6 ಸಾವಿರ ಪೊಲೀಸ್‌ ಸಿಬ್ಬಂದಿ ನೇಮಕ, ಪೊಲೀಸರಿಗೆ ಸಕಲ ಸೌಲಭ್ಯ ವ್ಯವಸ್ಥೆ: ಬಸವರಾಜ್‌ ಬೊಮ್ಮಾಯಿ

ಕಾರ್ಕಳ : ರಾಜ್ಯ ಸರಕಾರ 6 ಸಾವಿರ ಪೊಲೀಸ್‌ ಸಿಬ್ಬಂದಿಯನ್ನು ಈ ವರ್ಷ ನೇಮಕ ಮಾಡುತ್ತಿದ್ದು, ನೇಮಕಾತಿ ಸಂಪೂರ್ಣ ಪಾರದರ್ಶಕವಾಗಿ ನಡೆಯಲಿದೆ ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಹೇಳಿದರು. ಶನಿವಾರ ಕಾರ್ಕಳ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿ ಬಳಿಕ ಮಾತನಾಡಿದರು. ಮುಂದಿನ ಮೂರು ವರ್ಷದಲ್ಲಿ 16 ಸಾವಿರ ಪೊಲೀಸರ ನೇಮಕಾತಿಯಾಗಲಿದೆ. ನೇಮಕಾತಿ ವೇಳೆ ಶೇ. 25 ಮಹಿಳೆಯರಿಗೆ ಮತ್ತು ಶೇ. 2 ಕ್ರೀಡಾಪಟುಗಳಿಗೆ ಮೀಸಲಾತಿ ನೀಡಲಾಗುವುದು ಎಂದರು.

ಪೊಲೀಸರಿಗೆ ಸಕಲ ಸೌಲಭ್ಯ
ಪೊಲೀಸರು ಸಮಾಜದ ಸ್ವಾಸ್ಥ್ಯ ಕಾಪಾಡುವವರು ಹಲವಾರು ಸವಾಲು, ಜವಾಬ್ದಾರಿಗಳ ಮಧ್ಯೆ ಕಾರ್ಯನಿರ್ವಹಿಸುತ್ತಿರುವ ಪೊಲೀಸರು ಮತ್ತವರ ಕುಟುಂಬಕ್ಕೆ ಸರಕಾರದಿಂದ ಸಕಲ ಸೌಲಭ್ಯ ಒದಗಿಸುವುದು ನಮ್ಮ ಗುರಿಯಾಗಿದೆ. ಇದರಿಂದ ಪೊಲೀಸರು ಹೆಚ್ಚು ದಕ್ಷತೆ, ಕಾರ್ಯಕ್ಷಮತೆ ಹೊಂದಲು ಸಾಧ್ಯವಾಗಲಿದೆ. ಸರಕಾರ ಈಗಾಗಲೇ 11 ಸಾವಿರ ಪೊಲೀಸ್ ಸಮುಚ್ಚಯ ನಿರ್ಮಾಣ ಮಾಡಿದ್ದು, ಬೇರೆ ರಾಜ್ಯಕ್ಕೆ ಹೋಲಿಕೆ ಮಾಡಿದಲ್ಲಿ ವಸತಿ ನಿರ್ಮಾಣದಲ್ಲಿ ರಾಜ್ಯವೇ ಪ್ರಥಮ ಸ್ಥಾನದಲ್ಲಿದೆ ಎಂದು ಸಚಿವರು ಹೇಳಿದರು.

ಡ್ರಗ್ಸ್‌ ವಿರುದ್ಧ ಸಮರ

ರಾಜ್ಯದ ಪೊಲೀಸ್‌ ವ್ಯವಸ್ಥೆ ಡ್ರಗ್ಸ್‌ ಮಾರಾಟ, ವ್ಯಸನಿಗಳ ಮೇಲೆ ಕಠಿಣ ಕ್ರಮ ಕೈಗೊಂಡಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ನಿರ್ದಾಕ್ಷೀಣ್ಯ, ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿದೆ. ಡ್ರಗ್ಸ್ ಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಮರ ಸಾರಿದ್ದು, ಕರ್ನಾಟಕದಲ್ಲಿ ಕಳೆದ ಹತ್ತು ವರ್ಷದಲ್ಲಿ ಸೀಜ್‌ ಮಾಡಿದಷ್ಟು ಪ್ರಮಾಣದ ಡ್ರಗ್ಸ್ ಅನ್ನು ನಮ್ಮ ಸರಕಾರ ಆಡಳಿತಕ್ಕೆ ಬಂದ 10 ತಿಂಗಳಲ್ಲಿ ಮಾಡಿದೆ. ಸಿಂಥೆಟಿಕ್ ಡ್ರಗ್ ಸಂಪೂರ್ಣ ನಿಯಂತ್ರಣದಲ್ಲಿದ್ದು, ಡಾರ್ಕ್ ವೆಬ್ ಭೇದಿಸಿದ್ದೇವೆ ಎಂದು ಸಚಿವರು ತಿಳಿಸಿದರು.

ಯುವ ಜನತೆ ದುಶ್ಚಟಗಳಿಗೆ ಬಲಿಯಾಗದಂತೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಇಲಾಖೆಯಿಂದ ಜಾಗೃತಿ ಮೂಡಿಸುವ ಕಾರ್ಯವಾಗಲಿದೆ. ಪೊಲೀಸ್‌ ಇಲಾಖೆಯೊಂದಿಗೆ ಆರೋಗ್ಯ, ಶಿಕ್ಷಣ ಇಲಾಖೆ ಕಾರ್ಯದಲ್ಲಿ ಕೈ ಜೋಡಿಸುವ ಮೂಲಕ ಯುವ ಜನತೆ ಮಾದಕ ವ್ಯಸನದಿಂದ ದೂರವುಳಿಯುವಂತೆ ಮಾಡಬೇಕಾಗಿದೆ ಎಂದರು.

ಹೆಬ್ರಿಗೆ ಪೊಲೀಸ್‌ ಠಾಣೆ ಮಂಜೂರು:
ಶಾಸಕ ಸುನಿಲ್‌ ಕುಮಾರ್‌ ಅವರ ಮನವಿ ಮೇರೆಗೆ ಹೆಬ್ರಿಗೆ ಪೊಲೀಸ್‌ ಠಾಣೆ ಮಂಜೂರು ಮಾಡಲಾಗುವುದು. ಹೆಬ್ರಿಯಲ್ಲಿ ಅಗ್ನಿ ಶಾಮಕ ಠಾಣೆ ತೆರೆಯುವ ನಿಟ್ಟಿನಲ್ಲೂ ಪ್ರಯತ್ನಿಸುತ್ತೇನೆ ಎಂದು ಸಚಿವ ಬೊಮ್ಮಾಯಿ ಭರವಸೆ ನೀಡಿದರು.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 8 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ