ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಪಶು ಸಂಜೀವಿನಿ ವಾಹನ ಲೋಕಾರ್ಪಣೆಗೊಳಿಸಿದ ಸಿ.ಎಂ ಬಿ.ಎಸ್.ವೈ

ಬೆಂಗಳೂರು: ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಪಶು ಸಂಜೀವಿನಿ ವಾಹನ ಲೋಕಾರ್ಪಣೆಗೊಂಡಿದೆ. ಜಾನುವಾರುಗಳ ಆರೋಗ್ಯ ರಕ್ಷಣೆಗೆ ಸರ್ಕಾರ ಸಜ್ಜಾಗಿದೆ. ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಲಿದೆ.

ಪಶುಸಂಗೋಪನೆ ಇಲಾಖೆ ರೈತರ ಆದಾಯ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಕೃಷಿಯ ಜೊತೆಗೆ ಪಶುಪಾಲನೆಯಲ್ಲಿ ತೊಡಗಿದವರು ಜಾನುವಾರು ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ಪಶುಸಂಗೋಪನೆ ಇಲಾಖೆಯ 15 ಸುಸಜ್ಜಿತ ಪಶು ಶಸ್ತ್ರಚಿಕಿತ್ಸಾ ವಾಹನ ‘ಪಶು ಸಂಜೀವಿನಿ’ಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಸಿಎಂ, ಪಶು ಸಂಜೀವಿನಿ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರೈತರು ಈ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್, ಈ ಸುಸಜ್ಜಿತವಾದ ಪಶು ಶಸ್ತ್ರಚಿಕಿತ್ಸಾ ವಾಹನ ರೈತರ ಮನೆಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡಲಿದೆ. ಸದ್ಯ 15 ಜಿಲ್ಲೆಗಳಿಗೆ ಪಶು ಸಂಜೀವಿನಿ ನೀಡಲಾಗುತ್ತಿದ್ದು, ಮುಂದಿನ ದಿನದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಈ ಸೇವೆ ವಿಸ್ತರಿಸಲಾಗುವುದು ಎಂದರು.

ಈ ಸೇವೆಗಳನ್ನು ಇಲಾಖೆಯ ಹೆಲ್ಪ್‌ಲೈನ್ ಸೇವೆಗಳಿಗೆ ಲಿಂಕ್ ಮಾಡಿ 24 x 7 ಜಾನುವಾರುಗಳ ರಕ್ಷಣೆ ಮಾಡುವ ಉದ್ದೇಶವಿದೆ ಎಂದರು.

ಯೋಜನೆಯ ಸಮಗ್ರ ವಿವರಅನುದಾನ: 2019-20ನೇ ಸಾಲಿನ ಬಜೆಟ್ ಘೋಷಣೆಯ ರೂ 2.00 ಕೋಟಿ ಅನುದಾನ ಮತ್ತು ಇಲಾಖೆಯ ಇತರ ಅನುದಾನದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಪಶು ಚಿಕಿತ್ಸಾ ವಾಹನದ ( ಆ್ಯಂಬುಲೆನ್ಸ್​) ವಿಶೇಷತೆಗಳು:
🔹 ಸುಸಜ್ಜಿತ ಆ್ಯಂಬುಲೆನ್ಸ್ ವಾಹನದಲ್ಲಿ ಆಧುನಿಕ ಪಶುವೈದ್ಯಕೀಯ ಸೇವೆಗಳಾದ ಶಸ್ತ್ರಚಿಕಿತ್ಸಾ ಘಟಕ, ಪ್ರಯೋಗಶಾಲೆ, ಸ್ಕ್ಯಾನಿಂಗ್ ಉಪಕರಣ ಅಳವಡಿಕೆ. 🔹250 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್. 🔹200 ಕೆ.ಜಿ. ತೂಕ ಸಾಮರ್ಥ್ಯದ ಶಸ್ತ್ರಚಿಕಿತ್ಸಾ ಟೇಬಲ್, ಎ.ಸಿ ವ್ಯವಸ್ಥೆ, ಪಶುವೈದ್ಯರು ಮತ್ತು ಸಿಬ್ಬಂದಿ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ. 🔹ವಾಶ್ ಬೇಸಿನ್, 100 ವ್ಯಾಟ್ ಎಲ್​ಇಡಿ ಲೈಟ್, ಆಮ್ಲಜನಕ ಸಪೋರ್ಟ್ ಸಿಸ್ಟಮ್, ಆಕಸ್ಮಿಕ ಬೆಂಕಿ ಅನಾಹುತ ನಿವಾರಣೆ ವ್ಯವಸ್ಥೆ (fire extinguisher) ಇದೆ. 🔹ಶಸ್ತ್ರಚಿಕಿತ್ಸಾ ಉಪಕರಣಗಳ ಕಿಟ್ (surgical kit), ಮರಣೋತ್ತರ ಪರೀಕ್ಷೆ ಉಪಕರಣಗಳ ಕಿಟ್ (PM kit), 🔹ಪ್ರಸೂತಿ ಕಿಟ್ (dystocia kit) ಮತ್ತು ಇತರ ಉಪಕರಣಗಳನ್ನು ಇಡಲು ಕಪಾಟುಗಳ ವ್ಯವಸ್ಥೆ ಇದೆ.

ಪಶು ಸಂಜೀವಿನಿ ವಾಹನ ಲೋಕಾರ್ಪಣೆ
ರೈತನ ಮನೆ ಬಾಗಿಲಿಗೆ ಪಶು ಆಸ್ಪತ್ರೆ (ಚಿಕಿತ್ಸಾ ವಿವರ) :
ಸಾಮಾನ್ಯವಾಗಿ ಜಾನುವಾರುಗಳಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸುವ ಉದ್ದೇಶ ಹೊಂದಿದೆ.

ವಿಷಪ್ರಾಶನ, ಪ್ರಸವಕ್ಕೆ ಸಂಬಂಧಿಸಿದ ತೊಂದರೆಗಳು, ಹೊಟ್ಟೆ ಉಬ್ಬರ, ಉಸಿರುಗಟ್ಟುವುದಕ್ಕೆ ತುರ್ತು ಚಿಕಿತ್ಸೆ ನಿಡಲಾಗುವುದು.ಅಪಘಾತ, ಮೂಳೆ ಮುರಿತ, ಬೆಬೇಸಿಯೋಸಿನ್, ಆಂಥ್ರಾಕ್ಸ್, ಚಪ್ಪೆರೋಗ, ಗಳಲೇ ರೋಗ, ಹಾಲುಜ್ವರ, ಕೆಚ್ಚಲು ಬಾವು, ವಿವಿಧ ರೋಗೊದ್ರೇಕಗಳು ಹಾಗೂ ಇನ್ನಿತರ ಆರೋಗ್ಯ ಸಮಸ್ಯೆಗಳಿರುವ ಜಾನುವಾರುಗಳನ್ನು ವಾಹನದಲ್ಲಿ ಹಾಕಿಕೊಂಡು ಹೋಗಿ ಚಿಕಿತ್ಸೆ ಪಡೆಯಬಹುದು.ತಜ್ಞ ಪಶುವೈದ್ಯರು ಹಾಗೂ ಸುಸಜ್ಜಿತ ಪಶು ಚಿಕಿತ್ಸಾ ವಾಹನ ರೈತರ ಮನೆ ಬಾಗಿಲಿಗೆ ತೆರಳಿ ದನ, ಎಮ್ಮೆ, ಕುರಿ, ಮೇಕೆ, ಹಾಗೂ ಇನ್ನಿತರ ಜಾನುವಾರುಗಳಿಗೆ ಚಿಕಿತ್ಸೆ ನೀಡಿ ಪ್ರಾಣ ಹಾನಿ ಆಗುವುದನ್ನು ತಡೆಗಟ್ಟಿ ರೈತರಿಗೆ ಎದುರಾಗುವ ಆರ್ಥಿಕ ಸಂಕಷ್ಟವನ್ನು ತಪ್ಪಿಸುವುದು ಇದರ ಗುರಿಯಾಗಿದೆ.

ಜಿಲ್ಲಾದ್ಯಂತ ವಾರದಲ್ಲಿ 1 ದಿನ ಪಶುವೈದ್ಯಕೀಯ ಶಸ್ತ್ರಚಿಕಿತ್ಸಾ ತಜ್ಞರು ಮತ್ತು ಪ್ರಸೂತಿ ತಜ್ಞರು ಚಿಕಿತ್ಸಾ ಶಿಬಿರ ಮತ್ತು ಅನುಪಾಲನಾ ಶಿಬಿರಗಳಲ್ಲಿ ಭಾಗವಹಿಸಿ ಪಶುವೈದ್ಯಕೀಯ ಸೇವೆ ನೀಡಲಿದ್ದಾರೆ.

Spread the love
  • Related Posts

    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    ಬೆಳ್ತಂಗಡಿ: ಫ್ರೆಂಡ್ಸ್ ವ್ಯಾಟ್ಸಾಪ್ ಗ್ರೂಪ್ ನ 13ವರ್ಷಗಳ ನಂತರ ಮೊದಲ ಬಾರಿಗೆ ಸ್ನೇಹಿತರನ್ನೆಲ್ಲ ಒಗ್ಗೂಡಿಸಿ ಫ್ರೆಂಡ್ಸ್ ಸಮಾಗಮ -2025 ಕಾರ್ಯಕ್ರಮವನ್ನು ತಾಲೂಕಿನ ಬಲಿಪ ರೆಸಾರ್ಟ್ ನಲ್ಲಿ ನಡೆಸಲಾಯಿತು. 2013ರಲ್ಲಿ ಪ್ರಾರಂಭಗೊಂಡ ಈ ಗ್ರೂಫ್ ನಲ್ಲಿ ವಕೀಲರು, ಉಪನ್ಯಾಸಕರು, ಇಲಾಖಾ ಅಧಿಕಾರಿಗಳು, ಪ್ರಗತಿಪರ…

    Spread the love

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    You Missed

    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    • By admin
    • December 15, 2025
    • 211 views
    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 73 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 28 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 50 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 73 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 41 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ