕ ಪುರುಷನಿಗೆ ರಾಷ್ಟ್ರಾದ್ಯಂತ ವಿಶೇಷ ಸೌಲಭ್ಯ ನೀಡಲಾಗುತ್ತದೆ. ಅಲ್ಲದೆ ಶ್ರೀಗಳು ಮುಂದೆ ರಾಷ್ಟ್ರಾದ್ಯಂತ ಧರ್ಮ ಪ್ರಚಾರದ ಜತೆಗೆ ಆಧ್ಯಾತ್ಮದ ಉನ್ನತ ಸಾಧನೆಗಾಗಿ ಧಾರ್ಮಿಕ ಮೌಲ್ಯಗಳನ್ನು ಮತ್ತಷ್ಟು ಬಲಿಷ್ಠಗೊಳಿಸಲು ಅರ್ಹತೆಯುಳ್ಳವರಾಗಿದ್ದಾರೆಂದು ಪರಿಗಣಿಸಿ ನಾಗಾ ಸಾದು ಸನ್ಯಾಸಿ ಪರಂಪರೆಯಲ್ಲಿ ಜುನಾ ಅಖಾಡ ಈ ಜವಾಬ್ದಾರಿಯನ್ನು ನೀಡಿದೆ.

ಹೇಗೆ ಆಯ್ಕೆ?
ಧಾರ್ಮಿಕ ಕ್ಷೇತ್ರ, ಆಧ್ಯಾತ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿದ ಮಹಾಪುರುಷರಿಗೆ ಈ ಪದವಿಯನ್ನು ಪ್ರದಾನ ಮಾಡುವುದು ಅಖಾಡದ ವಾಡಿಕೆಯಾಗಿದೆ. ಈ ಪದವಿಗೆ ಅರ್ಹರಾದವರು ಸ್ವತಂತ್ರ್ಯ ಪೀಠಾಧೀಶರಾಗಿರಬೇಕಾಗಿದೆ. ಪಟ್ಟಾಭಿಷೇಕಕ್ಕೂ ಮುನ್ನ ಅಖಾಡದಲ್ಲಿರುವ ಕ್ಯಾಬಿನೇಟ್ ಸದಸ್ಯರು ಸ್ವಾಮೀಜಿವರ ಆಧ್ಯಾತ್ಮಿಕ ಸತ್ಸಂಗವನ್ನು ಪರಿಶೀಲಿಸಿ ಬೈಟಕ್ ನಲ್ಲಿ ಚರ್ಚೆ ನಡೆಸಿ ಗೌರವ ಪ್ರದಾನ ಮಾಡುವುದಾಗಿದೆ. ಶ್ರೀಗಳು ಮುಂದೆ ರಾಷ್ಟ್ರಾದ್ಯಂತ ಧರ್ಮ ಪ್ರಚಾರದ ಜತೆಗೆ ಆಧ್ಯಾತ್ಮದ ಉನ್ನತ ಸಾಧನೆಗಾಗಿ ಧಾರ್ಮಿಕ ಮೌಲ್ಯಗಳನ್ನು ಮತ್ತಷ್ಟು ಬಲಿಷ್ಠಗೊಳಿಸಲು ಅರ್ಹತೆಯುಳ್ಳವರಾಗಿದ್ದಾರೆಂದು ಪರಿಗಣಿಸಿ ನಾಗಾ ಸಾದು ಸನ್ಯಾಸಿ ಪರಂಪರೆಯಲ್ಲಿ ಜುನಾ ಅಖಾಡ ಈ ಜವಾಬ್ದಾರಿಯನ್ನು ನೀಡಿದೆ.

ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಹಿನ್ನೆಲೆ ಏನು?
ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ಬಳಿಕ ಪೀಠಾಧೀಶರಾದವರು ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರು. ಬಳಿಕ ಜಗದ್ಗುರುಗಳಾಗಿ ಉಡುಪಿ, ಭಟ್ಕಳ ಅಶ್ರಕೇರಿ ನಿಶ್ಚಳ ಮಕ್ಕಿ, ಭಟ್ಕಳದ ಕರಿಕಲ್ ಸಮುದ್ರ ಕಿನಾರೆ ರಾಮಮಂದಿರ ಸಹಿತ ಹರಿದ್ವಾರ ಗಂಗಾ ಕಿನಾರೆಯಲ್ಲಿ ಶಾಖಾ ಮಠ ಸ್ಥಾಪಿಸಿದ್ದಾರೆ. ಪ್ರಸ್ತುತ ಅಯೋಧ್ಯೆಯಲ್ಲಿ ಶಾಖಾ ಮಠ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಕೇರಳ, ತಿರುಪತಿ, ಶಿವಮೊಗ್ಗ ದಲ್ಲಿ ಶಾಖಾ ಮಠ ನಿರ್ಮಿಸಲು ಜಾಗ ನಿಗದಿಯಾಗಿದೆ. ಈ ಮೂಲಕ ಭಾರತದಲ್ಲಿ ಒಟ್ಟು 9 ಕಡೆ ಶಾಖಾ ಮಠ ನಿರ್ಮಿಸಿ ಜನರಲ್ಲಿ ಧಾರ್ಮಿಕ ಪ್ರಜ್ಞೆ ಉತ್ತೇಜಿಸುತ್ತಿದ್ದಾರೆ. 2018 ರಲ್ಲಿ ದಕ್ಷಿಣ ಭಾರತದಲ್ಲಿ ಪ್ರಪ್ರಥಮ ಬಾರಿಗೆ ಕನ್ಯಾಡಿಗೆ ರಾಷ್ಟ್ರದಾದ್ಯಂತ ಸಾದುಸಂತರನ್ನು ಕರೆಸಿ ಧರ್ಮ ಸಂಸತ್ ನಡೆಸಿದ್ದರು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 2 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 7 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 9 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 6 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ