ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಪಶು ಸಂಜೀವಿನಿ ವಾಹನ ಲೋಕಾರ್ಪಣೆಗೊಳಿಸಿದ ಸಿ.ಎಂ ಬಿ.ಎಸ್.ವೈ

ಬೆಂಗಳೂರು: ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಪಶು ಸಂಜೀವಿನಿ ವಾಹನ ಲೋಕಾರ್ಪಣೆಗೊಂಡಿದೆ. ಜಾನುವಾರುಗಳ ಆರೋಗ್ಯ ರಕ್ಷಣೆಗೆ ಸರ್ಕಾರ ಸಜ್ಜಾಗಿದೆ. ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಲಿದೆ.

ಪಶುಸಂಗೋಪನೆ ಇಲಾಖೆ ರೈತರ ಆದಾಯ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಕೃಷಿಯ ಜೊತೆಗೆ ಪಶುಪಾಲನೆಯಲ್ಲಿ ತೊಡಗಿದವರು ಜಾನುವಾರು ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ಪಶುಸಂಗೋಪನೆ ಇಲಾಖೆಯ 15 ಸುಸಜ್ಜಿತ ಪಶು ಶಸ್ತ್ರಚಿಕಿತ್ಸಾ ವಾಹನ ‘ಪಶು ಸಂಜೀವಿನಿ’ಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಸಿಎಂ, ಪಶು ಸಂಜೀವಿನಿ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರೈತರು ಈ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್, ಈ ಸುಸಜ್ಜಿತವಾದ ಪಶು ಶಸ್ತ್ರಚಿಕಿತ್ಸಾ ವಾಹನ ರೈತರ ಮನೆಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡಲಿದೆ. ಸದ್ಯ 15 ಜಿಲ್ಲೆಗಳಿಗೆ ಪಶು ಸಂಜೀವಿನಿ ನೀಡಲಾಗುತ್ತಿದ್ದು, ಮುಂದಿನ ದಿನದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಈ ಸೇವೆ ವಿಸ್ತರಿಸಲಾಗುವುದು ಎಂದರು.

ಈ ಸೇವೆಗಳನ್ನು ಇಲಾಖೆಯ ಹೆಲ್ಪ್‌ಲೈನ್ ಸೇವೆಗಳಿಗೆ ಲಿಂಕ್ ಮಾಡಿ 24 x 7 ಜಾನುವಾರುಗಳ ರಕ್ಷಣೆ ಮಾಡುವ ಉದ್ದೇಶವಿದೆ ಎಂದರು.

ಯೋಜನೆಯ ಸಮಗ್ರ ವಿವರಅನುದಾನ: 2019-20ನೇ ಸಾಲಿನ ಬಜೆಟ್ ಘೋಷಣೆಯ ರೂ 2.00 ಕೋಟಿ ಅನುದಾನ ಮತ್ತು ಇಲಾಖೆಯ ಇತರ ಅನುದಾನದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಪಶು ಚಿಕಿತ್ಸಾ ವಾಹನದ ( ಆ್ಯಂಬುಲೆನ್ಸ್​) ವಿಶೇಷತೆಗಳು:
🔹 ಸುಸಜ್ಜಿತ ಆ್ಯಂಬುಲೆನ್ಸ್ ವಾಹನದಲ್ಲಿ ಆಧುನಿಕ ಪಶುವೈದ್ಯಕೀಯ ಸೇವೆಗಳಾದ ಶಸ್ತ್ರಚಿಕಿತ್ಸಾ ಘಟಕ, ಪ್ರಯೋಗಶಾಲೆ, ಸ್ಕ್ಯಾನಿಂಗ್ ಉಪಕರಣ ಅಳವಡಿಕೆ. 🔹250 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್. 🔹200 ಕೆ.ಜಿ. ತೂಕ ಸಾಮರ್ಥ್ಯದ ಶಸ್ತ್ರಚಿಕಿತ್ಸಾ ಟೇಬಲ್, ಎ.ಸಿ ವ್ಯವಸ್ಥೆ, ಪಶುವೈದ್ಯರು ಮತ್ತು ಸಿಬ್ಬಂದಿ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ. 🔹ವಾಶ್ ಬೇಸಿನ್, 100 ವ್ಯಾಟ್ ಎಲ್​ಇಡಿ ಲೈಟ್, ಆಮ್ಲಜನಕ ಸಪೋರ್ಟ್ ಸಿಸ್ಟಮ್, ಆಕಸ್ಮಿಕ ಬೆಂಕಿ ಅನಾಹುತ ನಿವಾರಣೆ ವ್ಯವಸ್ಥೆ (fire extinguisher) ಇದೆ. 🔹ಶಸ್ತ್ರಚಿಕಿತ್ಸಾ ಉಪಕರಣಗಳ ಕಿಟ್ (surgical kit), ಮರಣೋತ್ತರ ಪರೀಕ್ಷೆ ಉಪಕರಣಗಳ ಕಿಟ್ (PM kit), 🔹ಪ್ರಸೂತಿ ಕಿಟ್ (dystocia kit) ಮತ್ತು ಇತರ ಉಪಕರಣಗಳನ್ನು ಇಡಲು ಕಪಾಟುಗಳ ವ್ಯವಸ್ಥೆ ಇದೆ.

ಪಶು ಸಂಜೀವಿನಿ ವಾಹನ ಲೋಕಾರ್ಪಣೆ
ರೈತನ ಮನೆ ಬಾಗಿಲಿಗೆ ಪಶು ಆಸ್ಪತ್ರೆ (ಚಿಕಿತ್ಸಾ ವಿವರ) :
ಸಾಮಾನ್ಯವಾಗಿ ಜಾನುವಾರುಗಳಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸುವ ಉದ್ದೇಶ ಹೊಂದಿದೆ.

ವಿಷಪ್ರಾಶನ, ಪ್ರಸವಕ್ಕೆ ಸಂಬಂಧಿಸಿದ ತೊಂದರೆಗಳು, ಹೊಟ್ಟೆ ಉಬ್ಬರ, ಉಸಿರುಗಟ್ಟುವುದಕ್ಕೆ ತುರ್ತು ಚಿಕಿತ್ಸೆ ನಿಡಲಾಗುವುದು.ಅಪಘಾತ, ಮೂಳೆ ಮುರಿತ, ಬೆಬೇಸಿಯೋಸಿನ್, ಆಂಥ್ರಾಕ್ಸ್, ಚಪ್ಪೆರೋಗ, ಗಳಲೇ ರೋಗ, ಹಾಲುಜ್ವರ, ಕೆಚ್ಚಲು ಬಾವು, ವಿವಿಧ ರೋಗೊದ್ರೇಕಗಳು ಹಾಗೂ ಇನ್ನಿತರ ಆರೋಗ್ಯ ಸಮಸ್ಯೆಗಳಿರುವ ಜಾನುವಾರುಗಳನ್ನು ವಾಹನದಲ್ಲಿ ಹಾಕಿಕೊಂಡು ಹೋಗಿ ಚಿಕಿತ್ಸೆ ಪಡೆಯಬಹುದು.ತಜ್ಞ ಪಶುವೈದ್ಯರು ಹಾಗೂ ಸುಸಜ್ಜಿತ ಪಶು ಚಿಕಿತ್ಸಾ ವಾಹನ ರೈತರ ಮನೆ ಬಾಗಿಲಿಗೆ ತೆರಳಿ ದನ, ಎಮ್ಮೆ, ಕುರಿ, ಮೇಕೆ, ಹಾಗೂ ಇನ್ನಿತರ ಜಾನುವಾರುಗಳಿಗೆ ಚಿಕಿತ್ಸೆ ನೀಡಿ ಪ್ರಾಣ ಹಾನಿ ಆಗುವುದನ್ನು ತಡೆಗಟ್ಟಿ ರೈತರಿಗೆ ಎದುರಾಗುವ ಆರ್ಥಿಕ ಸಂಕಷ್ಟವನ್ನು ತಪ್ಪಿಸುವುದು ಇದರ ಗುರಿಯಾಗಿದೆ.

ಜಿಲ್ಲಾದ್ಯಂತ ವಾರದಲ್ಲಿ 1 ದಿನ ಪಶುವೈದ್ಯಕೀಯ ಶಸ್ತ್ರಚಿಕಿತ್ಸಾ ತಜ್ಞರು ಮತ್ತು ಪ್ರಸೂತಿ ತಜ್ಞರು ಚಿಕಿತ್ಸಾ ಶಿಬಿರ ಮತ್ತು ಅನುಪಾಲನಾ ಶಿಬಿರಗಳಲ್ಲಿ ಭಾಗವಹಿಸಿ ಪಶುವೈದ್ಯಕೀಯ ಸೇವೆ ನೀಡಲಿದ್ದಾರೆ.

Spread the love
  • Related Posts

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ(Illegal land allocation) ಬೃಹತ್ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಬಂಧನದ(Arrest) ಭೀತಿ ಎದುರಿಸುತ್ತಿರುವ ಕಂದಾಯ ಮತ್ತು ಭೂಮಾಪನಾ (Survey) ಇಲಾಖೆಯ ನೂರಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾಮೂಹಿಕ ರಜೆ ಮೇಲೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ…

    Spread the love

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ಮಂಗಳೂರು: ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 25) ರಜೆ ಘೋಷಿಸಿ…

    Spread the love

    You Missed

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 6 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 5 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 4 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 6 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 8 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 10 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ