ಅಳಿಯುವ ಕಾನನ… ಉಳಿಸುವ ಯಜಮಾನ.. ವನದೇವಿಯ ಪೋಷಣೆಗೆ ನಿಂತ ಪ್ರಕೃತಿ ಪುತ್ರ

🖊️• ದಿನೇಶ್ ಹೊಳ್ಳ ಸಹ್ಯಾದ್ರಿ ಸಂಚಯ (ರಿ)

ವನದೇವಿ ಅಳುತ್ತಿದ್ದಾಳೆ ಯಾಕೆಂದರೆ ಆಳುವ ಅರಸರು ಆಕೆಗೆ ಮಾನಸಿಕ ಹಿಂಸೆ ನೀಡುತ್ತಾ ಆಳುತ್ತಿದ್ದಾರೆ. ಅಡವಿಯ ಒಳಗಿಂದ ‘ ಭದ್ರವಾಗಿದ್ದ ನಾನು ಛಿದ್ರ ವಾಗುತ್ತಿದ್ದೇನೆ ‘ ಎಂಬ ಒಂದು ಕೂಗು ಕೇಳುತ್ತಿದೆ. ವನ ದೇವಿಯ ಈ ರೋದನಕ್ಕೆ ಕಿವಿಯಾಗಿ ತನ್ನ ಸ್ವಂತ ಜಾಗವನ್ನೇ ಅಡವಿಯನ್ನಾಗಿ ಮಾಡಲು ಹೊರಟವರು ನಿಜಕ್ಕೂ ಧನ್ಯರು. ಸಾಮಾನ್ಯವಾಗಿ ಒಂದಿಷ್ಟು ಸ್ವಂತ ಜಾಗ ಇದ್ದರೆ ಅದರಲ್ಲಿ ಹಣ ಮಾಡುವಂತಹ ಬೆಳೆ ಬೆಳೆಸುವ ವ್ಯಾವಹಾರಿಕ ದೃಷ್ಟಿ ಕೋನ ಇಡುವಂತ ಮನಸುಗಳು ಸಾಕಷ್ಟಿರಬಹುದು. ಆದರೆ ತನ್ನ ಸ್ವಂತ ಒಂದು ಎಕರೆ ಗಿಂತಲೂ ಹೆಚ್ಚು ಜಾಗದಲ್ಲಿ ಒಂದು ಸುಂದರವಾದ ಹಸಿರು ವನವನ್ನು ನಿರ್ಮಾಣ ಮಾಡುವ ತನ್ನ ಬಹುಕಾಲದ ವಿಶಿಷ್ಟ ಕನಸನ್ನು ನನಸು ಮಾಡಿ ಸಾಧಿಸಿ ತೋರಿಸಿದವರು ನಮ್ಮ ಆತ್ಮೀಯ ಮಿತ್ರ, ಪ್ರಕೃತಿ ಪುತ್ರ ಬೆಳ್ತಂಗಡಿ ಮುಂಡಾಜೆ ಯ ಸಚಿನ್ ಭಿಡೆ.


ದೇಶ ಸೇವೆ, ಪ್ರಕೃತಿ ಸೇವೆ, ತಾಯಿ ಸೇವೆ ಇವೆಲ್ಲವನ್ನೂ ಒಂದೇ ಚೌಕಟ್ಟಿನ ಒಳಗೆ ಮಾಡಿ ಅದು ನಿರಂತರ ಈ ದೇಶಕ್ಕೆ, ಪ್ರಕೃತಿಗೆ ಕೊಡುಗೆ ನೀಡುವಂತಾಗಬೇಕು ಎಂಬ ಸಚಿನ್ ರವರ ಪರಿಕಲ್ಪನೆಗೆ ಹೊಳೆದಾಗ ಅಭಿವ್ಯಕ್ತ ಗೊಂಡದ್ದು ‘ ಕಾರ್ಗಿಲ್ ವನ ‘ ಎಂಬ ಅಡವಿ ನಿರ್ಮಾಣ. ಕಾರ್ಗಿಲ್ ಹುತಾತ್ಮರ ( ಜೂನ್ 26 ಕಾರ್ಗಿಲ್ ಹುತಾತ್ಮರ ದಿನಾಚರಣೆ ) ಸ್ಮರಣಾರ್ಥ ತನ್ನ ತೋಟದ ಸಮೀಪದಲ್ಲೇ ಇದ್ದ ಜಾಗದಲ್ಲಿ ಕಾರ್ಗಿಲ್ ವನ ಎಂಬ ಕಾನನದ ಕನಸು ಇಂದು ಚಿಗುರೊಡೆದಿದೆ. ಈ ಜಾಗ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದು ಬೆಟ್ಟ ಮೇಲಿನಿಂದ ಕೆಳಗಡೆ ಕಣಿವೆ ಪ್ರದೇಶದಲ್ಲಿ ವರ್ಷ ಪೂರ್ತಿ ನೀರು ಲಭಿಸುವಂತಹ ಗಿಡ, ಮರಗಳ ಬೆಳವಣಿಗೆಗೆ ಪೂರಕವಾದ ಸ್ಥಳ. ಇದರಲ್ಲಿ ಕಮರ್ಷಿಯಲ್ ಬೆಳೆ ಬೆಳೆಸಿ ಸಚಿನ್ ಗೆ ಬೇಕಾದಷ್ಟು ಹಣ ಮಾಡಲು ಸಾಕಷ್ಟು ಅವಕಾಶಗಳು ಇತ್ತು. ಆದರೂ ತನ್ನಿಂದ ಈ ಪ್ರಕೃತಿಗೆ, ಈ ದೇಶಕ್ಕೆ ಏನಾದರೂ ಕೊಡುಗೆ ಸಿಗುವಂತಾಗಬೇಕು ಎಂಬ ಉದ್ದೇಶದಿಂದ ಸಚಿನ್ ಈ ಕಾರ್ಗಿಲ್ ವನ ನಿರ್ಮಾಣದ ಕಡೆ ಗುರಿ ಸಾಧಿಸಿದರು.


ಇಂದು ಈ ಕಾರ್ಗಿಲ್ ವನ ನಿರ್ಮಾಣದ ಉದ್ಘಾಟನೆಗೆ ಸಚಿನ್ ಗೆ ಯಾವ ರಾಜಕಾರಣಿಗಳೂ, ಯಾವ ಅಧಿಕಾರಿಗಳೂ, ಯಾವ ಪೂರ್ವ ಗೃಹ ಪೀಡಿತ ಹಿತಾಸಕ್ತಿ ಗಳೂ ಕಾಣದೆ ಅವರಿಗೆ ಕಂಡದ್ದು ಈ ದೇಶವನ್ನು ರಾತ್ರಿ, ಹಗಲು ತಮ್ಮ ಜೀವದ ಹಂಗು ತೊರೆದು ಗಡಿಯಲ್ಲಿ ಶತ್ರುಗಳೊಂದಿಗೆ ಸೆಣಸಾಡುವ ನಮ್ಮ ಗಡಿಯನ್ನು ಕಾಯುವ ದೇಶದ ನೈಜ ಸೆಲೆಬ್ರಿಟಿ ಗಳಾಗಿರುವ ನಮ್ಮ ಸೈನಿಕರು. 9 ಜನ ಮಿಲಿಟರಿ ಅಧಿಕಾರಿ, ಸೈನಿಕರು ಇಂದು ‘ ಕಾರ್ಗಿಲ್ ವನ ‘ ದ ಲ್ಲಿ ಗಿಡ ಗಳನು ನೆಟ್ಟು ಇದರ ಉದ್ಘಾಟನೆ ಮಾಡಿರುತ್ತಾರೆ.

ಸಚಿನ್ ರವರ ತಾಯಿಯೇ ಸೈನಿಕರಿಗೆ ಗಿಡಗಳನ್ನು ಹಸ್ತಾಂತರಿಸಿರುವುದೂ ಈ ಕಾರ್ಯಕ್ರಮದ ಇನ್ನೊಂದು ವಿಶೇಷ ಮೆರುಗು. ಮನೆಯಲ್ಲಿ ನಮ್ಮ ಹೆತ್ತ ತಾಯಿಯ ಪ್ರತೀ ರೂಪವಾಗಿ ನಮ್ಮನ್ನು ಆರೈಕೆ ಮಾಡುವ ಇನ್ನೊಂದು ತಾಯಿಯೇ ಪ್ರಕೃತಿ ತಾಯಿ. ಬೆಳ್ತಂಗಡಿ ನಿವೃತ್ತ ಸೈನಿಕ ಸಂಘದ ಗೌರವ ಅಧ್ಯಕ್ಷರಾದ ಎಂ. ವೀ. ಭಟ್, ಅಧ್ಯಕ್ಷರಾದ ಕೃಷ್ಣ ಭಟ್, ಗಡಿ ಭದ್ರತಾ ಪಡೆಯ ಸೈನಿಕರಾಗಿ ರುವ ಜಗನ್ನಾಥ್ ಶೆಟ್ಟಿ, ಹರೀಶ್ ರೈ, ರಾಮ್ ಭಟ್, ಸುನಿಲ್ ಶೆಣೈ, ಶ್ರೀಕಾಂತ್ ಗೋರೆ, ಉಮೇಶ್ ಬಂಗೇರ, ಪ್ರಸನ್ನ ಇವರೆಲ್ಲಾ ಗಿಡಗಳನ್ನು ನೆಟ್ಟು ಕಾರ್ಗಿಲ್ ವನದ ಹಸಿರು ಹೊದಿಕೆ ಹಾಸಿರುವರು. ಸಚಿನ್ ರವರು ಯಾವುದೇ ಕಾರಣಕ್ಕೂ ಈ ವನಕ್ಕೆ ತೊಂದರೆ ಆಗದಂತೆ, ಬಾಡಿ ಹೋಗದಂತೆ , ಮಕ್ಕಳಂತೆ ನೋಡಿಕೊಳ್ಳುತ್ತೇನೆ ಎಂದು ಪ್ರತಿಜ್ಞೆ ಮಾಡಿದಾಗ ಸೈನಿಕರು ಕೂಡಾ ವನ ಸಂರಕ್ಷಣೆ ಆಗುವಂತೆ ನಾವು ಕೂಡಾ ವನದ ಸಂಪರ್ಕ ಇಟ್ಟು ಕೊಳ್ಳುವ ಭರವಸೆ ನೀಡಿದ್ದು ಇದು ಒಂದು ರೀತಿಯಲ್ಲಿ ಕಾಡು ಬೆಳವಣಿಗೆಗೆ ಇಟ್ಟ ಧನಾತ್ಮಕ ಪೀಠಿಕೆ. ಅಂತೂ ಸಚಿನ್ ರವರ ಈ ಪ್ರಯತ್ನ ನಿಜಕ್ಕೂ ನಿಸರ್ಗ ಮಾತೆಯ ಹಸಿರು ಹೊದಿಕೆ ಗೆ ಒಂದು ಒಳ್ಳೆಯ ಪ್ರಯತ್ನ ಮತ್ತು ಇನ್ನು 4 ರಿಂದ 5 ವರ್ಷಗಳಲ್ಲಿ ಈ ಗಿಡಗಳು ಬೆಳೆದು ಒಂದು ಸುಂದರ ವನ ಆಗಿ ಈ ದೇಶ ಮತ್ತು ಪ್ರಕೃತಿಗೆ ಒಳ್ಳೆಯ ಕೊಡುಗೆ ಆಗಲಿದೆ. ಇದು ಶ್ಲಾಘನೀಯ ಮತ್ತು ಎಲ್ಲರಿಗೂ ಪ್ರೆರಣೀಯ…ಜೈ ಜವಾನ್ “ಜೈ ಪ್ರಕೃತಿ ಮಾತೆ”

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 26 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 74 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ