ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಪಶು ಸಂಜೀವಿನಿ ವಾಹನ ಲೋಕಾರ್ಪಣೆಗೊಳಿಸಿದ ಸಿ.ಎಂ ಬಿ.ಎಸ್.ವೈ

ಬೆಂಗಳೂರು: ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಪಶು ಸಂಜೀವಿನಿ ವಾಹನ ಲೋಕಾರ್ಪಣೆಗೊಂಡಿದೆ. ಜಾನುವಾರುಗಳ ಆರೋಗ್ಯ ರಕ್ಷಣೆಗೆ ಸರ್ಕಾರ ಸಜ್ಜಾಗಿದೆ. ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಲಿದೆ.

ಪಶುಸಂಗೋಪನೆ ಇಲಾಖೆ ರೈತರ ಆದಾಯ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಕೃಷಿಯ ಜೊತೆಗೆ ಪಶುಪಾಲನೆಯಲ್ಲಿ ತೊಡಗಿದವರು ಜಾನುವಾರು ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ಪಶುಸಂಗೋಪನೆ ಇಲಾಖೆಯ 15 ಸುಸಜ್ಜಿತ ಪಶು ಶಸ್ತ್ರಚಿಕಿತ್ಸಾ ವಾಹನ ‘ಪಶು ಸಂಜೀವಿನಿ’ಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಸಿಎಂ, ಪಶು ಸಂಜೀವಿನಿ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರೈತರು ಈ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್, ಈ ಸುಸಜ್ಜಿತವಾದ ಪಶು ಶಸ್ತ್ರಚಿಕಿತ್ಸಾ ವಾಹನ ರೈತರ ಮನೆಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡಲಿದೆ. ಸದ್ಯ 15 ಜಿಲ್ಲೆಗಳಿಗೆ ಪಶು ಸಂಜೀವಿನಿ ನೀಡಲಾಗುತ್ತಿದ್ದು, ಮುಂದಿನ ದಿನದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಈ ಸೇವೆ ವಿಸ್ತರಿಸಲಾಗುವುದು ಎಂದರು.

ಈ ಸೇವೆಗಳನ್ನು ಇಲಾಖೆಯ ಹೆಲ್ಪ್‌ಲೈನ್ ಸೇವೆಗಳಿಗೆ ಲಿಂಕ್ ಮಾಡಿ 24 x 7 ಜಾನುವಾರುಗಳ ರಕ್ಷಣೆ ಮಾಡುವ ಉದ್ದೇಶವಿದೆ ಎಂದರು.

ಯೋಜನೆಯ ಸಮಗ್ರ ವಿವರಅನುದಾನ: 2019-20ನೇ ಸಾಲಿನ ಬಜೆಟ್ ಘೋಷಣೆಯ ರೂ 2.00 ಕೋಟಿ ಅನುದಾನ ಮತ್ತು ಇಲಾಖೆಯ ಇತರ ಅನುದಾನದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಪಶು ಚಿಕಿತ್ಸಾ ವಾಹನದ ( ಆ್ಯಂಬುಲೆನ್ಸ್​) ವಿಶೇಷತೆಗಳು:
🔹 ಸುಸಜ್ಜಿತ ಆ್ಯಂಬುಲೆನ್ಸ್ ವಾಹನದಲ್ಲಿ ಆಧುನಿಕ ಪಶುವೈದ್ಯಕೀಯ ಸೇವೆಗಳಾದ ಶಸ್ತ್ರಚಿಕಿತ್ಸಾ ಘಟಕ, ಪ್ರಯೋಗಶಾಲೆ, ಸ್ಕ್ಯಾನಿಂಗ್ ಉಪಕರಣ ಅಳವಡಿಕೆ. 🔹250 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್. 🔹200 ಕೆ.ಜಿ. ತೂಕ ಸಾಮರ್ಥ್ಯದ ಶಸ್ತ್ರಚಿಕಿತ್ಸಾ ಟೇಬಲ್, ಎ.ಸಿ ವ್ಯವಸ್ಥೆ, ಪಶುವೈದ್ಯರು ಮತ್ತು ಸಿಬ್ಬಂದಿ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ. 🔹ವಾಶ್ ಬೇಸಿನ್, 100 ವ್ಯಾಟ್ ಎಲ್​ಇಡಿ ಲೈಟ್, ಆಮ್ಲಜನಕ ಸಪೋರ್ಟ್ ಸಿಸ್ಟಮ್, ಆಕಸ್ಮಿಕ ಬೆಂಕಿ ಅನಾಹುತ ನಿವಾರಣೆ ವ್ಯವಸ್ಥೆ (fire extinguisher) ಇದೆ. 🔹ಶಸ್ತ್ರಚಿಕಿತ್ಸಾ ಉಪಕರಣಗಳ ಕಿಟ್ (surgical kit), ಮರಣೋತ್ತರ ಪರೀಕ್ಷೆ ಉಪಕರಣಗಳ ಕಿಟ್ (PM kit), 🔹ಪ್ರಸೂತಿ ಕಿಟ್ (dystocia kit) ಮತ್ತು ಇತರ ಉಪಕರಣಗಳನ್ನು ಇಡಲು ಕಪಾಟುಗಳ ವ್ಯವಸ್ಥೆ ಇದೆ.

ಪಶು ಸಂಜೀವಿನಿ ವಾಹನ ಲೋಕಾರ್ಪಣೆ
ರೈತನ ಮನೆ ಬಾಗಿಲಿಗೆ ಪಶು ಆಸ್ಪತ್ರೆ (ಚಿಕಿತ್ಸಾ ವಿವರ) :
ಸಾಮಾನ್ಯವಾಗಿ ಜಾನುವಾರುಗಳಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸುವ ಉದ್ದೇಶ ಹೊಂದಿದೆ.

ವಿಷಪ್ರಾಶನ, ಪ್ರಸವಕ್ಕೆ ಸಂಬಂಧಿಸಿದ ತೊಂದರೆಗಳು, ಹೊಟ್ಟೆ ಉಬ್ಬರ, ಉಸಿರುಗಟ್ಟುವುದಕ್ಕೆ ತುರ್ತು ಚಿಕಿತ್ಸೆ ನಿಡಲಾಗುವುದು.ಅಪಘಾತ, ಮೂಳೆ ಮುರಿತ, ಬೆಬೇಸಿಯೋಸಿನ್, ಆಂಥ್ರಾಕ್ಸ್, ಚಪ್ಪೆರೋಗ, ಗಳಲೇ ರೋಗ, ಹಾಲುಜ್ವರ, ಕೆಚ್ಚಲು ಬಾವು, ವಿವಿಧ ರೋಗೊದ್ರೇಕಗಳು ಹಾಗೂ ಇನ್ನಿತರ ಆರೋಗ್ಯ ಸಮಸ್ಯೆಗಳಿರುವ ಜಾನುವಾರುಗಳನ್ನು ವಾಹನದಲ್ಲಿ ಹಾಕಿಕೊಂಡು ಹೋಗಿ ಚಿಕಿತ್ಸೆ ಪಡೆಯಬಹುದು.ತಜ್ಞ ಪಶುವೈದ್ಯರು ಹಾಗೂ ಸುಸಜ್ಜಿತ ಪಶು ಚಿಕಿತ್ಸಾ ವಾಹನ ರೈತರ ಮನೆ ಬಾಗಿಲಿಗೆ ತೆರಳಿ ದನ, ಎಮ್ಮೆ, ಕುರಿ, ಮೇಕೆ, ಹಾಗೂ ಇನ್ನಿತರ ಜಾನುವಾರುಗಳಿಗೆ ಚಿಕಿತ್ಸೆ ನೀಡಿ ಪ್ರಾಣ ಹಾನಿ ಆಗುವುದನ್ನು ತಡೆಗಟ್ಟಿ ರೈತರಿಗೆ ಎದುರಾಗುವ ಆರ್ಥಿಕ ಸಂಕಷ್ಟವನ್ನು ತಪ್ಪಿಸುವುದು ಇದರ ಗುರಿಯಾಗಿದೆ.

ಜಿಲ್ಲಾದ್ಯಂತ ವಾರದಲ್ಲಿ 1 ದಿನ ಪಶುವೈದ್ಯಕೀಯ ಶಸ್ತ್ರಚಿಕಿತ್ಸಾ ತಜ್ಞರು ಮತ್ತು ಪ್ರಸೂತಿ ತಜ್ಞರು ಚಿಕಿತ್ಸಾ ಶಿಬಿರ ಮತ್ತು ಅನುಪಾಲನಾ ಶಿಬಿರಗಳಲ್ಲಿ ಭಾಗವಹಿಸಿ ಪಶುವೈದ್ಯಕೀಯ ಸೇವೆ ನೀಡಲಿದ್ದಾರೆ.

Spread the love
  • Related Posts

    ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ

    ಬೆಳ್ತಂಗಡಿ: ತಾಲೂಕಿನ ರೇಷ್ಮೆರೋಡ್ ಬಳಿ ಚಲಿಸುತ್ತಿದ್ದ ಕೆ.ಎಸ್‌.ಆರ್.ಟಿ.ಸಿ ಬಸ್ಸಿನಿಂದ ಅಕಸ್ಮಿಕವಾಗಿ ಬಿದ್ದು ಗಾಯಗೊಂಡಿರುವ ವಿದ್ಯಾರ್ಥಿನಿಯರ ಆರೋಗ್ಯವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿ ಕುಟುಂಬ ಸದಸ್ಯರಿಗೆ ಹಾಗೂ ಗಾಯಳು ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬಿದರು. Spread the love

    Spread the love

    ವಿದ್ಯುತ್ ಶಾಕ್ ಮೂಲಕ ಕಾರ್ಮಿಕ ಆತ್ಮಹತ್ಯೆ – ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

    ಬೆಳ್ತಂಗಡಿ: ತಾಲೂಕಿನ ಹೊಸಂಗಡಿ ಗ್ರಾಮದ ಪಾರ್ದೊಟ್ಟು ಪ್ರದೇಶದಲ್ಲಿ ದಾರುಣ ಘಟನೆೊಂದು ನಡೆದಿದ್ದು, ಕೇರಳ ಮೂಲದ ಕಾರ್ಮಿಕನೋರ್ವ ವಿದ್ಯುತ್ ಶಾಕ್ ಮೂಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವ್ಯಕ್ತಿಯನ್ನು ಜೋಸೆಫ್ ತೋಮಸ್ (69) ಎಂದು ಗುರುತಿಸಲಾಗಿದೆ. ಈತ ಕೇರಳದಿಂದ ಬಂದು ಹೊಸಂಗಡಿಯಲ್ಲಿ ಶಾಜು.ಪಿ.ಟಿ ಎಂಬವರ…

    Spread the love

    You Missed

    ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ

    • By admin
    • March 31, 2026
    • 134 views
    ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ

    ವಿದ್ಯುತ್ ಶಾಕ್ ಮೂಲಕ ಕಾರ್ಮಿಕ ಆತ್ಮಹತ್ಯೆ – ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

    • By admin
    • March 31, 2026
    • 29 views
    ವಿದ್ಯುತ್ ಶಾಕ್ ಮೂಲಕ ಕಾರ್ಮಿಕ ಆತ್ಮಹತ್ಯೆ – ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

    ಹಾಸನದ ‘ರುಚಿ ಲೋಕ’: ನೂರಾರು ಕುಟುಂಬಗಳ ಬದುಕಿಗೆ ಬೆಳಕಾದ 76 ಮಳಿಗೆಗಳ ಫುಡ್ ಕೋರ್ಟ್

    • By admin
    • March 31, 2026
    • 43 views
    ಹಾಸನದ ‘ರುಚಿ ಲೋಕ’: ನೂರಾರು ಕುಟುಂಬಗಳ ಬದುಕಿಗೆ ಬೆಳಕಾದ 76 ಮಳಿಗೆಗಳ ಫುಡ್ ಕೋರ್ಟ್

    ಸರಕಾರಿ ಬಸ್ ನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು

    • By admin
    • March 31, 2026
    • 259 views
    ಸರಕಾರಿ ಬಸ್ ನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು

    ಅಂಕುಡೊಂಕು ರಸ್ತೆಗಳಲ್ಲಿ ಕಾಮಗಾರಿ ಮುನ್ನವೇ 100 ವೇಗ ಮಿತಿ ಫಲಕ: ಚಾರ್ಮಾಡಿ ರಸ್ತೆಯಲ್ಲಿ ಸಾರ್ವಜನಿಕರ ಆತಂಕ

    • By admin
    • March 31, 2026
    • 158 views
    ಅಂಕುಡೊಂಕು ರಸ್ತೆಗಳಲ್ಲಿ ಕಾಮಗಾರಿ ಮುನ್ನವೇ 100 ವೇಗ ಮಿತಿ ಫಲಕ: ಚಾರ್ಮಾಡಿ ರಸ್ತೆಯಲ್ಲಿ ಸಾರ್ವಜನಿಕರ ಆತಂಕ

    ಸಕಲೇಶಪುರ ಕುಂಬ್ರಹಳ್ಳಿ ಲೋಲಾಕ್ಷಮ್ಮರಿಗೆ ವಾತ್ಸಲ್ಯ ಯೋಜನೆಡಿಯಲ್ಲಿ ವಾತ್ಸಲ್ಯ ಸೂರು ನಿರ್ಮಾಣ

    • By admin
    • March 30, 2026
    • 115 views
    ಸಕಲೇಶಪುರ ಕುಂಬ್ರಹಳ್ಳಿ ಲೋಲಾಕ್ಷಮ್ಮರಿಗೆ ವಾತ್ಸಲ್ಯ ಯೋಜನೆಡಿಯಲ್ಲಿ ವಾತ್ಸಲ್ಯ ಸೂರು ನಿರ್ಮಾಣ