ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಪಶು ಸಂಜೀವಿನಿ ವಾಹನ ಲೋಕಾರ್ಪಣೆಗೊಳಿಸಿದ ಸಿ.ಎಂ ಬಿ.ಎಸ್.ವೈ

ಬೆಂಗಳೂರು: ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಪಶು ಸಂಜೀವಿನಿ ವಾಹನ ಲೋಕಾರ್ಪಣೆಗೊಂಡಿದೆ. ಜಾನುವಾರುಗಳ ಆರೋಗ್ಯ ರಕ್ಷಣೆಗೆ ಸರ್ಕಾರ ಸಜ್ಜಾಗಿದೆ. ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಲಿದೆ.

ಪಶುಸಂಗೋಪನೆ ಇಲಾಖೆ ರೈತರ ಆದಾಯ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಕೃಷಿಯ ಜೊತೆಗೆ ಪಶುಪಾಲನೆಯಲ್ಲಿ ತೊಡಗಿದವರು ಜಾನುವಾರು ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ಪಶುಸಂಗೋಪನೆ ಇಲಾಖೆಯ 15 ಸುಸಜ್ಜಿತ ಪಶು ಶಸ್ತ್ರಚಿಕಿತ್ಸಾ ವಾಹನ ‘ಪಶು ಸಂಜೀವಿನಿ’ಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಸಿಎಂ, ಪಶು ಸಂಜೀವಿನಿ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರೈತರು ಈ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್, ಈ ಸುಸಜ್ಜಿತವಾದ ಪಶು ಶಸ್ತ್ರಚಿಕಿತ್ಸಾ ವಾಹನ ರೈತರ ಮನೆಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡಲಿದೆ. ಸದ್ಯ 15 ಜಿಲ್ಲೆಗಳಿಗೆ ಪಶು ಸಂಜೀವಿನಿ ನೀಡಲಾಗುತ್ತಿದ್ದು, ಮುಂದಿನ ದಿನದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಈ ಸೇವೆ ವಿಸ್ತರಿಸಲಾಗುವುದು ಎಂದರು.

ಈ ಸೇವೆಗಳನ್ನು ಇಲಾಖೆಯ ಹೆಲ್ಪ್‌ಲೈನ್ ಸೇವೆಗಳಿಗೆ ಲಿಂಕ್ ಮಾಡಿ 24 x 7 ಜಾನುವಾರುಗಳ ರಕ್ಷಣೆ ಮಾಡುವ ಉದ್ದೇಶವಿದೆ ಎಂದರು.

ಯೋಜನೆಯ ಸಮಗ್ರ ವಿವರಅನುದಾನ: 2019-20ನೇ ಸಾಲಿನ ಬಜೆಟ್ ಘೋಷಣೆಯ ರೂ 2.00 ಕೋಟಿ ಅನುದಾನ ಮತ್ತು ಇಲಾಖೆಯ ಇತರ ಅನುದಾನದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಪಶು ಚಿಕಿತ್ಸಾ ವಾಹನದ ( ಆ್ಯಂಬುಲೆನ್ಸ್​) ವಿಶೇಷತೆಗಳು:
🔹 ಸುಸಜ್ಜಿತ ಆ್ಯಂಬುಲೆನ್ಸ್ ವಾಹನದಲ್ಲಿ ಆಧುನಿಕ ಪಶುವೈದ್ಯಕೀಯ ಸೇವೆಗಳಾದ ಶಸ್ತ್ರಚಿಕಿತ್ಸಾ ಘಟಕ, ಪ್ರಯೋಗಶಾಲೆ, ಸ್ಕ್ಯಾನಿಂಗ್ ಉಪಕರಣ ಅಳವಡಿಕೆ. 🔹250 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್. 🔹200 ಕೆ.ಜಿ. ತೂಕ ಸಾಮರ್ಥ್ಯದ ಶಸ್ತ್ರಚಿಕಿತ್ಸಾ ಟೇಬಲ್, ಎ.ಸಿ ವ್ಯವಸ್ಥೆ, ಪಶುವೈದ್ಯರು ಮತ್ತು ಸಿಬ್ಬಂದಿ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ. 🔹ವಾಶ್ ಬೇಸಿನ್, 100 ವ್ಯಾಟ್ ಎಲ್​ಇಡಿ ಲೈಟ್, ಆಮ್ಲಜನಕ ಸಪೋರ್ಟ್ ಸಿಸ್ಟಮ್, ಆಕಸ್ಮಿಕ ಬೆಂಕಿ ಅನಾಹುತ ನಿವಾರಣೆ ವ್ಯವಸ್ಥೆ (fire extinguisher) ಇದೆ. 🔹ಶಸ್ತ್ರಚಿಕಿತ್ಸಾ ಉಪಕರಣಗಳ ಕಿಟ್ (surgical kit), ಮರಣೋತ್ತರ ಪರೀಕ್ಷೆ ಉಪಕರಣಗಳ ಕಿಟ್ (PM kit), 🔹ಪ್ರಸೂತಿ ಕಿಟ್ (dystocia kit) ಮತ್ತು ಇತರ ಉಪಕರಣಗಳನ್ನು ಇಡಲು ಕಪಾಟುಗಳ ವ್ಯವಸ್ಥೆ ಇದೆ.

ಪಶು ಸಂಜೀವಿನಿ ವಾಹನ ಲೋಕಾರ್ಪಣೆ
ರೈತನ ಮನೆ ಬಾಗಿಲಿಗೆ ಪಶು ಆಸ್ಪತ್ರೆ (ಚಿಕಿತ್ಸಾ ವಿವರ) :
ಸಾಮಾನ್ಯವಾಗಿ ಜಾನುವಾರುಗಳಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸುವ ಉದ್ದೇಶ ಹೊಂದಿದೆ.

ವಿಷಪ್ರಾಶನ, ಪ್ರಸವಕ್ಕೆ ಸಂಬಂಧಿಸಿದ ತೊಂದರೆಗಳು, ಹೊಟ್ಟೆ ಉಬ್ಬರ, ಉಸಿರುಗಟ್ಟುವುದಕ್ಕೆ ತುರ್ತು ಚಿಕಿತ್ಸೆ ನಿಡಲಾಗುವುದು.ಅಪಘಾತ, ಮೂಳೆ ಮುರಿತ, ಬೆಬೇಸಿಯೋಸಿನ್, ಆಂಥ್ರಾಕ್ಸ್, ಚಪ್ಪೆರೋಗ, ಗಳಲೇ ರೋಗ, ಹಾಲುಜ್ವರ, ಕೆಚ್ಚಲು ಬಾವು, ವಿವಿಧ ರೋಗೊದ್ರೇಕಗಳು ಹಾಗೂ ಇನ್ನಿತರ ಆರೋಗ್ಯ ಸಮಸ್ಯೆಗಳಿರುವ ಜಾನುವಾರುಗಳನ್ನು ವಾಹನದಲ್ಲಿ ಹಾಕಿಕೊಂಡು ಹೋಗಿ ಚಿಕಿತ್ಸೆ ಪಡೆಯಬಹುದು.ತಜ್ಞ ಪಶುವೈದ್ಯರು ಹಾಗೂ ಸುಸಜ್ಜಿತ ಪಶು ಚಿಕಿತ್ಸಾ ವಾಹನ ರೈತರ ಮನೆ ಬಾಗಿಲಿಗೆ ತೆರಳಿ ದನ, ಎಮ್ಮೆ, ಕುರಿ, ಮೇಕೆ, ಹಾಗೂ ಇನ್ನಿತರ ಜಾನುವಾರುಗಳಿಗೆ ಚಿಕಿತ್ಸೆ ನೀಡಿ ಪ್ರಾಣ ಹಾನಿ ಆಗುವುದನ್ನು ತಡೆಗಟ್ಟಿ ರೈತರಿಗೆ ಎದುರಾಗುವ ಆರ್ಥಿಕ ಸಂಕಷ್ಟವನ್ನು ತಪ್ಪಿಸುವುದು ಇದರ ಗುರಿಯಾಗಿದೆ.

ಜಿಲ್ಲಾದ್ಯಂತ ವಾರದಲ್ಲಿ 1 ದಿನ ಪಶುವೈದ್ಯಕೀಯ ಶಸ್ತ್ರಚಿಕಿತ್ಸಾ ತಜ್ಞರು ಮತ್ತು ಪ್ರಸೂತಿ ತಜ್ಞರು ಚಿಕಿತ್ಸಾ ಶಿಬಿರ ಮತ್ತು ಅನುಪಾಲನಾ ಶಿಬಿರಗಳಲ್ಲಿ ಭಾಗವಹಿಸಿ ಪಶುವೈದ್ಯಕೀಯ ಸೇವೆ ನೀಡಲಿದ್ದಾರೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 8 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 9 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 6 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ