6 ಸಾವಿರ ಪೊಲೀಸ್‌ ಸಿಬ್ಬಂದಿ ನೇಮಕ, ಪೊಲೀಸರಿಗೆ ಸಕಲ ಸೌಲಭ್ಯ ವ್ಯವಸ್ಥೆ: ಬಸವರಾಜ್‌ ಬೊಮ್ಮಾಯಿ

ಕಾರ್ಕಳ : ರಾಜ್ಯ ಸರಕಾರ 6 ಸಾವಿರ ಪೊಲೀಸ್‌ ಸಿಬ್ಬಂದಿಯನ್ನು ಈ ವರ್ಷ ನೇಮಕ ಮಾಡುತ್ತಿದ್ದು, ನೇಮಕಾತಿ ಸಂಪೂರ್ಣ ಪಾರದರ್ಶಕವಾಗಿ ನಡೆಯಲಿದೆ ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಹೇಳಿದರು. ಶನಿವಾರ ಕಾರ್ಕಳ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿ ಬಳಿಕ ಮಾತನಾಡಿದರು. ಮುಂದಿನ ಮೂರು ವರ್ಷದಲ್ಲಿ 16 ಸಾವಿರ ಪೊಲೀಸರ ನೇಮಕಾತಿಯಾಗಲಿದೆ. ನೇಮಕಾತಿ ವೇಳೆ ಶೇ. 25 ಮಹಿಳೆಯರಿಗೆ ಮತ್ತು ಶೇ. 2 ಕ್ರೀಡಾಪಟುಗಳಿಗೆ ಮೀಸಲಾತಿ ನೀಡಲಾಗುವುದು ಎಂದರು.

ಪೊಲೀಸರಿಗೆ ಸಕಲ ಸೌಲಭ್ಯ
ಪೊಲೀಸರು ಸಮಾಜದ ಸ್ವಾಸ್ಥ್ಯ ಕಾಪಾಡುವವರು ಹಲವಾರು ಸವಾಲು, ಜವಾಬ್ದಾರಿಗಳ ಮಧ್ಯೆ ಕಾರ್ಯನಿರ್ವಹಿಸುತ್ತಿರುವ ಪೊಲೀಸರು ಮತ್ತವರ ಕುಟುಂಬಕ್ಕೆ ಸರಕಾರದಿಂದ ಸಕಲ ಸೌಲಭ್ಯ ಒದಗಿಸುವುದು ನಮ್ಮ ಗುರಿಯಾಗಿದೆ. ಇದರಿಂದ ಪೊಲೀಸರು ಹೆಚ್ಚು ದಕ್ಷತೆ, ಕಾರ್ಯಕ್ಷಮತೆ ಹೊಂದಲು ಸಾಧ್ಯವಾಗಲಿದೆ. ಸರಕಾರ ಈಗಾಗಲೇ 11 ಸಾವಿರ ಪೊಲೀಸ್ ಸಮುಚ್ಚಯ ನಿರ್ಮಾಣ ಮಾಡಿದ್ದು, ಬೇರೆ ರಾಜ್ಯಕ್ಕೆ ಹೋಲಿಕೆ ಮಾಡಿದಲ್ಲಿ ವಸತಿ ನಿರ್ಮಾಣದಲ್ಲಿ ರಾಜ್ಯವೇ ಪ್ರಥಮ ಸ್ಥಾನದಲ್ಲಿದೆ ಎಂದು ಸಚಿವರು ಹೇಳಿದರು.

ಡ್ರಗ್ಸ್‌ ವಿರುದ್ಧ ಸಮರ

ರಾಜ್ಯದ ಪೊಲೀಸ್‌ ವ್ಯವಸ್ಥೆ ಡ್ರಗ್ಸ್‌ ಮಾರಾಟ, ವ್ಯಸನಿಗಳ ಮೇಲೆ ಕಠಿಣ ಕ್ರಮ ಕೈಗೊಂಡಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ನಿರ್ದಾಕ್ಷೀಣ್ಯ, ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿದೆ. ಡ್ರಗ್ಸ್ ಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಮರ ಸಾರಿದ್ದು, ಕರ್ನಾಟಕದಲ್ಲಿ ಕಳೆದ ಹತ್ತು ವರ್ಷದಲ್ಲಿ ಸೀಜ್‌ ಮಾಡಿದಷ್ಟು ಪ್ರಮಾಣದ ಡ್ರಗ್ಸ್ ಅನ್ನು ನಮ್ಮ ಸರಕಾರ ಆಡಳಿತಕ್ಕೆ ಬಂದ 10 ತಿಂಗಳಲ್ಲಿ ಮಾಡಿದೆ. ಸಿಂಥೆಟಿಕ್ ಡ್ರಗ್ ಸಂಪೂರ್ಣ ನಿಯಂತ್ರಣದಲ್ಲಿದ್ದು, ಡಾರ್ಕ್ ವೆಬ್ ಭೇದಿಸಿದ್ದೇವೆ ಎಂದು ಸಚಿವರು ತಿಳಿಸಿದರು.

ಯುವ ಜನತೆ ದುಶ್ಚಟಗಳಿಗೆ ಬಲಿಯಾಗದಂತೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಇಲಾಖೆಯಿಂದ ಜಾಗೃತಿ ಮೂಡಿಸುವ ಕಾರ್ಯವಾಗಲಿದೆ. ಪೊಲೀಸ್‌ ಇಲಾಖೆಯೊಂದಿಗೆ ಆರೋಗ್ಯ, ಶಿಕ್ಷಣ ಇಲಾಖೆ ಕಾರ್ಯದಲ್ಲಿ ಕೈ ಜೋಡಿಸುವ ಮೂಲಕ ಯುವ ಜನತೆ ಮಾದಕ ವ್ಯಸನದಿಂದ ದೂರವುಳಿಯುವಂತೆ ಮಾಡಬೇಕಾಗಿದೆ ಎಂದರು.

ಹೆಬ್ರಿಗೆ ಪೊಲೀಸ್‌ ಠಾಣೆ ಮಂಜೂರು:
ಶಾಸಕ ಸುನಿಲ್‌ ಕುಮಾರ್‌ ಅವರ ಮನವಿ ಮೇರೆಗೆ ಹೆಬ್ರಿಗೆ ಪೊಲೀಸ್‌ ಠಾಣೆ ಮಂಜೂರು ಮಾಡಲಾಗುವುದು. ಹೆಬ್ರಿಯಲ್ಲಿ ಅಗ್ನಿ ಶಾಮಕ ಠಾಣೆ ತೆರೆಯುವ ನಿಟ್ಟಿನಲ್ಲೂ ಪ್ರಯತ್ನಿಸುತ್ತೇನೆ ಎಂದು ಸಚಿವ ಬೊಮ್ಮಾಯಿ ಭರವಸೆ ನೀಡಿದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 61 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ