ಅಳಿಯುವ ಕಾನನ… ಉಳಿಸುವ ಯಜಮಾನ.. ವನದೇವಿಯ ಪೋಷಣೆಗೆ ನಿಂತ ಪ್ರಕೃತಿ ಪುತ್ರ

🖊️• ದಿನೇಶ್ ಹೊಳ್ಳ ಸಹ್ಯಾದ್ರಿ ಸಂಚಯ (ರಿ)

ವನದೇವಿ ಅಳುತ್ತಿದ್ದಾಳೆ ಯಾಕೆಂದರೆ ಆಳುವ ಅರಸರು ಆಕೆಗೆ ಮಾನಸಿಕ ಹಿಂಸೆ ನೀಡುತ್ತಾ ಆಳುತ್ತಿದ್ದಾರೆ. ಅಡವಿಯ ಒಳಗಿಂದ ‘ ಭದ್ರವಾಗಿದ್ದ ನಾನು ಛಿದ್ರ ವಾಗುತ್ತಿದ್ದೇನೆ ‘ ಎಂಬ ಒಂದು ಕೂಗು ಕೇಳುತ್ತಿದೆ. ವನ ದೇವಿಯ ಈ ರೋದನಕ್ಕೆ ಕಿವಿಯಾಗಿ ತನ್ನ ಸ್ವಂತ ಜಾಗವನ್ನೇ ಅಡವಿಯನ್ನಾಗಿ ಮಾಡಲು ಹೊರಟವರು ನಿಜಕ್ಕೂ ಧನ್ಯರು. ಸಾಮಾನ್ಯವಾಗಿ ಒಂದಿಷ್ಟು ಸ್ವಂತ ಜಾಗ ಇದ್ದರೆ ಅದರಲ್ಲಿ ಹಣ ಮಾಡುವಂತಹ ಬೆಳೆ ಬೆಳೆಸುವ ವ್ಯಾವಹಾರಿಕ ದೃಷ್ಟಿ ಕೋನ ಇಡುವಂತ ಮನಸುಗಳು ಸಾಕಷ್ಟಿರಬಹುದು. ಆದರೆ ತನ್ನ ಸ್ವಂತ ಒಂದು ಎಕರೆ ಗಿಂತಲೂ ಹೆಚ್ಚು ಜಾಗದಲ್ಲಿ ಒಂದು ಸುಂದರವಾದ ಹಸಿರು ವನವನ್ನು ನಿರ್ಮಾಣ ಮಾಡುವ ತನ್ನ ಬಹುಕಾಲದ ವಿಶಿಷ್ಟ ಕನಸನ್ನು ನನಸು ಮಾಡಿ ಸಾಧಿಸಿ ತೋರಿಸಿದವರು ನಮ್ಮ ಆತ್ಮೀಯ ಮಿತ್ರ, ಪ್ರಕೃತಿ ಪುತ್ರ ಬೆಳ್ತಂಗಡಿ ಮುಂಡಾಜೆ ಯ ಸಚಿನ್ ಭಿಡೆ.


ದೇಶ ಸೇವೆ, ಪ್ರಕೃತಿ ಸೇವೆ, ತಾಯಿ ಸೇವೆ ಇವೆಲ್ಲವನ್ನೂ ಒಂದೇ ಚೌಕಟ್ಟಿನ ಒಳಗೆ ಮಾಡಿ ಅದು ನಿರಂತರ ಈ ದೇಶಕ್ಕೆ, ಪ್ರಕೃತಿಗೆ ಕೊಡುಗೆ ನೀಡುವಂತಾಗಬೇಕು ಎಂಬ ಸಚಿನ್ ರವರ ಪರಿಕಲ್ಪನೆಗೆ ಹೊಳೆದಾಗ ಅಭಿವ್ಯಕ್ತ ಗೊಂಡದ್ದು ‘ ಕಾರ್ಗಿಲ್ ವನ ‘ ಎಂಬ ಅಡವಿ ನಿರ್ಮಾಣ. ಕಾರ್ಗಿಲ್ ಹುತಾತ್ಮರ ( ಜೂನ್ 26 ಕಾರ್ಗಿಲ್ ಹುತಾತ್ಮರ ದಿನಾಚರಣೆ ) ಸ್ಮರಣಾರ್ಥ ತನ್ನ ತೋಟದ ಸಮೀಪದಲ್ಲೇ ಇದ್ದ ಜಾಗದಲ್ಲಿ ಕಾರ್ಗಿಲ್ ವನ ಎಂಬ ಕಾನನದ ಕನಸು ಇಂದು ಚಿಗುರೊಡೆದಿದೆ. ಈ ಜಾಗ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದು ಬೆಟ್ಟ ಮೇಲಿನಿಂದ ಕೆಳಗಡೆ ಕಣಿವೆ ಪ್ರದೇಶದಲ್ಲಿ ವರ್ಷ ಪೂರ್ತಿ ನೀರು ಲಭಿಸುವಂತಹ ಗಿಡ, ಮರಗಳ ಬೆಳವಣಿಗೆಗೆ ಪೂರಕವಾದ ಸ್ಥಳ. ಇದರಲ್ಲಿ ಕಮರ್ಷಿಯಲ್ ಬೆಳೆ ಬೆಳೆಸಿ ಸಚಿನ್ ಗೆ ಬೇಕಾದಷ್ಟು ಹಣ ಮಾಡಲು ಸಾಕಷ್ಟು ಅವಕಾಶಗಳು ಇತ್ತು. ಆದರೂ ತನ್ನಿಂದ ಈ ಪ್ರಕೃತಿಗೆ, ಈ ದೇಶಕ್ಕೆ ಏನಾದರೂ ಕೊಡುಗೆ ಸಿಗುವಂತಾಗಬೇಕು ಎಂಬ ಉದ್ದೇಶದಿಂದ ಸಚಿನ್ ಈ ಕಾರ್ಗಿಲ್ ವನ ನಿರ್ಮಾಣದ ಕಡೆ ಗುರಿ ಸಾಧಿಸಿದರು.


ಇಂದು ಈ ಕಾರ್ಗಿಲ್ ವನ ನಿರ್ಮಾಣದ ಉದ್ಘಾಟನೆಗೆ ಸಚಿನ್ ಗೆ ಯಾವ ರಾಜಕಾರಣಿಗಳೂ, ಯಾವ ಅಧಿಕಾರಿಗಳೂ, ಯಾವ ಪೂರ್ವ ಗೃಹ ಪೀಡಿತ ಹಿತಾಸಕ್ತಿ ಗಳೂ ಕಾಣದೆ ಅವರಿಗೆ ಕಂಡದ್ದು ಈ ದೇಶವನ್ನು ರಾತ್ರಿ, ಹಗಲು ತಮ್ಮ ಜೀವದ ಹಂಗು ತೊರೆದು ಗಡಿಯಲ್ಲಿ ಶತ್ರುಗಳೊಂದಿಗೆ ಸೆಣಸಾಡುವ ನಮ್ಮ ಗಡಿಯನ್ನು ಕಾಯುವ ದೇಶದ ನೈಜ ಸೆಲೆಬ್ರಿಟಿ ಗಳಾಗಿರುವ ನಮ್ಮ ಸೈನಿಕರು. 9 ಜನ ಮಿಲಿಟರಿ ಅಧಿಕಾರಿ, ಸೈನಿಕರು ಇಂದು ‘ ಕಾರ್ಗಿಲ್ ವನ ‘ ದ ಲ್ಲಿ ಗಿಡ ಗಳನು ನೆಟ್ಟು ಇದರ ಉದ್ಘಾಟನೆ ಮಾಡಿರುತ್ತಾರೆ.

ಸಚಿನ್ ರವರ ತಾಯಿಯೇ ಸೈನಿಕರಿಗೆ ಗಿಡಗಳನ್ನು ಹಸ್ತಾಂತರಿಸಿರುವುದೂ ಈ ಕಾರ್ಯಕ್ರಮದ ಇನ್ನೊಂದು ವಿಶೇಷ ಮೆರುಗು. ಮನೆಯಲ್ಲಿ ನಮ್ಮ ಹೆತ್ತ ತಾಯಿಯ ಪ್ರತೀ ರೂಪವಾಗಿ ನಮ್ಮನ್ನು ಆರೈಕೆ ಮಾಡುವ ಇನ್ನೊಂದು ತಾಯಿಯೇ ಪ್ರಕೃತಿ ತಾಯಿ. ಬೆಳ್ತಂಗಡಿ ನಿವೃತ್ತ ಸೈನಿಕ ಸಂಘದ ಗೌರವ ಅಧ್ಯಕ್ಷರಾದ ಎಂ. ವೀ. ಭಟ್, ಅಧ್ಯಕ್ಷರಾದ ಕೃಷ್ಣ ಭಟ್, ಗಡಿ ಭದ್ರತಾ ಪಡೆಯ ಸೈನಿಕರಾಗಿ ರುವ ಜಗನ್ನಾಥ್ ಶೆಟ್ಟಿ, ಹರೀಶ್ ರೈ, ರಾಮ್ ಭಟ್, ಸುನಿಲ್ ಶೆಣೈ, ಶ್ರೀಕಾಂತ್ ಗೋರೆ, ಉಮೇಶ್ ಬಂಗೇರ, ಪ್ರಸನ್ನ ಇವರೆಲ್ಲಾ ಗಿಡಗಳನ್ನು ನೆಟ್ಟು ಕಾರ್ಗಿಲ್ ವನದ ಹಸಿರು ಹೊದಿಕೆ ಹಾಸಿರುವರು. ಸಚಿನ್ ರವರು ಯಾವುದೇ ಕಾರಣಕ್ಕೂ ಈ ವನಕ್ಕೆ ತೊಂದರೆ ಆಗದಂತೆ, ಬಾಡಿ ಹೋಗದಂತೆ , ಮಕ್ಕಳಂತೆ ನೋಡಿಕೊಳ್ಳುತ್ತೇನೆ ಎಂದು ಪ್ರತಿಜ್ಞೆ ಮಾಡಿದಾಗ ಸೈನಿಕರು ಕೂಡಾ ವನ ಸಂರಕ್ಷಣೆ ಆಗುವಂತೆ ನಾವು ಕೂಡಾ ವನದ ಸಂಪರ್ಕ ಇಟ್ಟು ಕೊಳ್ಳುವ ಭರವಸೆ ನೀಡಿದ್ದು ಇದು ಒಂದು ರೀತಿಯಲ್ಲಿ ಕಾಡು ಬೆಳವಣಿಗೆಗೆ ಇಟ್ಟ ಧನಾತ್ಮಕ ಪೀಠಿಕೆ. ಅಂತೂ ಸಚಿನ್ ರವರ ಈ ಪ್ರಯತ್ನ ನಿಜಕ್ಕೂ ನಿಸರ್ಗ ಮಾತೆಯ ಹಸಿರು ಹೊದಿಕೆ ಗೆ ಒಂದು ಒಳ್ಳೆಯ ಪ್ರಯತ್ನ ಮತ್ತು ಇನ್ನು 4 ರಿಂದ 5 ವರ್ಷಗಳಲ್ಲಿ ಈ ಗಿಡಗಳು ಬೆಳೆದು ಒಂದು ಸುಂದರ ವನ ಆಗಿ ಈ ದೇಶ ಮತ್ತು ಪ್ರಕೃತಿಗೆ ಒಳ್ಳೆಯ ಕೊಡುಗೆ ಆಗಲಿದೆ. ಇದು ಶ್ಲಾಘನೀಯ ಮತ್ತು ಎಲ್ಲರಿಗೂ ಪ್ರೆರಣೀಯ…ಜೈ ಜವಾನ್ “ಜೈ ಪ್ರಕೃತಿ ಮಾತೆ”

Spread the love
  • Related Posts

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ಬೆಳ್ತಂಗಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ (MDMA), ಕಾರು, ಆಟೋ ರಿಕ್ಷಾ ಹಾಗೂ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ…

    Spread the love

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    “ಜೀವ ಉಳಿಸಲು ನಿಮ್ಮ ನೆರವು ಅಗತ್ಯ“ ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟು ನಿವಾಸಿ ವಸಂತ ಗೌಡರವರು 21/07/2026ರಂದು ಬೆಳಿಗ್ಗೆ ಸುಮಾರು 7.30ರ ವೇಳೆಗೆ ಪಡಂಗಡಿ ಸಮೀಪ ಹಾಲು ಹಿಡಿದು ಕೊಂಡು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಜಾರಿ ಬಿದ್ದು ತಲೆಗೆ…

    Spread the love

    You Missed

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 5 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 12 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 10 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 11 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 11 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 13 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!